ತಮಿಳು ನಾಡು ವಿಧಾನಸಭೆಯಲ್ಲಿ ಯೋಜನೆ ವಿರುದ್ಧ ನಿರ್ಣಯ ಅಂಗೀಕಾರ  
ದೇಶ

ಕರ್ನಾಟಕದ ಮೇಕೆದಾಟು ಯೋಜನೆಗೆ ವಿರೋಧ: ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ-Video

ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಮಂಡಿಸಿದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಈ ನಿರ್ಣಯವು ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿತು.

ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಮಂಡಿಸಿದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಈ ನಿರ್ಣಯವು ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿತು.

ಈ ಗೌರವಾನ್ವಿತ ಸದನವು ಕಾವೇರಿ ಜಲ ವಿವಾದ ನ್ಯಾಯಮಂಡಳಿಯು 2007ರ ಫೆಬ್ರವರಿ 5ರಂದು ನೀಡಿದ ಅಂತಿಮ ತೀರ್ಪು ಹಾಗೂ ಸುಪ್ರೀಂ ಕೋರ್ಟ್ 2018ರ ಫೆಬ್ರವರಿ 16ರಂದು ನೀಡಿದ ತೀರ್ಪನ್ನು ಗೌರವಿಸದೆ, ಸಂಬಂಧಿತ ಜಲಾನಯನ ರಾಜ್ಯಗಳ ಒಪ್ಪಿಗೆ ಪಡೆಯದೆ ಮತ್ತು ಕೇಂದ್ರ ಸರ್ಕಾರದ ಯಾವುದೇ ಅನುಮೋದನೆ ಪಡೆಯದೆ ಕಾವೇರಿ ನದಿಗೆ ಅಡ್ಡಲಾಗಿ ಮೆಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರವು ಕೈಗೊಂಡಿರುವ ಏಕಪಕ್ಷೀಯ ಪ್ರಯತ್ನವನ್ನು ಈ ಸದನ ತೀವ್ರವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ವಿಜಯ್ ಮಂಡಿಸಿದ ನಿರ್ಣಯದಲ್ಲಿ ತಿಳಿಸಿದರು.

ಮೇಕೆದಾಟು ಯೋಜನೆಯು ಅಸ್ತಿತ್ವದಲ್ಲಿರುವ ಕಾನೂನು ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ಕಾವೇರಿ ನೀರಿನ ಮೇಲಿನ ತಮಿಳುನಾಡಿನ ಹಕ್ಕುಗಳಿಗೆ ಪ್ರತಿಕೂಲ ಪರಿಣಾಮ ಉಂಟುಮಾಡಲಿದೆ ಎಂದು ಪ್ರತಿಪಾದಿಸಿದರು.

ಈ ನಿರ್ಣಯದಲ್ಲಿ, ಮೇಕೆದಾಟು ಯೋಜನೆಗೆ ಅಗತ್ಯವಿರುವ ಎಲ್ಲ ರೀತಿಯ ಅನುಮೋದನೆಗಳನ್ನು ಕೇಂದ್ರ ಸರ್ಕಾರ ನಿರಾಕರಿಸಬೇಕು ಎಂದು ಒತ್ತಾಯಿಸಲಾಯಿತು. ತಾಂತ್ರಿಕ ಹಾಗೂ ಪರಿಸರ ಅನುಮೋದನೆ ಸೇರಿದಂತೆ ಯಾವುದೇ ರೀತಿಯ ಅನುಮತಿಯನ್ನು ಯೋಜನೆಗೆ ನೀಡಬಾರದು ಎಂದು ನಿರ್ಣಯದಲ್ಲಿ ಆಗ್ರಹಿಸಲಾಯಿತು.

ಸರ್ವಾನುಮತದಿಂದ ಒಪ್ಪಿಗೆ

ಕಾವೇರಿ ಜಲಾನಯನ ಪ್ರದೇಶವು ನೀರಿನ ಕೊರತೆ ಹೊಂದಿರುವ ಪ್ರದೇಶವಾಗಿದ್ದು, ಈಗಾಗಲೇ ಜಾರಿಯಲ್ಲಿರುವ ನೀರು ಹಂಚಿಕೆ ಒಪ್ಪಂದದ ಆಧಾರದ ಮೇಲೆ ನಿರ್ವಹಣೆ ನಡೆಯುತ್ತಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಯಾವುದೇ ಹೊಸ ಯೋಜನೆಯನ್ನು ಕೈಗೊಳ್ಳಬಾರದು ಹಾಗೂ ಹೆಚ್ಚುವರಿ ಪ್ರಮಾಣದ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡಬಾರದು ಎಂದು ನಿರ್ಣಯವು ಒತ್ತಿಹೇಳಿದೆ.

ತಮಿಳುನಾಡು ಸರ್ಕಾರವು ಕೇಂದ್ರ ಜಲ ಆಯೋಗ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದು, ರಾಜ್ಯದ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಸಲ್ಲಿಸಿರುವ ವಿವರವಾದ ಯೋಜನಾ ವರದಿ (DPR)ಯನ್ನು ಪರಿಶೀಲಿಸಬಾರದು, ಪ್ರಕ್ರಿಯೆಗೊಳಿಸಬಾರದು ಹಾಗೂ ಅನುಮೋದಿಸಬಾರದು ಎಂದು ಆಗ್ರಹಿಸಿದೆ.

ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯವನ್ನು ತಮಿಳು ನಾಡು ವಿಧಾನಸಭೆಯ ಎಲ್ಲಾ ಪಕ್ಷಗಳ ಸದಸ್ಯರು ಭಿನ್ನಾಭಿಪ್ರಾಯವಿಲ್ಲದೆ ಸರ್ವಾನುಮತದಿಂದ ಅಂಗೀಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಲಾಂಗ್​ನಿಂದ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್‌; ಪುಡಾರಿ ವಿರುದ್ಧ FIR

NEET UG 2026ಗೆ ಮತ್ತೊಂದು ಬಲಿ; ಮರು ಪರೀಕ್ಷೆಗೂ ಮುನ್ನ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!