ಅಭಿಜೀತ್ ದಿಪ್ಕೆ  
ದೇಶ

'ಇದು ಕೇವಲ ಟ್ರೇಲರ್ ಅಷ್ಟೇ.. CJP ಪ್ರತಿಭಟನೆ ಬಳಿಕ ಅಭಿಜೀತ್ ದಿಪ್ಕೆ ಮೊದಲ ಪ್ರತಿಕ್ರಿಯೆ..

ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದು ನಿಮ್ಮ ಬೆಂಬಲವನ್ನು ತೋರಿಸಿದ್ದಕ್ಕಾಗಿ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದು ಅವರು ಹೇಳಿದ್ದು, ಕೊನೆಯಲ್ಲಿ ಕೆಂಪು ಹೃದಯದ ಎಮೋಜಿ ಹಾಕಿದ್ದಾರೆ.

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ಪ್ರತಿಭಟನೆ ಶನಿವಾರ ಸಂಜೆ ಮುಕ್ತಾಯಗೊಂಡಿತು. ಬಳಿಕ CJP ಸಂಸ್ಥಾಪಕ ಅಭಿಜೀತ್ ದಿಪ್ಕೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದು, ತಮ್ಮ ಪೋಷಕರನ್ನು ಭೇಟಿ ಮಾಡಲು ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ತಮ್ಮ ಪೋಷಕರಿಗೆ ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಅವರು ಮನೆ ತೊರೆಯುವಂತೆ ಮಾಡಲಾಗಿದೆ ಎಂದು ದಿಪ್ಕೆ ಹೇಳಿದ್ದಾರೆ.

ಅಭಿಜೀತ್ ದಿಪ್ಕೆ ಹೇಳಿದ್ದು ಏನು?

CJP ಪ್ರತಿಭಟನೆ ಬಳಿಕ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅವರು ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದು, ನನ್ನ ಪೋಷಕರನ್ನು ಭೇಟಿ ಮಾಡಲು ಮನೆಗೆ ಹೋಗುತ್ತಿದ್ದೇನೆ. ನಾನು ಅವರನ್ನು ಕೊನೆಯದಾಗಿ ಭೇಟಿಯಾಗಿ ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಕಳೆದ 15 ದಿನಗಳಲ್ಲಿ ಅವರು ಬಹಳಷ್ಟು ಸಹಿಸಿಕೊಂಡಿದ್ದಾರೆ. ಬೆದರಿಕೆಗಳಿಂದಾಗಿ ಅವರು ಮನೆ ತೊರೆದಿದ್ದು, ಈಗ ನಾನು ಅವರನ್ನು ಮತ್ತೆ ಮನೆಗೆ ಕರೆದೊಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು: ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದು ನಿಮ್ಮ ಬೆಂಬಲವನ್ನು ತೋರಿಸಿದ್ದಕ್ಕಾಗಿ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದು ಅವರು ಹೇಳಿದ್ದು, ಕೊನೆಯಲ್ಲಿ ಕೆಂಪು ಹೃದಯದ ಎಮೋಜಿ ಹಾಕಿದ್ದಾರೆ.

ತ್ರಿವರ್ಣ ಧ್ವಜ ಮತ್ತು ಅಂಬೇಡ್ಕರ್ ಫೋಟೋದೊಂದಿಗೆ ಸೇರಿದ ಜನರು! ಶನಿವಾರ ಸಂಜೆ 4 ಗಂಟೆ ಸುಮಾರಿಗೆ, ದೆಹಲಿಯ ಜಂತರ್ ಮಂತರ್‌ನಲ್ಲಿ ಸಾವಿರಾರು ಜನರು ಸೇರಿರುವುದನ್ನು ತೋರಿಸುವ ವೀಡಿಯೊವನ್ನು ದೀಪ್ಕೆ X ನಲ್ಲಿ ಹಂಚಿಕೊಂಡಿದ್ದಾರೆ. ಇದು ಕಾಕ್ರೋಚ್ ಜನತಾ ಪಕ್ಷವನ್ನು ಬೆಂಬಲಿಸಲು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸೇರಿರುವ ಜನಸಮೂಹವಾಗಿದೆ ಎಂದು ಹೇಳಿದ್ದಾರೆ.

ಭಾರತೀಯ ತ್ರಿವರ್ಣ ಧ್ವಜ ಮತ್ತು ಡಾ. ಭೀಮರಾವ್ ಅಂಬೇಡ್ಕರ್ ಅವರ ಫೋಟೋಗಳನ್ನು ಹಿಡಿದಿರುವ ಹೆಚ್ಚಿನ ಸಂಖ್ಯೆಯ ಜನರನ್ನು ವೀಡಿಯೊದಲ್ಲಿ ತೋರಿಸಲಾಗಿದೆ. “ಕಾಕ್ರೋಚ್ ಎಂದಿಗೂ ತಲೆಬಾಗುವುದಿಲ್ಲ ಎಂದು ದಿಪ್ಕೆ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET-UG 2026: ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ 'ಸೋರಿಕೆ' ಆರೋಪ ತಳ್ಳಿಹಾಕಿದ NTA; ಸುಳ್ಳು ಸುದ್ದಿ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

T20 Cricket: ನಾಯಕತ್ವದಿಂದ ಗೇಟ್ ಪಾಸ್ ಬಳಿಕ ಸೂರ್ಯಕುಮಾರ್ ಮೊದಲ ಪೋಸ್ಟ್ ವೈರಲ್!

ದಾವಣಗೆರೆ: ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನಾಭರಣ ನಾಪತ್ತೆ, ಟ್ರಸ್ಟ್ ವಿರುದ್ಧ ಗಂಭೀರ ಆರೋಪ!

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

SCROLL FOR NEXT