ಬೆಂಕಿ ಹೊತ್ತಿಕೊಂಡ ಪ್ರಸಾದ್ ಆಸ್ಪತ್ರೆಯ ಐಸಿಯು. 
ದೇಶ

ಬಿಹಾರ: ಮುಜಫರ್‌ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಐವರು ಸಾವು, 15ಕ್ಕೂ ಹೆಚ್ಚು ರೋಗಿಗಳಿಗೆ ಗಾಯ

ಗುರುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕನಿಷ್ಠ ಐವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಾಟ್ನಾ: ದೆಹಲಿಯ ಮಾಳವೀಯ ನಗರದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ, ಬಿಹಾರದ ಮುಜಫ್ಫರ್‌ಪುರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.

ಗುರುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕನಿಷ್ಠ ಐವರು ರೋಗಿಗಳು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದರು. ಜಿಲ್ಲಾ ಆಡಳಿತದ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಹಾಗೂ ಸ್ಥಳಾಂತರ ಕಾರ್ಯಗಳ ಮೇಲ್ವಿಚಾರಣೆ ನಡೆಸಿದರು.

ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆಯ ಐದನೇ ಮಹಡಿಯ ಐಸಿಯು (ICU) ವಿಭಾಗದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ತುರ್ತಾಗಿ ಹೊರಗೆ ಸ್ಥಳಾಂತರಿಸಲಾಯಿತು.

ಅವಘಡದಲ್ಲಿ ಗಾಯಗೊಂಡ 15ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ತೀವ್ರ ನಿಗಾ ಅಗತ್ಯವಿದ್ದ ಕೆಲವು ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಮುಜಫ್ಫರ್‌ಪುರ ಜಿಲ್ಲಾಧಿಕಾರಿ ಸುಬ್ರತ್ ಕುಮಾರ್ ಸೇನ್ ಅವರು, ಮೃತಪಟ್ಟ ಐವರ ಮೃತದೇಹಗಳು ಇನ್ನೂ ಆಸ್ಪತ್ರೆಯಲ್ಲಿದ್ದು, ಅವಘಡ ಸಂಭವಿಸಿದ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲ ರೋಗಿಗಳ ಸುರಕ್ಷತೆ ಮತ್ತು ಸ್ಥಳದ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದ್ದಾರೆ,

ಕೆಲ ರೋಗಿಗಳ ಕುಟುಂಬಸ್ಥರು ತಮ್ಮ ಬಂಧುಗಳು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳನ್ನು ಸಂಪರ್ಕಿಸಿರುವುದಾಗಿ ತಿಳಿಸಿದ್ದಾರೆ.

ಈ ನಡುವೆ, ಸತತವಾಗಿ ಸಂಭವಿಸುತ್ತಿರುವ ಅಗ್ನಿ ದುರಂತಗಳು ದೇಶಾದ್ಯಂತ ಆಸ್ಪತ್ರೆಗಳು, ಹೋಟೆಲ್‌ಗಳು ಮತ್ತು ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ. ಶಿವಕುಮಾರ್-ಕಾಂಗ್ರೆಸ್ ನಾಯಕರು ನಾಳೆ ಸಂಜೆ ದೆಹಲಿಗೆ; ಹೈಕಮಾಂಡ್ ಮಹತ್ವದ ಮಾತುಕತೆ

ಯಾರ ಒತ್ತಡಕ್ಕೂ ಮಣಿದು ಬರ ಘೋಷಿಸುವುದಿಲ್ಲ, ಮಾತುಕತೆಯಲ್ಲೇ ಮೇಕದಾಟು ವಿವಾದಕ್ಕೆ ಪರಿಹಾರ ಹುಡುಕುತ್ತೇನೆ: ಸಿಎಂ ಡಿಕೆ.ಶಿವಕುಮಾರ್

ಅಸಮರ್ಥ-ಭ್ರಷ್ಟ ಸರ್ಕಾರ ಕಿತ್ತೊಗೆಯುವವರೆಗೆ ವಿರಮಿಸದಿರಿ, ಹೋರಾಟ ಮುಂದುವರೆಸಿ: ವಿದ್ಯಾರ್ಥಿ-ಯುವಜನರಿಗೆ ಸಿದ್ದರಾಮಯ್ಯ ಕರೆ

ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ

ಅಗ್ನಿಶಾಮಕ, ತುರ್ತು ಸೇವೆಗಳ ಆಧುನೀಕರಣಕ್ಕೆ ಸಮಗ್ರ ಯೋಜನೆ ರೂಪಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ