ಮಮತಾ ಬ್ಯಾನರ್ಜಿ 
ದೇಶ

ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಟಿಎಂಸಿ ಶಾಸಕರನ್ನು ಉಚ್ಚಾಟಿಸಿದ ಮಮತಾ

'ನಕಲಿ ಸಹಿ' ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ದೂರುಗಳನ್ನು ದಾಖಲಿಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಕೆಲವೇ ನಿಮಿಷಗಳಲ್ಲಿ ಈ ಉಚ್ಚಾಟನೆ ಆದೇಶ ಹೊರಬಿದ್ದಿದೆ.

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಸೋಮವಾರ ತನ್ನ ಇಬ್ಬರು ಶಾಸಕರಾದ ಸಂದೀಪನ್ ಸಹಾ ಮತ್ತು ಋತಬ್ರತ ಬ್ಯಾನರ್ಜಿ ಅವರನ್ನು ಪಕ್ಷ ವಿರೋಧಿ ಚಟುವಟಿ ನಡೆಸಿದ ಆರೋಪದ ಮೇಲೆ ಉಚ್ಚಾಟಿಸಿದೆ.

ರಾಜ್ಯ ವಿಧಾನಸಭೆಯಲ್ಲಿ 'ನಕಲಿ ಸಹಿ' ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ದೂರುಗಳನ್ನು ದಾಖಲಿಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಕೆಲವೇ ನಿಮಿಷಗಳಲ್ಲಿ ಈ ಉಚ್ಚಾಟನೆ ಆದೇಶ ಹೊರಬಿದ್ದಿದೆ.

ರಾಜ್ಯ ವಿಧಾನಸಭೆಯಲ್ಲಿ ಸೋಭಂದೇಬ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಟಿಎಂಸಿ ಅನುಮೋದಿಸಿದೆ.

ಉಚ್ಚಾಟನೆಯ ಹಿಂದಿನ ಕಾರಣಗಳು

"ಪಕ್ಷದ ಅಧಿಕೃತ ನಾಯಕತ್ವ ಕರೆದ ಸಭೆಗಳಿಗೆ ನೀವು ಪದೇ ಪದೇ ಹಾಜರಾಗಲು ವಿಫಲರಾಗಿದ್ದೀರಿ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಿ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ತನ್ನ ಸಕ್ಷಮ ಪ್ರಾಧಿಕಾರದ ಮೂಲಕ ಗಮನಕ್ಕೆ ತರಲಾಗಿದೆ" ಎಂದು ಇಬ್ಬರು ಶಾಸಕರಿಗೆ ತಿಳಿಸಲಾಗಿದೆ.

"ನೀವು AITC ಯ ಹಿತಾಸಕ್ತಿಗಳಿಗೆ ಹಾನಿಕರವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೀರಿ ಮತ್ತು ಹೇಳಿಕೆಗಳನ್ನು ನೀಡಿದ್ದೀರಿ ಎಂದು ಗಮನಿಸಲಾಗಿದೆ. ಹೀಗಾಗಿ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲು ನಿರ್ಧರಿಸಲಾಗಿದೆ" ಎಂದು ಪಕ್ಷದ ಉಪಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ಅವರು ಸಹಿ ಮಾಡಿದ ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಝೀರೋ ಟ್ರಾಫಿಕ್ ಎಫೆಕ್ಟ್: ಕಾರಿನಲ್ಲಿ ಸಿಲುಕಿದ್ದ ಗರ್ಭಿಣಿ ಮಹಿಳೆ, ರಸ್ತೆಯಲ್ಲೇ ಪತಿ ಪ್ರತಿಭಟನೆ, ತನಿಖೆಗೆ ಆದೇಶ

ಕಲಬುರಗಿ: ಎಮ್ಮೆ ಕರೆತರಲು ಹೋಗಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವು, ಅಸಹಾಯಕನಾಗಿ ವಿಡಿಯೋ ಮಾಡುತ್ತ ನಿಂತ ಮಗ!

ಅಹಮದಾಬಾದ್‌ನಲ್ಲಿ IPL ಫೈನಲ್: RCBಗೆ ಮಾತ್ರವಲ್ಲ, ಬೆಂಗಳೂರು, ರಾಜ್ಯದ ಯುವ ಜನತೆಗೆ ಮಾಡಿದ ಅನ್ಯಾಯ; ಡಿ.ಕೆ ಶಿವಕುಮಾರ್; Video

'ಪಿಕ್ ಪಾಕೆಟ್' ಬಗ್ಗೆ ಎಚ್ಚರದಿಂದಿರಿ; CBSE ಒಳಗೆ ಕುಳಿತಿದ್ದಾರೆ: ರಾಹುಲ್ ಗಾಂಧಿ ಲೇವಡಿ

IPL 2026 Final: ನರೇಂದ್ರ ಮೋದಿ ಮೈದಾನದಲ್ಲಿ ಹೈಡ್ರಾಮಾ, Virat Kohli-Shubman Gill ಜಟಾಪಟಿ, ಆಗಿದ್ದೇನು?

SCROLL FOR NEXT