ಮಮತಾ ಬ್ಯಾನರ್ಜಿ 
ದೇಶ

ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತ: ಪ್ರಚೋದನಾಕಾರಿ ಹೇಳಿಕೆ ಆರೋಪ; FIR ದಾಖಲು!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ತೃಣಮೂಲ ಕಾಂಗ್ರೆಸ್ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವಂತೆಯೇ ಈಗ ಎಫ್ ಐಆರ್ ದಾಖಲಾಗಿರುವುದು ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತ ಆಗಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣ ಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಗೆ ಹೊಡೆತಗಳ ಮೇಲೆ ಹೊಡೆತ ಬೀಳುತ್ತಿದೆ. ಧರ್ಮತಾಲದಲ್ಲಿ ನಡೆದ ಪ್ರತಿಭಟನೆ ವೇಳೆಯಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಲಾಗಿದೆ.

ಧರ್ಮತಾಲಾದಲ್ಲಿ ನಡೆದ ಪ್ರತಿಭಟನೆ ವೇಳೆ, ನಾವು ಇಲ್ಲಿರುವುದರಿಂದ ನೀವು ಸುರಕ್ಷಿತರಾಗಿದ್ದೀರಿ. ನಾವು ಇಲ್ಲದಿದ್ದರೆ, ಒಂದು ನಿರ್ದಿಷ್ಟ ಸಮುದಾಯದ ಜೀವನ ಕಷ್ಟ ಆಗುತಿತ್ತು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಉದ್ಯಮಿಯೊಬ್ಬರು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಹರೇ ಸ್ಟ್ರೀಟ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ತೃಣಮೂಲ ಕಾಂಗ್ರೆಸ್ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವಂತೆಯೇ ಈಗ ಎಫ್ ಐಆರ್ ದಾಖಲಾಗಿರುವುದು ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತ ಆಗಿದೆ.

ಈ ಮಧ್ಯೆ ಬಂಡಾಯ ಗುಂಪಿನ 19 ಸಂಸದರು ಲೋಕಸಭೆಯಲ್ಲಿ ನಿಜವಾದ ಟಿಎಂಸಿ ಎಂದು ಗುರುತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಬಂಡಾಯ ಗುಂಪಿನ ಸಂಸದ ಜಗದೀಶ್ ಚಂದ್ರ ಬರ್ಮಾ ಬಸುನಿಯಾ ಶುಕ್ರವಾರ ಹೇಳಿದ್ದಾರೆ. ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈಗಾಗಲೇ ಪತ್ರ ಸಲ್ಲಿಸಿದ್ದು, ಸೋಮವಾರ ಮತ್ತೆ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಜೂನ್ 8 ರಂದು ಸಹಿ ಸಂಗ್ರಹ ಅಭಿಯಾನ ಆರಂಭವಾಗಿದ್ದು, ಇಲ್ಲಿಯವರೆಗೂ 19 ಸಂಸದರು ಸಹಿ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಸ್ಪೀಕರ್ ಜೊತೆಗಿನ ಸಭೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಸಂಸದರಾದ ಸೌಗತ್ ರಾಯ್, ಶತ್ರುಘ್ನ ಸಿನ್ಹಾ, ಪ್ರತಿಮಾ ಮಂಡಲ್ ಮತ್ತಿತರರು ಮಮತಾ ಬ್ಯಾನರ್ಜಿಗೆ ನಿಷ್ಠೆ ವ್ಯಕ್ತಪಡಿಸಿದ್ದಾರೆ . ಅವರೊಂದಿಗೆ ಮುಂದುವರೆಯುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತಾ ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ; ಅವಘಡದ ಸುತ್ತ ಅನುಮಾನದ ಹುತ್ತ!

ಇರಾನ್ ಸಂಘರ್ಷ: ಯೋಜನೆಗಳನ್ನು ನೆತನ್ಯಾಹು ಅವರಿಂದ ಮುಚ್ಚಿಟ್ಟ ಟ್ರಂಪ್; ಇಸ್ರೇಲ್ ಪ್ರಧಾನಿ ಬೆನ್ನಿಗೆ ಅಮೆರಿಕ ಅಧ್ಯಕ್ಷರ ಚೂರಿ?

ಬಾಲಿವುಡ್​ನಲ್ಲಿ 'ಪಾಕ್ ಮೇಲಿನ ಪ್ರೀತಿ' ಇನ್ನೂ ಕಮ್ಮಿಯಾಗಿಲ್ಲ: ರಣವೀರ್​ ಸಿಂಗ್ ನಿಷೇಧಕ್ಕೆ ಕಂಗನಾ ಗರಂ!​

ಬ್ಯಾಂಕಾಕ್ ನಿಂದ ಮುಂಬೈ ಗೆ 11.82 ಕೋಟಿ ಮೌಲ್ಯದ ಗಾಂಜಾ ಸಾಗಣೆ: ಮಾಜಿ ಮಿಸೆಸ್ ಕೇರಳ ಬಂಧನ!

'ವಿಧವೆ ತಾಯಿ, ತಂಗಿ ಶಿಕ್ಷಣ, ಸಾಲ ಬಾಧೆ': 13ನೇ ಮಹಡಿಯಿಂದ ಜಿಗಿದು 22 ವರ್ಷದ ಡೆಲಿವರಿ ಸಿಬ್ಬಂದಿ ಸಾವು, ಬಿರುಗಾಳಿ ಎಬ್ಬಿಸಿದ ಒಂದು ಕರೆ

SCROLL FOR NEXT