ಸಾಂದರ್ಭಿಕ ಚಿತ್ರ 
ದೇಶ

ಸಾಮಾಜಿಕ ಮಾಧ್ಯಮಗಳಿಗೆ ಕಡಿವಾಣ: ಮೆಟಾ, ಎಕ್ಸ್, ಗೂಗಲ್, ಸ್ನ್ಯಾಪ್‌ಚಾಟ್‌ಗೆ ಸಂಸದೀಯ ಸಮಿತಿ ಸಮನ್ಸ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ವಿಷಯಗಳ ಕುರಿತು ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಕ್ರೋಢೀಕರಿಸಲು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ವಿಶೇಷವಾಗಿ ಇನ್‌ಸ್ಟಾಗ್ರಾಮ್ ಅನ್ನು ವ್ಯಾಪಕವಾಗಿ ಬಳಸಿಕೊಂಡ ಕೆಲವು ದಿನಗಳ ನಂತರ ಈ ಸಭೆ ಕರೆಯಲಾಗಿದೆ.

ನವದೆಹಲಿ: ಆಗಸ್ಟ್ 3 ರಂದು ಸಾಮಾಜಿಕ ಮತ್ತು ಡಿಜಿಟಲ್ ವೇದಿಕೆಗಳ ನಿಯಂತ್ರಣದ ಕುರಿತು ಚರ್ಚಿಸಲು ಸಂಸದೀಯ ಸಮಿತಿಯು ಮೆಟಾ, ಗೂಗಲ್, ಎಕ್ಸ್ ಮತ್ತು ಸ್ನ್ಯಾಪ್‌ಚಾಟ್ ಸೇರಿದಂತೆ ಪ್ರಮುಖ ಸಾಮಾಜಿಕ ಮಾಧ್ಯಮ ಕಂಪನಿಗಳ ಪ್ರತಿನಿಧಿಗಳು ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ (MeitY), ಗೃಹ ಸಚಿವಾಲಯದ ಅಧಿಕಾರಿಗಳ ಸಭೆಗೆ ಆಗಮಿಸುವಂತೆ ಸಮನ್ಸ್ ನೀಡಿದೆ.

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ವಿಷಯಗಳ ಕುರಿತು ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಕ್ರೋಢೀಕರಿಸಲು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು, ವಿಶೇಷವಾಗಿ ಇನ್‌ಸ್ಟಾಗ್ರಾಮ್ ಅನ್ನು ವ್ಯಾಪಕವಾಗಿ ಬಳಸಿಕೊಂಡ ಕೆಲವು ದಿನಗಳ ನಂತರ ಈ ಸಭೆ ಕರೆಯಲಾಗಿದೆ.

ಸರ್ಕಾರ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳನ್ನು ಒಪ್ಪಿಕೊಂಡ ನಂತರ ಮತ್ತು ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ 36 ದಿನಗಳ ಸಿಜೆಪಿ ಪ್ರತಿಭಟನೆ ಶನಿವಾರ ಕೊನೆಗೊಂಡಿತು.

ಮಂಗಳವಾರ ಹೊರಡಿಸಲಾದ ನೋಟಿಸ್ ಪ್ರಕಾರ, ಕಾರ್ಯಸೂಚಿಯಲ್ಲಿ"(i) ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, (ii) ಗೃಹ ವ್ಯವಹಾರ ಸಚಿವಾಲಯ; (iii) ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ವೇದಿಕೆಗಳು - ಸ್ನ್ಯಾಪ್‌ಚಾಟ್, ಗೂಗಲ್, ಎಕ್ಸ್ (ಹಿಂದೆ ಟ್ವಿಟರ್), ಮೆಟಾ (ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್) ಪ್ರತಿನಿಧಿಗಳು 'ಸಾಮಾಜಿಕ ಮತ್ತು ಡಿಜಿಟಲ್ ವೇದಿಕೆಗಳು ಮತ್ತು ಅವುಗಳ ನಿಯಂತ್ರಣ' ವಿಷಯದ ಕುರಿತು ವಿವರಣೆ ಒಳಗೊಂಡಿದೆ."

ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಬಳಕೆದಾರರ ಗೌಪ್ಯತೆಯನ್ನು ಹೇಗೆ ರಕ್ಷಿಸುತ್ತಾರೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಅವರ ಕೊಡುಗೆ ಏನು ಎಂಬುದನ್ನು ವಿವರಿಸುವಂತೆ ಸಮಿತಿಯು ಕಂಪನಿಗಳನ್ನು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

"ಆಗಸ್ಟ್ 3, 2026 ರಂದು ಸಂಜೆ 4 ಗಂಟೆಗೆ ಸಭೆಗೆ ಹಾಜರಾಗುವಂತೆ, ನಮ್ಮ ಐಟಿ ಮತ್ತು ಸಂವಹನದ ಸಂಸದೀಯ ಸಮಿತಿಯು ಮೆಟಾ (ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ವಾಟ್ಸಾಪ್), ಎಕ್ಸ್ (ಟ್ವಿಟರ್), ಸ್ನ್ಯಾಪ್‌ಚಾಟ್ ಮತ್ತು ಗೂಗಲ್‌ಗೆ ಸಮನ್ಸ್ ನೀಡಿದೆ" ಎಂದು ದುಬೆ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

ಕಾಕಿನಾಡ ಯುವಕನಿಗೆ ₹1 ಕೋಟಿ ಸಂಬಳದ AI ಉದ್ಯೋಗ: ವಿಶೇಷಚೇತನ ಟೇಲರ್ ಪುತ್ರನಿಗೆ ಬಂಪರ್ ಆಫರ್!

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ: ಕೇಂದ್ರ ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟ ದಿಪ್ಕೆ!

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್‌ 10 ಚರ್ಚಾ ವಿಷಯಗಳಿವು