ಅಭಿಷೇಕ್ ಬ್ಯಾನರ್ಜಿ ಜೊತೆಗೆ ಮಮತಾ ಬ್ಯಾನರ್ಜಿ 
ದೇಶ

ರೆಬೆಲ್ ಶಾಸಕರ ಸಂಪರ್ಕದಲ್ಲಿ 23 TMC ಸಂಸದರು! ಮಮತಾ ಬ್ಯಾನರ್ಜಿಗೆ ಹೆಚ್ಚಿದ ಸಂಕಷ್ಟ- ಮೂಲಗಳು

ಇತ್ತೀಚಿಗೆ ಪಕ್ಷದ ಶಾಸಕಾಂಗ ಸಭೆಯಿಂದ ಹೊರ ನಡೆದಿದ್ದ ಋತಬ್ರತಾ ಬ್ಯಾನರ್ಜಿ ನೇತೃತ್ವದಲ್ಲಿನ ಕೆಲ ಭಿನ್ನಮತೀಯ ಶಾಸಕರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹಕ್ಕ ಮಂಡಿಸಿದ್ದರು.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ಮಮತಾ ಬ್ಯಾನರ್ಜಿಗೆ ಒಂದಾದ ನಂತರ ಒಂದರಂತೆ ಹೊಡೆತ ಬೀಳುತ್ತಿದೆ. ಪಕ್ಷದಲ್ಲಿನ ಭಿನ್ನಮತ ಈಗಸಂಸತ್ತಿನೊಳಗೆ ವ್ಯಾಪಿಸುತ್ತಿರುವಂತೆ ಕಂಡುಬರುತ್ತಿದೆ. 23 ಸಂಸದರು ಬಂಡಾಯ ಶಾಸಕರ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದು, ಮುಂಬರುವ ದಿನಗಳಲ್ಲಿ ಪಕ್ಷ ವಿಭಜನೆ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದಲ್ಲಿ ಆಂತರಿಕ ಸಂಘರ್ಷ ಹೆಚ್ಚಾಗುತ್ತಿರುವಂತೆ ಈ ಹೊಸ ಬಿಕ್ಕಟ್ಟು ಸೃಷ್ಟಿಯಾಗಿದೆ. ಇತ್ತೀಚಿಗೆ ಪಕ್ಷದ ಶಾಸಕಾಂಗ ಸಭೆಯಿಂದ ಹೊರ ನಡೆದಿದ್ದ ಋತಬ್ರತಾ ಬ್ಯಾನರ್ಜಿ ನೇತೃತ್ವದಲ್ಲಿನ ಕೆಲ ಭಿನ್ನಮತೀಯ ಶಾಸಕರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹಕ್ಕ ಮಂಡಿಸಿದ್ದರು.

ಟಿಎಂಸಿ ಸಂಸದರಲ್ಲಿಯೂ ಈಗ ಅಸಮಾಧಾನ ಹೆಚ್ಚಾಗುತ್ತಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಬಗ್ಗೆ ಹಲವಾರು ಸಂಸದರು ಅತೃಪ್ತರಾಗಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ಸಂಸತ್ತಿನಲ್ಲಿ ಪ್ರತ್ಯೇಕ ಬಣ ರಚಿಸುವ ಬಗ್ಗೆ ಚರ್ಚೆ ಆರಂಭವಾಗಿದೆ ಎನ್ನಲಾಗುತ್ತಿದೆ.

ಲೋಕಸಭಾ ಸಂಸದರ ಒಂದು ಬಣ ಪಕ್ಷದಿಂದ ಬೇರ್ಪಟ್ಟು, ಪ್ರತ್ಯೇಕ ಬಣ ರಚಿಸುವ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಒಂದು ಡಜನ್‌ಗೂ ಹೆಚ್ಚು ಸಂಸದರು ಈಗಾಗಲೇ ಅಂತಹ ಕ್ರಮದ ಪರವಾಗಿದ್ದಾರೆ ಎಂದು ಹೇಳಲಾಗಿದೆ. ಹಿರಿಯ ಸಂಸದರೊಬ್ಬರು ಈ ಗುಂಪಿನ ನಾಯಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂಖ್ಯೆಗಳು ಸಂಭಾವ್ಯ ವಿಭಜನೆಯ ಬಗ್ಗೆಗಿನ ಊಹಾಪೋಹಗಳಿಗೆ ಮತ್ತಷ್ಟು ಇಂಬು ನೀಡಿವೆ. ಟಿಎಂಸಿ ಪ್ರಸ್ತುತ ಲೋಕಸಭೆಯಲ್ಲಿ 29 ಸಂಸದರನ್ನು ಹೊಂದಿದೆ. ಆದರೆ ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಸದನದಲ್ಲಿ ಪ್ರತ್ಯೇಕ ಗುಂಪಾಗಿ ಗುರುತಿಸಲು ಕನಿಷ್ಠ 22 ಸಂಸದರು ಅಗತ್ಯವಿದೆ. ರಾಜ್ಯಸಭೆಯಲ್ಲಿ ಪಕ್ಷವು 13 ಸದಸ್ಯರನ್ನು ಹೊಂದಿದ್ದು, ಅಲ್ಲಿ ಮಾನ್ಯತೆ ಪಡೆಯಲು 9 ಸಂಸದರು ಇರಬೇಕಾಗುತ್ತದೆ.

ಆದಾಗ್ಯೂ, ಬಂಡಾಯ ನಾಯಕಿ ರಿತಬ್ರತಾ ಬ್ಯಾನರ್ಜಿ, ಸಂಸದರು ಭಿನ್ನಮತೀಯರ ಗುಂಪು ಸೇರುತ್ತಿದ್ದಾರೆಯೇ ಎಂದು ದೃಢಪಡಿಸಲಿಲ್ಲ. ಬದಲಾಗಿ ತಾಳ್ಮೆಯಿಂದಿರಿ, ಮುಂದಿನ ದಿನಗಳಲ್ಲಿ ಮತ್ತಷ್ಟು ನಡೆಯಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ, ಆದ್ರೆ...: ಖಾತೆ ಕೈತಪ್ಪಲು ಕಾರಣ ಬಿಚ್ಚಿಟ್ಟ CM ಡಿಕೆ ಶಿವಕುಮಾರ್

ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ; Video

Peddi: ಪಾತ್ರಕ್ಕೆ ತಕ್ಕಂತೆ ಜಾನ್ವಿ ಕಪೂರ್ ನಟಿಸಿದ್ರೂ ಎಡಿಟರ್ ಕಣ್ಣು ಮಾತ್ರ ಎದೆ, ಸೊಂಟದ ಮೇಲೆ ಯಾಕೆ? ನೆಟ್ಟಿಗರ ತರಾಟೆ!

ಗಡಿಭದ್ರತೆಗೆ ಹೈಟೆಕ್ ಟಚ್: ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸ್ಮಾರ್ಟ್ ಬಾರ್ಡರ್; ಅಮಿತ್ ಶಾ

ಮಹಾರಾಜ ಟ್ರೋಫಿ 2026 ಹರಾಜು: IPL ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ಪಡಿಕ್ಕಲ್

SCROLL FOR NEXT