ಸಿಎಂ ಯೋಗಿ ಆದಿತ್ಯನಾಥ್ online desk
ದೇಶ

'ಯೋಗಿ ಜೀ ನಮ್ಮನ್ನು ಕ್ಷಮಿಸಿ': ಉತ್ತರ ಪ್ರದೇಶ CM ಕ್ಷಮೆ ಕೋರಿದ 150 ರೌಡಿಶೀಟರ್ಸ್!

ಯುವಕರು ಮತ್ತು ಮಧ್ಯವಯಸ್ಕ ರೌಡಿ ಶೀಟರ್ ಗಳು ತಮ್ಮ ಕೈಗಳನ್ನು ಮೇಲಕ್ಕೆತ್ತಿ, "ನಾವು ಭವಿಷ್ಯದಲ್ಲಿ ಯಾವುದೇ ಅಪರಾಧ ಮಾಡುವುದಿಲ್ಲ ಅಥವಾ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವುದಿಲ್ಲ ಎಂದು ನಾವು ಪ್ರತಿಜ್ಞೆ ಮಾಡುತ್ತೇವೆ" ಎಂದರು.

ಗಾಜಿಯಾಬಾದ್‌: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಸುಮಾರು 150 ರೌಡಿ ಶೀಟರ್ ಗಳು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕ್ಷಮೆ ಕೇಳುವ ಪೋಸ್ಟರ್‌ಗಳೊಂದಿಗೆ ಕೈಗಳನ್ನು ಎತ್ತಿ ಪ್ರತಿಜ್ಞೆ ಮಾಡಿದರು.

ಪೊಲೀಸ್ ಪುನರ್ವಸತಿ ಉಪಕ್ರಮದಡಿಯಲ್ಲಿ ಇನ್ನುಮುಂದೆ ಅಪರಾಧ ಕೃತ್ಯಗಳನ್ನು ಮಾಡುವುದಿಲ್ಲ ಎಂದು ರೌಡಿಗಳು ಪ್ರತಿಜ್ಞೆ ಮಾಡಿದರು.

ಪುನರ್ವಸತಿ ಕಾರ್ಯಕ್ರಮದ ಭಾಗವಾಗಿ, ಯುವಕರು ಮತ್ತು ಮಧ್ಯವಯಸ್ಕ ರೌಡಿ ಶೀಟರ್ ಗಳು ತಮ್ಮ ಕೈಗಳನ್ನು ಮೇಲಕ್ಕೆತ್ತಿ, "ನಾವು ಭವಿಷ್ಯದಲ್ಲಿ ಯಾವುದೇ ಅಪರಾಧ ಮಾಡುವುದಿಲ್ಲ ಅಥವಾ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವುದಿಲ್ಲ ಎಂದು ನಾವು ಪ್ರತಿಜ್ಞೆ ಮಾಡುತ್ತೇವೆ" ಎಂದು ಪ್ರತಿಜ್ಞೆ ಮಾಡಿದರು.

ಹಲವು ರೌಡಿ ಶೀಟರ್ ಗಳು 'ಯೋಗಿ ಜೀ ನಮ್ಮನ್ನು ಕ್ಷಮಿಸಿ' ಎಂಬ ಪೋಸ್ಟ್ ಗಳನ್ನು ಹಿಡಿದು, ತಾವು ಮತ್ತೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ ಎಂದು ಹೇಳಿದರು ಮತ್ತು ಸಿಎಂ ತಮ್ಮನ್ನು ಕ್ಷಮಿಸುತ್ತಾರೆ ಎಂಬ ಭರವಸೆ ಇದೆ ಎಂದರು.

"ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ನಾವು ಭವಿಷ್ಯದಲ್ಲಿ ಅಪರಾಧಗಳನ್ನು ಮಾಡುವುದಿಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ" ಎಂದು ಹಲವು ಫಲಕಗಳು ಹಿಡಿದು ರೌಡಿ ಶೀಟರ್ ಗಳು ಬಂದಿದ್ದರು.

ತಾನು ಮತ್ತೆ ಯಾವುದೇ ಅಪರಾಧ ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದೇನೆ ಮತ್ತು ಕಾನೂನು ನನಗೆ ಬೆಂಬಲ ನೀಡುತ್ತದೆ ಎಂದು ಆಶಿಸುತ್ತೇನೆ ಎಂದು ಆರೋಪಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

'ಆಪರೇಷನ್ ಕ್ಲೀನ್ ಸ್ವೀಪ್' ಅಡಿಯಲ್ಲಿ ಗಾಜಿಯಾಬಾದ್‌ನಾದ್ಯಂತ ನಡೆಸಲಾಗುತ್ತಿರುವ ಪರಿಶೀಲನಾ ಅಭಿಯಾನದ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ ಎಂದು ಉಪ ಪೊಲೀಸ್ ಆಯುಕ್ತ(ಟ್ರಾನ್ಸ್-ಹಿಂಡನ್) ಧವಲ್ ಜೈಸ್ವಾಲ್ ಹೇಳಿದ್ದಾರೆ.

"ಅಪರಾಧಿಗಳಾಗಿರುವ, ಕೇಸ್ ಗಳನ್ನು ಹೊಂದಿರುವ ಅಥವಾ ಅಂತಹ ಚಟುವಟಿಕೆಗಳ ಇತಿಹಾಸ ಹೊಂದಿರುವ ಎಲ್ಲಾ ವ್ಯಕ್ತಿಗಳನ್ನು ಪರಿಶೀಲಿಸಲಾಗುತ್ತಿದೆ. ಅವರ ನಿವಾಸ, ಚಲನವಲನಗಳು ಮತ್ತು ಪ್ರಸ್ತುತ ಚಟುವಟಿಕೆಗಳನ್ನು ದಾಖಲಿಸಲಾಗುತ್ತಿದೆ" ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ: ನೂತನ CM ಡಿಕೆಶಿ ಹಲವು ಘೋಷಣೆ

KPCC ಅಧ್ಯಕ್ಷ ಸ್ಥಾನಕ್ಕೆ CM ಡಿಕೆಶಿ ರಾಜೀನಾಮೆ: ಬಿ.ಕೆ ಹರಿಪ್ರಸಾದ್ ನೂತನ ಸಾರಥಿ; ಸತೀಶ್ ಜಾರಕಿಹೊಳಿಗೆ ತೀವ್ರ ನಿರಾಸೆ!

IPL 2026: ನಿಷೇಧದ ಬೆನ್ನಲ್ಲೇ RCB ಸ್ಫೋಟಕ ಬ್ಯಾಟರ್ ಸಿಗರೇಟ್ ಸೇದುವ ವಿಡಿಯೋ ವೈರಲ್; ಮತ್ತೆ ನಿಯಮ ಉಲ್ಲಂಘಿಸಿದ್ರಾ ಟಿಮ್?

ನೆತನ್ಯಾಹು 'ಹುಚ್ಚ'; ಇರಾನ್ ಜೊತೆಗಿನ ಶಾಂತಿ ಮಾತುಕತೆ ಹಳ್ಳಹಿಡಿಸುತ್ತಿದ್ದಾರೆ: ಡೊನಾಲ್ಡ್ ಟ್ರಂಪ್

ಏನಾಗ್ತಿದೆ ಜಮ್ಮು-ಕಾಶ್ಮೀರದಲ್ಲಿ?: ನೆಟ್ವರ್ಕ್ ಇಲ್ಲದ ಸ್ಥಳಕ್ಕೆ ಶಾಸಕರು ಶಿಫ್ಟ್; ಸಿಎಂ Omar Abdullah ಮಾಡ್ತಿರೋದೇನು?

SCROLL FOR NEXT