ಫಾರ್ಮ್‌ಹೌಸ್‌ನಲ್ಲಿ ಶವವಾಗಿ ಪತ್ತೆಯಾದ 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ 
ದೇಶ

ಫಾರ್ಮ್‌ಹೌಸ್‌ನಲ್ಲಿ ನಡೆದ ಆಫೀಸ್ ಪಾರ್ಟಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅನುಮಾನಾಸ್ಪದ ಸಾವು!

ಮಧ್ಯರಾತ್ರಿಯ ನಂತರ, ರಾಮು ಆವರಣದಲ್ಲಿರುವ ಈಜುಕೊಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಹೋದ್ಯೋಗಿಗಳು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿಸಲಾಗಿದೆ.

ಹೈದರಾಬಾದ್: ತೆಲಂಗಾಣದ ಯದಾದ್ರಿ ಭುವನಗಿರಿ ಜಿಲ್ಲೆಯ ಫಾರ್ಮ್‌ಹೌಸ್‌ನಲ್ಲಿ ಭಾನುವಾರ ನಡೆದ ವಾರಾಂತ್ಯದ ಪಾರ್ಟಿಯಲ್ಲಿ 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.

ಮೃತ ವ್ಯಕ್ತಿಯನ್ನು ಮಂಚೇರಿಯಲ್ ಜಿಲ್ಲೆಯ ಗಾಂಡ್ಲಾ ರಾಮು ಎಂದು ಗುರುತಿಸಲಾಗಿದೆ.

ರಾಮು ಹೈದರಾಬಾದ್‌ನ ರಾಮಂತಪುರದಲ್ಲಿ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ವಾರಾಂತ್ಯದ ಪಾರ್ಟಿಗಾಗಿ ತಮ್ಮ ಕಚೇರಿಯ 15 ಸಹೋದ್ಯೋಗಿಗಳು ಮತ್ತು ತಂಡದ ನಾಯಕನೊಂದಿಗೆ ತೋಟದ ಮನೆಗೆ ಬಂದಿದ್ದರು. ಈ ಗುಂಪು ಶನಿವಾರ ಸಂಜೆಯಿಂದ ಪಾರ್ಟಿ ಪ್ರಾರಂಭಿಸಿ ತಡರಾತ್ರಿಯವರೆಗೆ ಮುಂದುವರೆಸಿದೆ ಎಂದು ವರದಿಯಾಗಿದೆ.

ಮಧ್ಯರಾತ್ರಿಯ ನಂತರ, ರಾಮು ಆವರಣದಲ್ಲಿರುವ ಈಜುಕೊಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಹೋದ್ಯೋಗಿಗಳು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿಸಲಾಗಿದೆ.

ಮಾಹಿತಿ ಪಡೆದ ಚೌಟುಪ್ಪಲ್ ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ. ಆರಂಭಿಕ ತನಿಖೆಯಲ್ಲಿ, ಮೃತ ದೇಹದ ಮೇಲೆ ಕೆಲವು ಗಾಯಗಳಿರುವುದು ಪತ್ತೆಯಾಗಿದೆ. ಇದು ಅವರ ಸಾವಿನ ಕುರಿತು ಅನುಮಾನಕ್ಕೆ ಕಾರಣವಾಗಿದೆ.

ಫಾರ್ಮ್‌ಹೌಸ್‌ನಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲ್ಲ. ಇದರಿಂದಾಗಿ ಘಟನೆ ಕುರಿತು ಪರಿಶೀಲಿಸುವುದು ಕಷ್ಟಕರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ತನಿಖಾಧಿಕಾರಿಗಳು ಈಗ ಪಾರ್ಟಿಯಲ್ಲಿ ಭಾಗವಹಿಸಿದ್ದ ಎಲ್ಲರನ್ನು ಪ್ರಶ್ನಿಸುತ್ತಿದ್ದಾರೆ.

'ಮೃತರ ತಂದೆ ಜಿ. ಅಂಜಯ್ಯ ನೀಡಿದ ದೂರಿನ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಎಲ್ಲ ಕೋನಗಳಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ" ಎಂದು ಚೌಟುಪ್ಪಲ್ ಇನ್ಸ್‌ಪೆಕ್ಟರ್ ಎನ್ ಮನ್ಮತ ರಾವ್ ಹೇಳಿದ್ದಾರೆ.

ಶವದ ಮೇಲೆ ಗಾಯಗಳು ಕಂಡುಬಂದಿರುವುದರಿಂದ, ಪೊಲೀಸರು ವಿವರವಾದ ತನಿಖೆ ನಡೆಸುತ್ತಿದ್ದಾರೆ. ಪಾರ್ಟಿಯಲ್ಲಿ ಹಾಜರಿದ್ದ ಎಲ್ಲರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ.

ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಕೊಲೆ ಎಂದು ಆರೋಪಿಸಿರುವುದರಿಂದ, ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸಲು ಪೊಲೀಸರು ವಿಧಿವಿಜ್ಞಾನ ಮತ್ತು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

PoK ಚುನಾವಣೆ ಒಂದು ನೆಪ; ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡುಗಳ ಬಳಕೆ: ಭಾರತ ಖಂಡನೆ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

'ನನ್ನ ಅಮ್ಮ ಒಂಥರಾ ಗೂಢಚಾರಿ ಇದ್ದಂತೆ; ಅಪ್ಪ CM ಆಗಿದ್ದು ಐತಿಹಾಸಿಕ ಕ್ಷಣ': ಫಸ್ಟ್ ಟೈಮ್ ಮನಬಿಚ್ಚಿ ಮಾತನಾಡಿದ ವಿಜಯ್ ಪುತ್ರ!