ಕಪಿಲ್‌ ಸಿಬಲ್ - ಸೌರವ್ ದಾಸ್ 
ದೇಶ

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ. ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!

ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್‌ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ.

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ ಸಿಜೆಪಿಗೆ ಕಾನೂನು ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್‌ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ ಎಂದು ಕಬಿಲ್ ಸಿಬಲ್ ಅವರು ತಿಳಿಸಿದ್ದಾರೆ.

ಇಂದು ಸಿಜೆಪಿ ವಕ್ತಾರ ಸೌರವ್ ದಾಸ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಪಿಲ್ ಸಿಬಲ್ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದನ್ನು ತಡೆಯಲು ಮತ್ತು ಅವರಿಗೆ ಅಗತ್ಯ ಕಾನೂನು ನೆರವು ನೀಡುವುದಾಗಿ ಹೇಳಿದ್ದಾರೆ.

ಪ್ರತಿಭಟನಾಕಾರರ ಮೇಲೆ ಎಲ್ಲಿ, ಏನು ಕ್ರಮ ಜರುಗಿಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಸಿಜೆಪಿ ಒಂದು ಬಲವಾದ ಚೌಕಟ್ಟನ್ನು ರೂಪಿಸಲಿದೆ. ಉಚಿತವಾಗಿ ಕಾನೂನು ನೆರವು ನೀಡಲು ಬಯಸುವ ವಕೀಲರು ತಮ್ಮ ಹೆಸರು, ಸ್ಥಳ ಹಾಗೂ ಸಹಾಯದ ವಿವರಗಳನ್ನು ನೋಂದಾಯಿಸಿಕೊಳ್ಳಲು ಪ್ರತ್ಯೇಕ ವೆಬ್‌ಸೈಟ್ ತೆರೆಯಲಾಗುವುದು ಎಂದು ತಿಳಿಸಿದರು.

ಎಲ್ಲೆಲ್ಲಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತದೆಯೋ, ಅಲ್ಲೆಲ್ಲಾ ನಾವು ಅವರ ಪರವಾಗಿ ನಿಲ್ಲುತ್ತೇವೆ. ದೇಶಾದ್ಯಂತ ನಮ್ಮ ವಕೀಲರು ಅವರಿಗೆ ಬೆಂಬಲ ನೀಡಲಿದ್ದಾರೆ. ನಾನು ಈ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದು, ದೇಶದ ಇತರ ವಕೀಲರು ಹಾಗೂ ಸಾರ್ವಜನಿಕರು ಸಹ ದೇಣಿಗೆ ನೀಡಬೇಕಾಗಿ ವಿನಂತಿಸುತ್ತೇನೆ ಎಂದು ಕಪಿಲ್ ಸಿಬಲ್ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಪ್ಪಂದ ಮುರಿದು ನಮ್ ಮೇಲೆ ಕೇಸ್ ಹಾಕ್ತಿದ್ದೀರ, ಮತ್ತೆ ಪ್ರತಿಭಟನೆ ಮಾಡ್ಬೇಕಾ? ಕೇಂದ್ರಕ್ಕೆ CJP ಎಚ್ಚರಿಕೆ

ಧನುಷ್ ಆಯ್ತು... ಈಗ ತನಗಿಂತ 9 ವರ್ಷದ ಕಿರಿಯ India ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್? ಸಿಕ್ಕಿಬಿದ್ದ ನಟಿ, Video!

ಪ್ರತಿಭಟನಾಕಾರರು ಮಹಿಳೆಯರು, ಮಕ್ಕಳನ್ನು 'ಮಾನವ ಗುರಾಣಿ'ಗಳಾಗಿ ಬಳಸಿಕೊಂಡರೇ? ನಟಿ ಪ್ರಿಯಾಂಕಾ ಚೋಪ್ರಾ ತಾಯಿ ಪ್ರಶ್ನೆ; ಪತ್ರಕರ್ತೆಯ ತಿರುಗೇಟು! Video

ಈ ಬಾರಿ ದಸರಾ ಉದ್ಘಾಟನೆ ರೇಸ್‌ನಲ್ಲಿ ಇಬ್ಬರು ಕ್ರಿಕೆಟಿಗರು: ಸಿಎಂ ನಿರ್ಧಾರವೇ ಅಂತಿಮ ಎಂದ ಯತೀಂದ್ರ

ಸ್ಪೀಕರ್ ಮಧ್ಯಸ್ಥಿಕೆ ಬಳಿಕ ಪಕ್ಷಗಳ ಒಪ್ಪಿಗೆ: 'ಪ್ರಶ್ನೆ ಪತ್ರಿಕೆ ಸೋರಿಕೆ ತಡೆ' ಮಸೂದೆ ಕುರಿತು ನಾಳೆ ಲೋಕಸಭೆಯಲ್ಲಿ ಚರ್ಚೆ ಸಾಧ್ಯತೆ!