ಸುಕೇಶ್ ಚಂದ್ರಶೇಖರ್ ಮತ್ತು ನಟಿ ಜಾಕ್ವೆಲಿನ್ ಫರ್ನಾಂಡಿಸ್ 
ದೇಶ

200 ಕೋ ರೂ.ಸುಲಿಗೆ ಪ್ರಕರಣ: ಜಾಕ್ವೆಲಿನ್, ಸುಖೇಶ್ ವಿರುದ್ಧ ಚಾರ್ಜ್ ಶೀಟ್ ದಾಖಲು; 'ರಾರಾ ರಕ್ಕಮ್'ಗೆ ಸಂಕಷ್ಟ!

ಮೇ 30 ರಂದು, ಜಾಕ್ವೆಲಿನ್ ಫರ್ನಾಂಡಿಸ್, ಕಿಂಗ್‌ಪಿನ್ ಸುಕೇಶ್ ಚಂದ್ರಶೇಖರ್ ಸೇರಿದಂತೆ ಒಟ್ಟು 17 ಜನರ ವಿರುದ್ಧ ಶಾರ್ಜ್​ಶೀಟ್​ ದಾಖಲಿಸಲು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಆದೇಶ ಹೊರಡಿಸಿತ್ತು.

ನವದೆಹಲಿ: 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 'ರಾರಾ ರಕ್ಕಮ್ಮ' ಖ್ಯಾತಿಯ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಈಗ ಕಾನೂನಿನ ಸಂಕೋಲೆ ಮತ್ತಷ್ಟು ಬಿಗಿಯಾಗಿದೆ.

ದೆಹಲಿ ನ್ಯಾಯಾಲಯವು ಬುಧವಾರ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ಬಹು ಕೋಟಿ ವಂಚಕ ಸುಖೇಶ್ ಚಂದ್ರಶೇಖರ್ ಮತ್ತು ಇತರ 15 ಜನರ ವಿರುದ್ಧ 200 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅಧಿಕೃತವಾಗಿ ಚಾರ್ಜ್ ಶೀಟ್ ದಾಖಲಿಸಿದೆ.

ದೆಹಲಿ ಪೊಲೀಸರ ವಿಶೇಷ ಘಟಕ ದಾಖಲಿಸಿದ ಪ್ರತ್ಯೇಕ ಪ್ರಕರಣದಲ್ಲಿ, ನ್ಯಾಯಾಲಯವು ಸುಕೇಶ್ ಚಂದ್ರಶೇಖರ್ ಮತ್ತು ಇತರ 20 ಜನರ ವಿರುದ್ಧ ಕಠಿಣ MCOCA ನಿಬಂಧನೆ ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಆರೋಪಗಳನ್ನು ಹೊರಿಸಿದೆ.

ಸುಕೇಶ್ ಚಂದ್ರಶೇಖರ್, ಜಾಕ್ವೆಲಿನ್ ಮತ್ತು ಇತರ ಹಲವರು ಬುಧವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿದ್ದರು.

ಮೇ 30 ರಂದು, ಜಾಕ್ವೆಲಿನ್ ಫರ್ನಾಂಡಿಸ್, ಕಿಂಗ್‌ಪಿನ್ ಸುಕೇಶ್ ಚಂದ್ರಶೇಖರ್ ಸೇರಿದಂತೆ ಒಟ್ಟು 17 ಜನರ ವಿರುದ್ಧ ಶಾರ್ಜ್​ಶೀಟ್​ ದಾಖಲಿಸಲು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಆದೇಶ ಹೊರಡಿಸಿತ್ತು.

ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ, ಜಾಕ್ವೆಲಿನ್ ಫರ್ನಾಂಡಿಸ್ ಕೇವಲ ಉಡುಗೊರೆ ಪಡೆದ ನಟಿಯಲ್ಲ, ಬದಲಿಗೆ ಸುಕೇಶ್ ಮಾಡಿದ್ದ ಕಳ್ಳತನದ ದುಡ್ಡನ್ನು ಮರೆಮಾಚಲು ಆತನ ಜೊತೆ ಕೈಜೋಡಿಸಿದ್ದರು ಎನ್ನುವುದಕ್ಕೆ ಬಲವಾದ ಸಾಕ್ಷ್ಯಗಳಿವೆ ಎಂದು ಹೇಳಿದ್ದರು.

ಪ್ರಾಥಮಿಕ ದಾಖಲೆಗಳನ್ನು ನೋಡಿದರೆ ಜಾಕ್ವೆಲಿನ್ ಫರ್ನಾಂಡಿಸ್ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಸೆಕ್ಷನ್ 3 ರ ಅಡಿಯಲ್ಲಿ ತಪ್ಪು ಮಾಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇದು ಸೆಕ್ಷನ್ 4 ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಡ್ಜ್ ಪ್ರಶಾಂತ್ ಶರ್ಮಾ ಮೇ 30 ರಂದು ನೀಡಿದ ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಜಿ ಪರಮೇಶ್ವರ ಉಪಮುಖ್ಯಮಂತ್ರಿ

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆ: ಬಂಡಾಯ ಶಾಸಕ ಋತಬ್ರತ ಬ್ಯಾನರ್ಜಿ TMC ಶಾಸಕಾಂಗ ಪಕ್ಷದ ನಾಯಕನಾಗಿ ನೇಮಕ!

3ನೇ ಮದುವೆಗೆ ರೆಡಿಯಾದ ಆಮಿರ್ ಖಾನ್! ಜುಲೈ 5 ರಂದು ಬೆಂಗಳೂರಿನ ಗೆಳತಿ ಜತೆ ನಿಖಾ; ಯಾರು ಈ ಗೌರಿ ಸ್ಪ್ರಾಟ್?

ನಿಮ್ಮ ಜೊತೆ ಕೇಂದ್ರ ಸರ್ಕಾರವಿದೆ: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ

SCROLL FOR NEXT