ಸೂರತ್: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಆಕ್ರೋಶವಿದೆ. ಇದೇ ಕಾರಣಕ್ಕೆ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಹೌದು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಭಾರತ ಆಶಾವಾದಿಗಳಿಂದ ತುಂಬಿರುವ ನಾಗರಿಕರ ದೇಶವಾಗಿದೆ. ನಕಾರಾತ್ಮಕತೆಯನ್ನು ಮೀರಿ ಸಾಕಷ್ಟು ಮುಂದುವರೆದಿದೆ; ಇದು ಆಶಾವಾದದಿಂದ ಮತ್ತು ಅಸಾಧಾರಣ ಆಕಾಂಕ್ಷೆಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರವಾಗಿದ್ದು, ಇಲ್ಲಿನ ಜನರು ತಮ್ಮ ಕನಸುಗಳನ್ನು ಸಾಕಾರ ಮಾಡಿಕೊಳ್ಳಲು ಬದ್ಧರಾಗಿದ್ದಾರೆ ಎಂದು ಹೇಳುವ ಮೂಲಕ ಆತ್ಮ ನಿರ್ಭರ ಭಾರತ ಯೋಜನೆಯನ್ನು ಲೇವಡಿ ಮಾಡುವವರ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕದಲ್ಲಿ ಜೂನ್ 3ರಂದು ಬುಧವಾರ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಡಿಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇದಾದ ಎರಡು ದಿನಗಳ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.