ಪ್ರಧಾನಿ ಮೋದಿ (ಸಂಗ್ರಹ ಚಿತ್ರ) 
ದೇಶ

30 ದಿನ ಜೈಲು ಶಿಕ್ಷೆ ಆದ್ರೆ ಸಿಎಂ, ಪ್ರಧಾನಿ ಹುದ್ದೆ ಕಳೆದುಕೊಳ್ಳಬೇಕೇ?; ಮಹತ್ವದ ಮಸೂದೆ ಪರಿಶೀಲನೆಗೆ ಸಂಸತ್ ಸಮಿತಿಗೆ ಮತ್ತಷ್ಟು ಕಾಲಾವಕಾಶ

ಸಂವಿಧಾನ (130ನೇ ತಿದ್ದುಪಡಿ) ಮಸೂದೆ-2025 ಅನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ ತನ್ನ ವರದಿಯನ್ನು ಚಳಿಗಾಲದ ಅಧಿವೇಶನದ ಕೊನೆಯ ವಾರದ ಮೊದಲ ದಿನದೊಳಗೆ ಸಲ್ಲಿಸಲು ಲೋಕಸಭೆ ಶುಕ್ರವಾರ ನಿರ್ಣಯ ಅಂಗೀಕರಿಸಿತು.

ನವದೆಹಲಿ: ಗಂಭೀರ ಆರೋಪದ ಪ್ರಕರಣದಲ್ಲಿ ಸತತ 30 ದಿನಗಳ ಕಾಲ ಜೈಲಿನಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಹುದ್ದೆಯಿಂದ ತೆರವುಗೊಳಿಸುವ ಮಹತ್ವದ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿಗೆ ವರದಿ ಸಲ್ಲಿಸಲು ಲೋಕಸಭೆ ಮತ್ತಷ್ಟು ಕಾಲಾವಕಾಶ ನೀಡಿದೆ.

ಸಂವಿಧಾನ (130ನೇ ತಿದ್ದುಪಡಿ) ಮಸೂದೆ-2025 ಅನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ ತನ್ನ ವರದಿಯನ್ನು ಚಳಿಗಾಲದ ಅಧಿವೇಶನದ ಕೊನೆಯ ವಾರದ ಮೊದಲ ದಿನದೊಳಗೆ ಸಲ್ಲಿಸಲು ಲೋಕಸಭೆ ಶುಕ್ರವಾರ ನಿರ್ಣಯ ಅಂಗೀಕರಿಸಿತು.

ಸಾಮಾನ್ಯವಾಗಿ ಸಂಸತ್ತಿನ ಚಳಿಗಾಲದ ಅಧಿವೇಶನವು ನವೆಂಬರ್ ಕೊನೆಯ ವಾರದಲ್ಲಿ ಆರಂಭವಾಗಿ ಕ್ರಿಸ್‌ಮಸ್‌ಗೆ ಮುನ್ನ ಮುಕ್ತಾಯಗೊಳ್ಳುತ್ತದೆ.

ಕರಡು ವರದಿ ಅಂಗೀಕಾರ ಮುಂದೂಡಿದ್ದ ಸಮಿತಿ

ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ ಇತ್ತೀಚೆಗೆ ಕರಡು ವರದಿಯನ್ನು ಅಂಗೀಕರಿಸುವ ಪ್ರಕ್ರಿಯೆಯನ್ನು ಮುಂದೂಡಿತ್ತು.

ಸಮಿತಿಯ ಸದಸ್ಯರು ಈ ಮಹತ್ವದ ಮಸೂದೆ ಕುರಿತು ಇನ್ನಷ್ಟು ಸಮಾಲೋಚನೆ ಮತ್ತು ಚರ್ಚೆ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ವರದಿ ಅಂತಿಮಗೊಳಿಸುವ ಕಾರ್ಯವನ್ನು ಮುಂದೂಡಲಾಗಿತ್ತು.

ಮಸೂದೆಯಲ್ಲಿ ಏನಿದೆ?

ಈ ಪ್ರಸ್ತಾವಿತ ಕಾನೂನಿನ ಪ್ರಕಾರ, ಪ್ರಧಾನಿ, ಮುಖ್ಯಮಂತ್ರಿ ಅಥವಾ ಸಚಿವರು ಗಂಭೀರ ಆರೋಪದ ಪ್ರಕರಣದಲ್ಲಿ ಸತತ 30 ದಿನಗಳ ಕಾಲ ಜೈಲಿನಲ್ಲಿದ್ದರೆ ಅವರನ್ನು ಹುದ್ದೆಯಿಂದ ತೆರವುಗೊಳಿಸುವ ಅವಕಾಶ ಕಲ್ಪಿಸುವ ಬಗ್ಗೆ ಕಾನೂನು ರೂಪಿಸುವ ಉದ್ದೇಶವಿದೆ.

ಈ ಮಸೂದೆಗೆ ಸಂಬಂಧಿಸಿದ ಕಾನೂನು, ಸಂವಿಧಾನಾತ್ಮಕ ಹಾಗೂ ಆಡಳಿತಾತ್ಮಕ ಅಂಶಗಳನ್ನು ಜಂಟಿ ಸಂಸದೀಯ ಸಮಿತಿ ಪರಿಶೀಲಿಸುತ್ತಿದ್ದು, ವರದಿ ಸಲ್ಲಿಸಿದ ಬಳಿಕ ಮುಂದಿನ ಹಂತದ ಚರ್ಚೆ ಮತ್ತು ನಿರ್ಧಾರ ಕೈಗೊಳ್ಳಲಾಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ನಾನು ಯಂಗ್ ಹೃತಿಕ್ ರೋಷನ್ ತರಹ ಕಾಣುತ್ತೇನೆ ಅಂತ...': ಕಂಗನಾಗೆ CJP ವಕ್ತಾರ ಸೌರವ್ ದಾಸ್ ತಪರಾಕಿ!

ಕಾವೇರಿ: ಕರ್ನಾಟಕಕ್ಕೆ ಅನ್ಯಾಯಗಳ ಪರಂಪರೆ (ನೇರ ನೋಟ)

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ

'ನಾನು ಫಿಟ್ ಆಗಿರಲಿಲ್ಲ, ನನ್ನ ತೂಕ 100 KG ಆಗಿತ್ತು; ಆದ್ರೆ ಥಾಯ್ಲೆಂಡ್​ ಪ್ರವಾಸ ಎಲ್ಲವನ್ನು ಬದಲಿಸಿತು': ನಟಿ ವಿಸ್ಮಯ ಮೋಹನ್​ಲಾಲ್​