ಅಭಿಜೀತ್ ದಿಪ್ಕೆ  
ದೇಶ

'ಇದು ಕೇವಲ ಟ್ರೇಲರ್ ಅಷ್ಟೇ...: CJP ಪ್ರತಿಭಟನೆ ಬಳಿಕ ಅಭಿಜೀತ್ ದಿಪ್ಕೆ ಮೊದಲ ಪ್ರತಿಕ್ರಿಯೆ.. Video

ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದು ನಿಮ್ಮ ಬೆಂಬಲವನ್ನು ತೋರಿಸಿದ್ದಕ್ಕಾಗಿ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದು ಅವರು ಹೇಳಿದ್ದು, ಕೊನೆಯಲ್ಲಿ ಕೆಂಪು ಹೃದಯದ ಎಮೋಜಿ ಹಾಕಿದ್ದಾರೆ.

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ಪ್ರತಿಭಟನೆ ಶನಿವಾರ ಸಂಜೆ ಮುಕ್ತಾಯಗೊಂಡಿತು. ಬಳಿಕ CJP ಸಂಸ್ಥಾಪಕ ಅಭಿಜೀತ್ ದಿಪ್ಕೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದು, ತಮ್ಮ ಪೋಷಕರನ್ನು ಭೇಟಿ ಮಾಡಲು ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ತಮ್ಮ ಪೋಷಕರಿಗೆ ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಅವರು ಮನೆ ತೊರೆಯುವಂತೆ ಮಾಡಲಾಗಿದೆ ಎಂದು ದಿಪ್ಕೆ ಹೇಳಿದ್ದಾರೆ.

ಅಭಿಜೀತ್ ದಿಪ್ಕೆ ಹೇಳಿದ್ದು ಏನು?

CJP ಪ್ರತಿಭಟನೆ ಬಳಿಕ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅವರು ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದು, ನನ್ನ ಪೋಷಕರನ್ನು ಭೇಟಿ ಮಾಡಲು ಮನೆಗೆ ಹೋಗುತ್ತಿದ್ದೇನೆ. ನಾನು ಅವರನ್ನು ಕೊನೆಯದಾಗಿ ಭೇಟಿಯಾಗಿ ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಕಳೆದ 15 ದಿನಗಳಲ್ಲಿ ಅವರು ಬಹಳಷ್ಟು ಸಹಿಸಿಕೊಂಡಿದ್ದಾರೆ. ಬೆದರಿಕೆಗಳಿಂದಾಗಿ ಅವರು ಮನೆ ತೊರೆದಿದ್ದು, ಈಗ ನಾನು ಅವರನ್ನು ಮತ್ತೆ ಮನೆಗೆ ಕರೆದೊಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು: ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದು ನಿಮ್ಮ ಬೆಂಬಲವನ್ನು ತೋರಿಸಿದ್ದಕ್ಕಾಗಿ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದು ಅವರು ಹೇಳಿದ್ದು, ಕೊನೆಯಲ್ಲಿ ಕೆಂಪು ಹೃದಯದ ಎಮೋಜಿ ಹಾಕಿದ್ದಾರೆ.

ತ್ರಿವರ್ಣ ಧ್ವಜ ಮತ್ತು ಅಂಬೇಡ್ಕರ್ ಫೋಟೋದೊಂದಿಗೆ ಸೇರಿದ ಜನರು! ಶನಿವಾರ ಸಂಜೆ 4 ಗಂಟೆ ಸುಮಾರಿಗೆ, ದೆಹಲಿಯ ಜಂತರ್ ಮಂತರ್‌ನಲ್ಲಿ ಸಾವಿರಾರು ಜನರು ಸೇರಿರುವುದನ್ನು ತೋರಿಸುವ ವೀಡಿಯೊವನ್ನು ದೀಪ್ಕೆ X ನಲ್ಲಿ ಹಂಚಿಕೊಂಡಿದ್ದಾರೆ. ಇದು ಕಾಕ್ರೋಚ್ ಜನತಾ ಪಕ್ಷವನ್ನು ಬೆಂಬಲಿಸಲು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸೇರಿರುವ ಜನಸಮೂಹವಾಗಿದೆ ಎಂದು ಹೇಳಿದ್ದಾರೆ.

ಭಾರತೀಯ ತ್ರಿವರ್ಣ ಧ್ವಜ ಮತ್ತು ಡಾ. ಭೀಮರಾವ್ ಅಂಬೇಡ್ಕರ್ ಅವರ ಫೋಟೋಗಳನ್ನು ಹಿಡಿದಿರುವ ಹೆಚ್ಚಿನ ಸಂಖ್ಯೆಯ ಜನರನ್ನು ವೀಡಿಯೊದಲ್ಲಿ ತೋರಿಸಲಾಗಿದೆ. “ಕಾಕ್ರೋಚ್ ಎಂದಿಗೂ ತಲೆಬಾಗುವುದಿಲ್ಲ ಎಂದು ದಿಪ್ಕೆ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ