ವಿಜಯ್, ಡಿಕೆ ಶಿವಕುಮಾರ್ TNIE
ದೇಶ

'ಒಣಗಿಹೋದ ಕುರುವೈ ಭತ್ತ ನೋಡಲು ಡಿ.ಕೆ ಶಿವಕುಮಾರನ್ನೇ ತಮಿಳುನಾಡಿಗೆ ಕರೆ ತನ್ನಿ': ಸಿಎಂ ವಿಜಯ್‌ಗೆ ಡೆಲ್ಟಾ ಜಿಲ್ಲೆಗಳ ರೈತರ ಆಗ್ರಹ!

ಆಗಸ್ಟ್ 3 ರಂದು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ರಾಜ್ಯದ ಅಣೆಕಟ್ಟುಗಳ ವೈಮಾನಿಕ ಸಮೀಕ್ಷೆಗೆ ವ್ಯವಸ್ಥೆ ಮಾಡುತ್ತಿದ್ದಾರೆ.

ಚೆನ್ನೈ: ಒಂದು ಕಡೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರನ್ನು ರಾಜ್ಯಕ್ಕೆ ಆಹ್ವಾನಿಸಿ ಕಾವೇರಿ ನೀರಿನ ವಿಚಾರವಾಗಿ ಮಾತುಕತೆ ನಡೆಸಲು ಪ್ರಯತ್ನ ಮುಂದುವರಿಸಿದ್ದರೆ, ಮತ್ತೊಂದು ಕಡೆ ತಮಿಳುನಾಡಿನ ಕಾವೇರಿ ಡೆಲ್ಟಾ ಜಿಲ್ಲೆಗಳ ಭತ್ತ ಬೆಳೆಯುವ ಪ್ರದೇಶಗಳ ರೈತರು ಇಬ್ಬರೂ ಪರಸ್ಪರ ಭೇಟಿ ನೀಡಬೇಕು ಎಂದು ಗುರುವಾರ ಆಗ್ರಹಿಸಿದ್ದಾರೆ.

ಆಗಸ್ಟ್ 3 ರಂದು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ರಾಜ್ಯದ ಅಣೆಕಟ್ಟುಗಳ ವೈಮಾನಿಕ ಸಮೀಕ್ಷೆಗೆ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಕಾವೇರಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪಿ ಆರ್ ಪಾಂಡಿಯನ್ ಹೇಳಿದ್ದಾರೆ. ಅಲ್ಲದೆ ಡಿಕೆ ಶಿವಕುಮಾರ್ ಅವರು ಸಹ ಡೆಲ್ಟಾ ಜಿಲ್ಲೆಗಳ ಸಮೀಕ್ಷೆಗಾಗಿ ತಮಿಳುನಾಡಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

"ಡಿಕೆ ಶಿವಕುಮಾರ್ ಅವರು ತಮಿಳುನಾಡಿಗೆ ಭೇಟಿ ನೀಡಿ, ಒಣಗಿಹೋದ ನಮ್ಮ ಕುರುವೈ ಭತ್ತದ ಬೆಳೆಗೆ ಆಗಿರುವ ನೈಜ- ಹಾನಿಯನ್ನು ವೈಯಕ್ತಿಕವಾಗಿ ಪರಿಶೀಲಿಸಬೇಕು" ಎಂದು ಪಾಂಡಿಯನ್ ಸುದ್ದಿಗಾರರಿಗೆ ತಿಳಿಸಿದರು.

ಉಭಯ ರಾಜ್ಯಗಳ ಸಿಎಂಗಳ ಸಭೆಗೆ ರೈತರ ವಿರೋಧವನ್ನು ಸಮರ್ಥಿಸಿಕೊಂಡ ಪಾಂಡಿಯನ್ ಅವರು, ನೆರೆಯ ರಾಜ್ಯವು ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮತ್ತೊಂದು ಜಲಾಶಯವನ್ನು ನಿರ್ಮಿಸಲು ಹಿಂಬಾಗಿಲಿನ ಮೂಲಕ ಪ್ರಯತ್ನಿಸುತ್ತಿದೆ. ಇದು ತಮಿಳುನಾಡಿನ ಕೃಷಿ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!