ನಿರ್ಮಾಣ ಹಂತದ ಆಂಜನೇಯ ದೇವಸ್ಥಾನದ ಛಾವಣಿ ಕುಸಿತ 
ದೇಶ

Video: ನಿರ್ಮಾಣ ಹಂತದ ಆಂಜನೇಯ ದೇವಸ್ಥಾನದ ಛಾವಣಿ ಕುಸಿತ; 4 ಭಕ್ತರು ಸಾವು, 20 ಮಂದಿಗೆ ಗಾಯ

ಇಂದು ಮಧ್ಯಾಹ್ನ 3.30 ರ ಸುಮಾರಿಗೆ ಪರ್ಭಣಿ ಜಿಲ್ಲೆಯ ಯಶ್ವಾಡಿ ದೇವಸ್ಥಾನದ ಗರ್ಭಗುಡಿಯ ಮುಂಭಾಗದ ನಿರ್ಮಾಣ ಹಂತದ ಛಾವಣಿ ಕುಸಿದು ಬಿದ್ದಿದ್ದು, ಸುಮಾರು 20 ಭಕ್ತರು ಗಾಯಗೊಂಡಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಪರ್ಭಣಿಯಲ್ಲಿ ನಿರ್ಮಾಣ ಹಂತದ ಆಂಜನೇಯಸ್ವಾಮಿ ದೇವಸ್ಥಾನದ ಛಾವಣಿ ಕುಸಿದು ಬಿದ್ದು, ನಾಲ್ಕು ಭಕ್ತರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಭಕ್ತರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇಂದು ಮಧ್ಯಾಹ್ನ 3.30 ರ ಸುಮಾರಿಗೆ ಪರ್ಭಣಿ ಜಿಲ್ಲೆಯ ಯಶ್ವಾಡಿ ದೇವಸ್ಥಾನದ ಗರ್ಭಗುಡಿಯ ಮುಂಭಾಗದ ನಿರ್ಮಾಣ ಹಂತದ ಛಾವಣಿ ಕುಸಿದು ಬಿದ್ದಿದ್ದು, ಸುಮಾರು 20 ಭಕ್ತರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿ, ಅವಶೇಷಗಳಡಿ ಸಿಲುಕಿದ್ದ ಭಕ್ತರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ 20 ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾನವತ್ ತಹಸೀಲ್ದಾರ್ ಪಾಂಡುರಂಗ ಮೊಚೆವಾಡ್ ಅವರ ಮಾಹಿತಿ ಪ್ರಕಾರ, ಗಾಯಾಳುಗಳ ಪೈಕಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವೆ ಮೇಘನಾ ಬೋರ್ಡಿಕರ್ ಅವರು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ಮತ್ತು ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ರೊಚ್ಚಿಗೆದ್ದ ಇರಾನ್; ಹಾರ್ಮುಜ್ ಜಲಸಂಧಿ ಮತ್ತೆ ಬಂದ್!

3rd ODI: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ, 3-0 ಅಂತರದಲ್ಲಿ ಏಕದಿನ ಸರಣಿ ಕ್ಲೀನ್ ಸ್ವೀಪ್!

ಶೀಘ್ರದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ? ರಾಜ್ಯದ ಹಿತಕ್ಕಾಗಿ ಕ್ರಮ ಎಂದ CM ಡಿಕೆ ಶಿವಕುಮಾರ್

3rd ODI: ಆಫ್ಘಾನಿಸ್ತಾನಕ್ಕೆ ಪೆನಾಲ್ಟಿ ಶಾಕ್, ಇನ್ನಿಂಗ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ 5 ರನ್, ಮೊದಲ ಓವರ್ ನಲ್ಲೇ 23 ರನ್: ವಿಚಿತ್ರ ದಾಖಲೆ!

'Bhooki Bhumi: ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಬಾಲಿವುಡ್ ನಟಿ 'ಭೂಮಿ ಪೆಡ್ನೇಕರ್', ಏನೆಲ್ಲಾ ಮಾಡಿದ್ರು? ಈ Video ನೋಡಿ...