ಸಂಸತ್ ಅಧಿವೇಶನ 
ದೇಶ

ಕೇಂದ್ರಕ್ಕೆ ಅಗ್ನಿ ಪರೀಕ್ಷೆ: ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಸೂದೆ ಮಂಡನೆ, ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳ ಸಜ್ಜು

ಪ್ರತಿಪಕ್ಷಗಳ ಅಂತಿಮ ಕಾರ್ಯತಂತ್ರವನ್ನು ಸಂಸತ್ ಭವನದಲ್ಲಿ ಸೋಮವಾರ ಬೆಳಿಗ್ಗೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ನಿರ್ಧರಿಸಲಾಗುತ್ತದೆ.

ನವದೆಹಲಿ: ಮುಂಗಾರು ಅಧಿವೇಶನದ ಮೊದಲ ವಾರ ಸಂಪೂರ್ಣ ಗದ್ದಲದಲ್ಲೇ ಕಳೆದ ಬಳಿಕ, ಸೋಮವಾರದಿಂದ ಮತ್ತೆ ಆರಂಭವಾಗಲಿರುವ ಸಂಸತ್ ಕಲಾಪದಲ್ಲಿ ರಾಜಕೀಯ ಕಾವು ಹೆಚ್ಚುವ ಸಾಧ್ಯತೆ ಇದೆ.

ಎರಡು ವರ್ಷಗಳ ಹಿಂದೆ ಜಾರಿಗೊಂಡಿದ್ದ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುವ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ–2026 ಲೋಕಸಭೆಯಲ್ಲಿ ಮಂಡನೆಯಾಗಲಿದ್ದು, ಈ ಕುರಿತು ನಡೆಯುವ ಚರ್ಚೆಯಲ್ಲಿ ಇಂಡಿಯಾ (INDIA) ಮೈತ್ರಿಕೂಟದ ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ಪ್ರತಿಪಕ್ಷ ಮೂಲಗಳು ತಿಳಿಸಿವೆ.

ಸೋಮವಾರ ಲೋಕಸಭೆಯ ಕಾರ್ಯಸೂಚಿಯಲ್ಲಿ ಈ ಮಸೂದೆಯನ್ನು ಕೇಂದ್ರ ಸರ್ಕಾರ ಪಟ್ಟಿ ಮಾಡಿದೆ. ಆದರೆ, ಪ್ರತಿಪಕ್ಷಗಳ ಅಂತಿಮ ಕಾರ್ಯತಂತ್ರವನ್ನು ಸಂಸತ್ ಭವನದಲ್ಲಿ ಸೋಮವಾರ ಬೆಳಿಗ್ಗೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ಹಿರಿಯ ನಾಯಕರೊಬ್ಬರು, "ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಶಿಕ್ಷಣ ಸುಧಾರಣೆಗೆ ಅಡ್ಡಿಯಾಗುತ್ತಿದ್ದಾರೆ ಎಂಬ ಸಂದೇಶ ಜನರಿಗೆ ಹೋಗಬಾರದು ಎಂಬುದು ನಮ್ಮ ಉದ್ದೇಶ. ಆದ್ದರಿಂದ ಮಸೂದೆ ಕುರಿತ ಚರ್ಚೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ" ಎಂದು ತಿಳಿಸಿದ್ದಾರೆ.

ಸಂಸತ್ತಿನ ಉಭಯ ಸದನಗಳಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ಅಂತ್ಯಗೊಂಡರೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯುವ ನಿರೀಕ್ಷೆಯಿದೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ವಿರುದ್ಧ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷ ಆಕ್ರೋಶ

ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಎನ್ನಲಾದ ದೌರ್ಜನ್ಯದ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷ ಸರ್ಕಾರದ ಮೇಲೆ ಒತ್ತಡ ಮುಂದುವರಿಸಲು ತೀರ್ಮಾನಿಸಿದೆ. ಈ ಪ್ರಕರಣಕ್ಕೆ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ಜಂತರ್ ಮಂತರ್ ಘಟನೆ ಕುರಿತು ತುರ್ತು ಚರ್ಚೆಗೆ ಟಿಎಂಸಿ ನೋಟಿಸ್

ಟಿಎಂಸಿ ರಾಜ್ಯಸಭೆ ಉಪನಾಯಕಿ ಸಾಗರಿಕಾ ಘೋಷ್ ಅವರು, ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ "ಅತಿಯಾದ ಬಲಪ್ರಯೋಗ" ನಡೆದಿರುವ ಕುರಿತು ತಕ್ಷಣದ ಚರ್ಚೆ ನಡೆಸುವಂತೆ ರಾಜ್ಯಸಭೆಯ ನಿಯಮ 267ರ ಅಡಿಯಲ್ಲಿ ನೋಟಿಸ್ ಸಲ್ಲಿಸಿದ್ದಾರೆ.

ರಾಮ ಮಂದಿರ ದೇಣಿಗೆ ಕಳ್ಳತನ, ಎಥೆನಾಲ್ ವಿವಾದವೂ ಪ್ರತಿಪಕ್ಷದ ಅಸ್ತ್ರ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಜೊತೆಗೆ, ರಾಮ ಮಂದಿರ ದೇಣಿಗೆ ಕಳ್ಳತನದ ಆರೋಪ ಹಾಗೂ ಎಥೆನಾಲ್ ಮಿಶ್ರಣ (Ethanol Blending) ವಿವಾದ ಕುರಿತಾಗಿಯೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.

ಸೋಮವಾರದ ಲೋಕಸಭೆ ಕಲಾಪದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಿದ್ದುಪಡಿ ಮಸೂದೆ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಇತರ ವಿವಾದಾತ್ಮಕ ವಿಷಯಗಳ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಚರ್ಚೆ ನಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಕ್ರಮ ಪಾರ್ಕಿಂಗ್, ಬಹಿರಂಗ ಮೂತ್ರವಿಸರ್ಜನೆ; 'ಯೆಲ್ಲೋ ಸ್ಪಾಟ್' ಆದ ಶೇಷಾದ್ರಿ ರಸ್ತೆ?

ಪೋಸ್ಟ್ ಡಿಲೀಟ್ ಮಾಡಲ್ಲ, ಜೈ ಜಗನ್ನಾಥ್- ಜೈ ಹಿಂದ್: BJP ಸಂಸದೆ ಪುತ್ರಿ ಖಡಕ್ ಮಾತು; ವೈರಲ್ ಆದ ಬೆನ್ನಲ್ಲೇ Instagram ನಿಷ್ಕ್ರಿಯ!

CWG 2026: ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ದೇಶದಾದ್ಯಂತ ಸಂಭ್ರಮ, ಪ್ರಧಾನಿ ಮೋದಿ ಶ್ಲಾಘನೆ

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video