ಪುಣೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅಭಿಜೀತ್ ದಿಪ್ಕೆ ಮತ್ತಿತರರು 
ದೇಶ

ಪುಣೆ ರ‍್ಯಾಲಿಯಲ್ಲಿ ಸಾವಿರಾರು 'ಕಾಕ್ರೋಚ್‌' ಭಾಗಿ: ಮುಂದಿನ CJP ಪ್ರತಿಭಟನೆಗಳ ವೇಳಾಪಟ್ಟಿ ಪ್ರಕಟ!

ಸಂಘಟಕರು ಸಾಮಾಜಿಕ ಮಾಧ್ಯಮವನ್ನು ಮೀರಿ ಅನೇಕ ನಗರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು, ಇಂದು ಪುಣೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆದಿರುವುದಾಗಿ CJP ತಿಳಿಸಿದೆ.

ಪುಣೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ದೇಶಾದ್ಯಂತ ಪ್ರತಿಭಟನೆ ಆರಂಭಿಸಿದ್ದು, ಇಂದು ಪುಣೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.

ಸಂಘಟಕರು ಸಾಮಾಜಿಕ ಮಾಧ್ಯಮವನ್ನು ಮೀರಿ ಅನೇಕ ನಗರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು, ಇಂದು ಪುಣೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆದಿರುವುದಾಗಿ CJP ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪುಣೆಯಲ್ಲಿ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು. ಮುಂದಿನ ದಿನಗಳಲ್ಲಿ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದೆ.

ಮತ್ತೊಂದು ಪ್ರತ್ಯೇಕ ಪೋಸ್ಟ್ ನಲ್ಲಿ ಮುಂದಿನ ಪ್ರತಿಭಟನೆಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಪಾಲ್ಗೊಳುವಂತೆ ಕರೆ ನೀಡಿದೆ.

ಜೂನ್ 12 ರಂದು ಲಖನೌ, ಜೂನ್ 13 ರಂದು ಅಮೃತಸರ, ಜೂನ್ 14 ರಂದು ಹೈದರಾಬಾದ್ ಮತ್ತು ಜೂನ್ 15 ರಂದು ಜೈಪುರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕಾಕ್ರೋಚ್ ಜನತಾ ಪಕ್ಷ ಮಾಹಿತಿ ಹಂಚಿಕೊಡಿದೆ.

ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ: ಈ ತಿಂಗಳ ಕೊನೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಗೆ ಸಂಘಟನೆ ಮನವಿ ಮಾಡಿದೆ. ದೇಶಾದ್ಯಂತ ಯುವಕರು ಜೂನ್ 20 ರಂದು ಬೃಹತ್ ಪ್ರತಿಭಟನೆಗಾಗಿ ದೆಹಲಿಗೆ ಬರಬೇಕೆಂದು ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!