ಭಾರತದಲ್ಲಿ ಮಳೆ ಕೊರತೆ 
ದೇಶ

ಮರೆಯಾಯ್ತಾ ಮುಂಗಾರು?: ಜೂನ್ 4 ರಿಂದ 18ರವರೆಗೆ ಭಾರತದಲ್ಲಿ ಶೇ.41 ರಷ್ಟು ಮಳೆ ಕೊರತೆ!

ದಕ್ಷಿಣ ಮಹಾರಾಷ್ಟ್ರದ ಮೇಲೆ ನೈಋತ್ಯ ಮುಂಗಾರು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ಜೂನ್ 4ರಿಂದ ಜೂನ್ 18ರವರೆಗೆ ದೇಶದಾದ್ಯಂತ ಶೇ.41ರಷ್ಟು ಮಳೆ ಕೊರತೆ ದಾಖಲಾಗಿದೆ.

ನವದೆಹಲಿ: ಭಾರತದಲ್ಲಿ ನೈರುತ್ಯ ಮುಂಗಾರು ಮಾರುತಗಳು ದುರ್ಬಲಗೊಂಡಿದ್ದು, ಶೇ.41 ಮಳೆ ಕೊರತೆಯಾಗಿದೆ ಎಂದು ಹೇಳಲಾಗಿದೆ.

ದಕ್ಷಿಣ ಮಹಾರಾಷ್ಟ್ರದ ಮೇಲೆ ನೈಋತ್ಯ ಮುಂಗಾರು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ಜೂನ್ 4ರಿಂದ ಜೂನ್ 18ರವರೆಗೆ ದೇಶದಾದ್ಯಂತ ಶೇ.41ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇತ್ತೀಚಿನ ಅಂಕಿಅಂಶಗಳು ತಿಳಿಸಿವೆ.

ಈ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯವಾಗಿ ಸುರಿಯಬೇಕಿದ್ದ 72.2 ಮಿ.ಮೀ. ಮಳೆಯ ಬದಲಾಗಿ ಕೇವಲ 42.6 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ.

ಹವಾಮಾನ ಇಲಾಖೆಯ ಪ್ರದೇಶವಾರು ಮಳೆ ವ್ಯತ್ಯಾಸ ನಕ್ಷೆಯ ಪ್ರಕಾರ, ಮಧ್ಯ ಭಾರತದಲ್ಲಿ ಶೇ.67, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.42, ದಕ್ಷಿಣ ಪರ್ಯಾಯ ದ್ವೀಪ ಪ್ರದೇಶದಲ್ಲಿ ಶೇ.22 ಹಾಗೂ ವಾಯವ್ಯ ಭಾರತದಲ್ಲಿ ಶೇ.6ರಷ್ಟು ಮಳೆ ಕೊರತೆ ಕಂಡುಬಂದಿದೆ.

ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ಉಳಿದ ಭಾಗಗಳಿಗೆ ನೈಋತ್ಯ ಮುಂಗಾರು ಮುಂದುವರಿಯಲು ಸಾಧ್ಯವಾಗದಿರುವುದಕ್ಕೆ "ಅನುಕೂಲಕರವಾದ ದೊಡ್ಡ ಪ್ರಮಾಣದ ಹವಾಮಾನ ಪರಿಸ್ಥಿತಿಗಳ ಕೊರತೆ" ಪ್ರಮುಖ ಕಾರಣವಾಗಿದೆ ಎಂದು ಗುರುವಾರ ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಉತ್ತರದತ್ತ ಸಾಗುವ ಪ್ರಕ್ರಿಯೆ ನಿಧಾನಗೊಳ್ಳಲು ಐದು ಪ್ರಮುಖ ಕಾರಣಗಳಿದ್ದು, ಮೊದಲನೆಯದಾಗಿ, ಪ್ರಸ್ತುತ ಮುಂಗಾರು ಪ್ರವಾಹಕ್ಕೆ ಅರಬ್ಬೀ ಸಮುದ್ರದಿಂದ ಬಲವಾದ ತೇವಾಂಶಭರಿತ ಗಾಳಿಯ ಅಲೆ (ಸರ್ಜ್) ಲಭ್ಯವಾಗುತ್ತಿಲ್ಲ ಎಂದು ಐಎಂಡಿ ತಿಳಿಸಿದೆ.

"ಇಂತಹ ಬಲವಾದ ಗಾಳಿಯ ಅಲೆಗಳು ಸಾಮಾನ್ಯವಾಗಿ ಹೆಚ್ಚಿನ ತೇವಾಂಶವನ್ನು ಒಳನಾಡಿನತ್ತ ತಂದು, ವ್ಯಾಪಕ ಮಳೆಯಾಗಲು ಕಾರಣವಾಗುತ್ತವೆ. ಇದರಿಂದ ಮುಂಗಾರು ಮತ್ತಷ್ಟು ಪ್ರದೇಶಗಳಿಗೆ ಮುನ್ನಡೆಯಲು ಸಹಕಾರಿಯಾಗುತ್ತದೆ" ಎಂದು ಹವಾಮಾನ ಇಲಾಖೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

MS Dhoni Bike Collection: ಅತ್ಯಂತ ದುಬಾರಿ ಬೈಕ್ ಯಾವುದು ಗೊತ್ತಾ? ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ!Video

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!