ಐಪಿಎಸ್ ಅಧಿಕಾರಿ, ಕುಕತ್‌ಪಲ್ಲಿ ಡಿಸಿಪಿ ರಿತಿ ರಾಜ್ 
ದೇಶ

ಸಿನಿಮಾ ಶೈಲಿ ಕಾರ್ಯಾಚರಣೆ: ಸಾಮಾನ್ಯ ಮಹಿಳೆಯಂತೆ ಪಬ್‌ಗೆ ತೆರಳಿ ಸೆಕ್ಸ್‌ ದಂಧೆ ಬಯಲಿಗೆಳೆದ IPS ಅಧಿಕಾರಿ!

ಪೊಲೀಸರ ಪ್ರಕಾರ, ಈ ಪಬ್ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಮತ್ತು ವೇಶ್ಯಾವಾಟಿಕೆಗೆ ಅನುಕೂಲ ಮಾಡಿಕೊಡುತ್ತಿತ್ತು ಎನ್ನಲಾಗಿದೆ.

ಹೈದರಾಬಾದ್: ಪಬ್‌ಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಸಿನಿಮಾ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿದ ಯುವ ಐಪಿಎಸ್ ಅಧಿಕಾರಿಯೊಬ್ಬರು, ಸೈಬರಾಬಾದ್ ವ್ಯಾಪ್ತಿಯ ಹೈದರಾಬಾದ್‌ನ ಕುಕತ್‌ಪಲ್ಲಿ ಪ್ರದೇಶದ ಜನಪ್ರಿಯ ಪಬ್‌ನಲ್ಲಿ ಅನೈತಿಕ ಚಟುವಟಿಕೆಗಳು ಮತ್ತು ಸೆಕ್ಸ್ ದಂಧೆಯನ್ನ ಬಯಲಿಗೆಳೆದಿದ್ದಾರೆ.

2018 ರ ಬ್ಯಾಚ್ ನ ತೆಲಂಗಾಣ ಕೇಡರ್ ಐಪಿಎಸ್ ಅಧಿಕಾರಿ, ಕುಕತ್‌ಪಲ್ಲಿ ಡಿಸಿಪಿ ರಿತಿ ರಾಜ್ ಅವರು, ಭಾನುವಾರ ತಡರಾತ್ರಿ ಕ್ಲಬ್ ಮಾಸ್ತಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಕಿಂಗ್ಸ್ ಮತ್ತು ಕ್ವೀನ್ಸ್ ಪಬ್ ಮೇಲೆ ಅನಿರೀಕ್ಷಿತ ದಾಳಿ ನಡೆಸುವ ಮುನ್ನ ರಹಸ್ಯ ಕಾರ್ಯಾಚರಣೆ ನಡೆಸಿದ್ದರು. ಸಾಮಾನ್ಯ ಮಹಿಳೆಯಂತೆ ಪಬ್‌ಗೆ ತೆರಳಿ ರಹಸ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದರು. ಬಳಿಕ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, 9 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ.

ಪಬ್ ಒಳಗೆ ನಡೆಯುತ್ತಿದ್ದ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಬಂದ ನಂತರ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಪೊಲೀಸರ ಪ್ರಕಾರ, ಈ ಪಬ್ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಮತ್ತು ವೇಶ್ಯಾವಾಟಿಕೆಗೆ ಅನುಕೂಲ ಮಾಡಿಕೊಡುತ್ತಿತ್ತು ಎನ್ನಲಾಗಿದೆ. ಮದ್ಯ ಮಾರಾಟ ಮಾಡುವ ಆವರಣಕ್ಕೆ ಅಪ್ರಾಪ್ತ ವಯಸ್ಕರು ಪ್ರವೇಶಿಸುವುದನ್ನು ತಡೆಯಲು ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಲು ಆಡಳಿತ ಮಂಡಳಿ ವಿಫಲವಾಗಿದೆ ಎಂದು ತನಿಖಾಧಿಕಾರಿಗಳು ದಾಳಿ ವೇಳೆ ಪತ್ತೆ ಹಚ್ಚಿದ್ದಾರೆ.

ಈ ಪಬ್ ಅನುಮತಿಸಲಾದ ಸಮಯ ಮೀರಿ ಕಾರ್ಯನಿರ್ವಹಿಸುತ್ತಿದೆ. ನಿಯಮಗಳನ್ನು ಉಲ್ಲಂಘಿಸಿ ಆಹಾರ ಮತ್ತು ಮದ್ಯವನ್ನು ಪೂರೈಸುತ್ತಿದೆ ಮತ್ತು ಮಾನ್ಯ ಪೊಲೀಸ್ ನಿರಾಕ್ಷೇಪಣಾ ಪ್ರಮಾಣಪತ್ರ(ಎನ್‌ಒಸಿ) ಇಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಲಾಗಿದೆ.

ಪಬ್‌ಗೆ ಬರೋ ಯುವಕರನ್ನ ಸೆಳೆಯಲು ಯುವತಿಯರನ್ನು ಬಳಸಿಕೊಳ್ಳಲಾಗುತ್ತಿದೆ. ಈ ಮೂಲಕ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತದೆ ಅನ್ನೋ ಆರೋಪವೂ ಇತ್ತು. ಇದರ ವಿರುದ್ಧ ಡಿಸಿಪಿ ರಿತಿ ರಾಜ್ (Riti raj) ರಹಸ್ಯ ಕಾರ್ಯಾಚರಣೆ ನಡೆಸಿದ್ದರು. ಪಬ್‌ನಲ್ಲಿ ಅನೈತಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದರು. ಬಳಿಕ ಪೊಲೀಸ್ ತಂಡದೊಂದಿಗೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖಾಧಿಕಾರಿಗಳು ಆಡಳಿತ ಮಂಡಳಿಯು ಅನೈತಿಕ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಮತ್ತು ಗ್ರಾಹಕರಿಗಾಗಿ ಮಹಿಳೆಯರನ್ನು ಖರೀದಿಸುತ್ತಿದೆ ಎಂದು ಶಂಕಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ, ನಾಲ್ವರು ಮಹಿಳೆಯರು ಮತ್ತು ಐದು ಪುರುಷರು ಸೇರಿದಂತೆ ಒಂಬತ್ತು ಸಿಬ್ಬಂದಿಯನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕಾನೂನು ಕ್ರಮಕ್ಕಾಗಿ ಕೆಪಿಎಚ್‌ಬಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM!

ಆರ್. ಮಾಧವನ್‌ ಹಿರಿಮೆಗೆ ಮತ್ತೊಂದು ಗರಿ: ಬಹುಮುಖ ಪ್ರತಿಭೆ ನಟ, ಚಿತ್ರಕಥೆಗಾರ, ನಿರ್ದೇಶಕನಿಗೆ Padma Shri ಪ್ರಶಸ್ತಿ

India vs Afghanistan: 2 ಎಸೆತದಲ್ಲಿ 3 ವಿಕೆಟ್, 36 ಓವರ್ ನಲ್ಲೇ ಆಪ್ಘನ್ ಹೆಡೆಮುರಿ ಕಟ್ಟಿದ ಭಾರತ, Gill ಪಡೆಗೆ ಇನ್ನಿಂಗ್ಸ್ ಜಯ

ರಾಜ್ಯಸಭೆಗೆ ಸಾಮಾನ್ಯ ಕಾರ್ಯಕರ್ತನನ್ನು BJP ಅಭ್ಯರ್ಥಿ ಮಾಡಿದೆ, ದೇವೇಗೌಡರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: BY Vijayendra

SCROLL FOR NEXT