ವೇದಾಂತ ರಿಸೋರ್ಸಸ್ ಲಿಮಿಟೆಡ್ ಅಧ್ಯಕ್ಷ ಅನಿಲ್ ಅಗರ್ವಾಲ್ 
ದೇಶ

FEMA ನಿಯಮ ಉಲ್ಲಂಘನೆ ಆರೋಪ: ವೇದಾಂತಾ ಗ್ರೂಪ್‌ಗೆ ED ಶಾಕ್‌; ದೆಹಲಿ-ರಾಜಸ್ಥಾನ ಕಚೇರಿಗಳ ಮೇಲೆ ದಾಳಿ..!

FEMA ಕಾಯ್ದೆಯ ನಾಗರಿಕ (civil) ವಿಧಿಗಳ ಅಡಿಯಲ್ಲಿ ಸಂಭವಿಸಿರುವ ಅಕ್ರಮಗಳ ಕುರಿತು ಇಡಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವೇದಾಂತಾ ಗ್ರೂಪ್‌ಗೆ ಸಂಬಂಧಿಸಿದ ವಿವಿಧ ಕಚೇರಿಗಳ ಮೇಲೆ ದಾಳಿ ಮೇಲೆ ಸೋಮವಾರ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ದೆಹಲಿ ಹಾಗೂ ರಾಜಸ್ಥಾನ ಸೇರಿ ಹಲವು ಕಚೇರಿಗಳ ಮೇಲೆ ಈ ದಾಳಿ ನಡೆದಿದ್ದು, ಉದ್ಯಮಿ ಅನಿಲ್ ಅಗರ್ವಾಲ್ ಪ್ರೋತ್ಸಾಹಿತ ಜಾಗತಿಕ ಗಣಿಗಾರಿಕಾ ಸಮೂಹದ ವಿರುದ್ಧ ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಸಂಬಂಧ ತನಿಖೆ ಆರಂಭಿಸಿದೆ ಎಂದು ತಿಳಿದುಬಂದಿದೆ.

FEMA ಕಾಯ್ದೆಯ ನಾಗರಿಕ (civil) ವಿಧಿಗಳ ಅಡಿಯಲ್ಲಿ ಸಂಭವಿಸಿರುವ ಅಕ್ರಮಗಳ ಕುರಿತು ಇಡಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆಂದು ತಿಳಿದುಬಂದಿದೆ.

ಇಡಿ ಕ್ರಮವನ್ನು ದೃಢಪಡಿಸಿದ ವೇದಾಂತಾ ಸಂಸ್ಥೆಯ ವಕ್ತಾರರು, “ಕಂಪನಿ ತನಿಖಾ ಸಂಸ್ಥೆಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಅಧಿಕಾರಿಗಳು ಕೇಳಿರುವ ಎಲ್ಲಾ ಮಾಹಿತಿಯನ್ನು ಒದಗಿಸಲಾಗುತ್ತಿದೆ,” ಎಂದು ತಿಳಿಸಿದ್ದಾರೆ.

ಕಂಪನಿ ಎಲ್ಲಾ ಕಾನೂನುಗಳು ಮತ್ತು ನಿಯಮಾವಳಿಗಳನ್ನು ಪಾಲಿಸುವ ಬದ್ಧತೆಯನ್ನು ಮುಂದುವರಿಸಿದೆ. ಪ್ರಕರಣ ಈಗ ನಿಯಂತ್ರಣಾತ್ಮಕ ಪ್ರಕ್ರಿಯೆಯಲ್ಲಿರುವುದರಿಂದ ಈ ಹಂತದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವೇದಾಂತಾ ಲಿಮಿಟೆಡ್ ಭಾರತ ಸೇರಿದಂತೆ ಆಫ್ರಿಕಾ, ಮಧ್ಯಪ್ರಾಚ್ಯ ಮತ್ತು ಪೂರ್ವ ಏಷ್ಯಾದ ಹಲವು ದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಪ್ರಮುಖ ಲೋಹ ಹಾಗೂ ಖನಿಜ ಉತ್ಪಾದನಾ ಕಂಪನಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP, ವಿದ್ಯಾರ್ಥಿಗಳ ಪ್ರತಿಭಟನೆ: 2 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲ?

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ; ಭಾರತೀಯ ನಾವಿಕ ಬಲಿ, ಭಾರತ ತೀವ್ರ ಖಂಡನೆ..!

26 ದಿನ ಉಪವಾಸ ಮಾಡಿದ್ದೇನೆ... ಇನ್ನೂ ನನ್ನ ಪ್ರಾಮಾಣಿಕತೆಗೆ ಸಾಕ್ಷಿ ಬೇಕೇ?; ಟೀಕಾಕಾರರಿಗೆ ಸೋನಂ ವಾಂಗ್ಚುಕ್ ತಿರುಗೇಟು

Mahadayi ಯೋಜನೆಗೆ ಮತ್ತೆ ಹಿನ್ನಡೆ: ಸುಪ್ರೀಂ ಕೋರ್ಟ್ ಕೇಸ್ ನೆಪವೊಡ್ಡಿ ಪ್ರಸ್ತಾವನೆ ವಾಪಸ್ ಕಳುಹಿಸಿದ ಕೇಂದ್ರ ಸರ್ಕಾರ..!

Instagramನಲ್ಲಿ 30 ಕೋಟಿ ವೀಕ್ಷಣೆ ದಾಟಿದ Video: ನಿಮ್ಮ ಪ್ರೀತಿ-ಸಲಹೆಗಳು ಹೀಗೆ ಮುಂದುವರಿಯಲಿ; ಯುವ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ