ಸಂಜಯ್ ರಾವತ್  online desk
ದೇಶ

ಕಾಂಗ್ರೆಸ್‌ನಿಂದ ಬೇರ್ಪಟ್ಟ ಪಕ್ಷಗಳು ಮರಳಬೇಕು: TMCಗೆ ವಿಲೀನದ ಆಫರ್ ಬೆನ್ನಲ್ಲೇ ಸಂಜಯ್ ರಾವತ್ ಹೇಳಿಕೆ

ಇಂತಹ ಪುನರೇಕೀಕರಣವು 'ಕಾಲದ ಅಗತ್ಯ'ವಾಗಿದೆ ಮತ್ತು ಈ ಮಾರ್ಗಗಳ ಬಗ್ಗೆ ಕಾಂಗ್ರೆಸ್ ಮತ್ತು ಇತರ ಪಕ್ಷಗಳಲ್ಲಿ ಈಗಾಗಲೇ ಚಿಂತನೆ ನಡೆಯುತ್ತಿದೆ ಎಂದು ಅವರು ಪ್ರತಿಪಾದಿಸಿದರು.

ಮುಂಬೈ: ಕಾಂಗ್ರೆಸ್ ನಿಂದ ಈ ಹಿಂದೆ ಬೇರ್ಪಟ್ಟ ನಾಯಕರು ಸ್ಥಾಪಿಸಿದ ಪಕ್ಷಗಳು ಈಗ ಮರಳಿ ಕಾಂಗ್ರೆಸ್ ಜೊತೆ ವಿಲೀನವಾಗಬೇಕು ಎಂದು ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ನಾಯಕ ಸಂಜಯ್ ರಾವತ್ ಬುಧವಾರ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ-ಶರದ್ಚಂದ್ರ ಪವಾರ್ ಅವರಂತಹ ನಾಯಕರು ಕಾಂಗ್ರೆಸ್ ನಿಂದ ಬೇರ್ಪಟ್ಟು ಪಕ್ಷಗಳನ್ನು ಸ್ಥಾಪಿಸಿದ್ದರು. ಅವರೆಲ್ಲಾ ಈ ಹಿಂದೆ ಕಾಂಗ್ರೆಸ್‌ನ ಭಾಗವಾಗಿದ್ದರು ಮತ್ತು ಈಗ ಕಾಂಗ್ರೆಸ್ ಗೆ ಮರಳಿ ಹಳೆಯ ಪಕ್ಷವನ್ನು ಬಲಪಡಿಸಬೇಕು ಎಂದು ಹೇಳಿದ್ದಾರೆ.

ಇಂತಹ ಪುನರೇಕೀಕರಣವು 'ಕಾಲದ ಅಗತ್ಯ'ವಾಗಿದೆ ಮತ್ತು ಈ ಮಾರ್ಗಗಳ ಬಗ್ಗೆ ಕಾಂಗ್ರೆಸ್ ಮತ್ತು ಇತರ ಪಕ್ಷಗಳಲ್ಲಿ ಈಗಾಗಲೇ ಚಿಂತನೆ ನಡೆಯುತ್ತಿದೆ ಎಂದು ಅವರು ಪ್ರತಿಪಾದಿಸಿದರು.

"ಕಾಂಗ್ರೆಸ್ ತೊರೆದು ತಮ್ಮದೇ ಆದ ಪಕ್ಷಗಳನ್ನು ರಚಿಸಿದ ಘಟಕಗಳು ಕಾಂಗ್ರೆಸ್ ಧ್ವಜದ ಅಡಿಯಲ್ಲಿ ಬಂದು ಅದನ್ನು ಬಲಪಡಿಸಬೇಕು ಎಂದು ನಾವು ಖಾಸಗಿಯಾಗಿ ಮಾತನಾಡುತ್ತಲೇ ಇದ್ದೇವೆ. ಇದು ಈ ಸಮಯದ ಅಗತ್ಯ" ಎಂದು ರಾವತ್ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ, ಬಿಜು ಜನತಾದಳ ಮತ್ತು ತೆಲಂಗಾಣದ ಕೆಲವು ಪಕ್ಷಗಳನ್ನು ಉಲ್ಲೇಖಿಸಿದರು.

ಈ ಪಕ್ಷಗಳಿಗೆ ಆಯಾ ರಾಜ್ಯಗಳಲ್ಲಿ ಕಾಂಗ್ರೆಸ್‌ನ ಸಹಾಯದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದರು ಹೇಳಿದರು. "ಕಾಂಗ್ರೆಸ್ ತೊರೆದಿರುವ ಪ್ರತಿಯೊಬ್ಬರೂ, ಅದು ನಾಯಕರಾಗಿರಲಿ ಅಥವಾ ಪಕ್ಷಗಳಾಗಿರಲಿ, ನೀವು ಒಟ್ಟಾಗಿ ಕಾಂಗ್ರೆಸ್ ಗೆ ಮರಳಿ, ಕಾಂಗ್ರೆಸ್ ನ್ನು ಹೆಚ್ಚು ಶಕ್ತಿಶಾಲಿಯನ್ನಾಗಿ ಮಾಡಬೇಕು ಮತ್ತು (ಆಡಳಿತರೂಢ ಬಿಜೆಪಿ ನೇತೃತ್ವದ ಎನ್‌ಡಿಎಗೆ) ಪರ್ಯಾಯವನ್ನು ನೀಡಬೇಕು" ಎಂದು ಅವರು ಹೇಳಿದರು.

"ನನ್ನ ಮಾಹಿತಿಯ ಪ್ರಕಾರ, ಕಾಂಗ್ರೆಸ್ ಮತ್ತು ಇತರ ಪಕ್ಷಗಳಲ್ಲಿ ಇದರ ಬಗ್ಗೆ ಸ್ವಲ್ಪ ಚಿಂತನೆ ಇದೆ" ಎಂದು ರಾವತ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಶಿವಕುಮಾರ್: Metro ವಿಸ್ತರಣೆ, ಡಬಲ್ ಡೆಕ್ಕರ್ ಸೇರಿ ಹಲವು ಯೋಜನೆಗಳ ಅನುಮತಿಗೆ ಮನವಿ!

'ಜೈಲಿನಲ್ಲಿ ಕ್ರಿಮಿನಲ್ ಗಂಡ, ಬಾಯ್‌ಫ್ರೆಂಡ್ ಜತೆ ಹೆಂಡತಿ ಸುತ್ತಾಟ' ಪೋಸ್ಟ್: ಕೆರಳಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು!

ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಬಿಡೋ ಪ್ರಶ್ನೆಯೇ ಇಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪಂದ್ಯದ ಮಧ್ಯೆಯೇ ಪಿರಿಯಡ್ಸ್, ಮೈದಾನ ಬಿಟ್ಟು ಓಡಿದ ಮಂಧಾನ: ನೋವಿನ ಕಥೆ ಬಿಚ್ಚಿಟ್ಟ ಸ್ಮೃತಿ!

CM ಕಚೇರಿ ಸೇರಿದಂತೆ ಮುಂಬೈನ ಹಲವು ಕಡೆ ಬಾಂಬ್ ಸ್ಫೋಟಿಸುವುದಾಗಿ ಖಲಿಸ್ತಾನ್ ಬೆದರಿಕೆ!

SCROLL FOR NEXT