ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 
ದೇಶ

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!

ಗೃಹ ಖಾತೆಯನ್ನು ಹೊಂದಿರುವ ಫಡ್ನವೀಸ್, ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಇಲಾಖೆಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂಬೈ: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳನ್ನು (FIR) ಹಿಂಪಡೆಯುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗೃಹ ಇಲಾಖೆಗೆ ಸೂಚಿಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಕಳೆದ ವಾರ ಮುಂಬೈ, ಪುಣೆ ಮತ್ತು ನಾಗ್ಪುರದಲ್ಲಿ ಹೆಚ್ಚಿನ ಸಂಖ್ಯೆಯ ಪ್ರತಿಭಟನೆಗಳು ನಡೆದಿದ್ದವು.

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಬೆಂಬಲ ಹಾಗೂ ಜುಲೈ 20 ರಂದು ಸಂಸತ್ ಚಲೋ ವೇಳೆ ಪೊಲೀಸರು ನಡೆಸಿದ ಕ್ರಮದ ವಿರುದ್ಧ ನಡೆಸಲಾದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಗೃಹ ಖಾತೆಯನ್ನು ಹೊಂದಿರುವ ಫಡ್ನವೀಸ್, ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಇಲಾಖೆಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇ ತಿಂಗಳಲ್ಲಿ ನಡೆದ NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅಂದಿನ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಶಿಕ್ಷಣ ವಲಯದಲ್ಲಿ ಸುಧಾರಣೆಗಳನ್ನು ಆಗ್ರಹಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು, ಯುವಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗಳಲ್ಲಿ ಹೆಚ್ಚಿನವು ಜುಲೈ 23-24 ರಂದು ನಡೆದಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ಕುರಿತು ಮಿಮಿಕ್ರಿ, ದಿವಂಗತ ತಾಯಿಗೆ ಅಪಮಾನ: ‘ಅಸಭ್ಯ ಸಂಸ್ಕೃತಿಗೆ ರಾಹುಲ್ ಬೆಂಬಲ’; ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ

ಅಸಹ್ಯಕರವಾಗಿ ಫೋಟೋ ತೆಗೆಯುವವರಿಗೆ ಹೊಡೆಯಿರಿ: ಶರ್ಟ್ ಬಿಚ್ಚಿ ಪಾಪರಾಜಿಗಳ ವಿರುದ್ಧ ಸಲ್ಮಾನ್ ಖಾನ್ ಗರಂ!

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು, 3 ವಿದ್ಯಾರ್ಥಿಗಳ ಸಾವು! Video

ಏಪ್ರಿಲ್-ಆಗಸ್ಟ್ ಅವಧಿಯಲ್ಲಿ ಪ್ರಮುಖ BRICS ಮಾರುಕಟ್ಟೆಗಳಿಗೆ ಭಾರತದ ರಫ್ತು ಶೇ 34ರಷ್ಟು ಏರಿಕೆ; ಚೀನಾಗೆ ಅತಿ ಹೆಚ್ಚು!

ಯಾರನ್ನೂ ಬಿಟ್ಟಿಲ್ಲ ವೈಫಲ್ಯ: "ಆ ದಿನ ನನ್ನ ವೃತ್ತಿ ಜೀವನ ಮುಗಿದೇ ಹೋಗಿತ್ತು ಎಂದುಕೊಂಡಿದ್ದೆ...": ಅಜಿತ್ ದೋವಲ್