ತಮಿಳು ನಾಡು ಸಚಿವ ಎನ್. ಆನಂದ್ 
ದೇಶ

ಕರ್ನಾಟಕ ಮೇಕೆದಾಟು ಅಣೆಕಟ್ಟು ನಿರ್ಮಿಸಲು ನಾವು ಬಿಡುವುದಿಲ್ಲ: ತಮಿಳುನಾಡು ಸಚಿವ ಎನ್. ಆನಂದ್-Video

ನಮ್ಮ ಟಿವಿಕೆ ಸರ್ಕಾರವು ಕಾವೇರಿ ನೀರಿನ ವಿಷಯದಲ್ಲಿ ಕರ್ನಾಟಕ ಜೊತೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ನಮ್ಮ ಟಿವಿಕೆ ಸರ್ಕಾರವು ಕಾವೇರಿ ನೀರಿನ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಮೆಕೇದಾಟು ವಿಷಯ ಪ್ರಸ್ತಾಪವಾದ ತಕ್ಷಣವೇ ಮುಖ್ಯಮಂತ್ರಿ ಅವರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಅದರ ಮರುದಿನವೇ, ಮೇ 26ರಂದು, ಪತ್ರದ ಮೂಲಕವೂ ಹಾಗೂ ಪ್ರಧಾನಮಂತ್ರಿಯವರೊಂದಿಗೆ ನಡೆದ ವೈಯಕ್ತಿಕ ಭೇಟಿಯಲ್ಲಿಯೂ ಮೆಕೇದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಮುಖ್ಯಮಂತ್ರಿ ಅವರು ಬಲವಾಗಿ ಒತ್ತಾಯಿಸಿದ್ದಾರೆ ಎಂದು ತಮಿಳು ನಾಡು ಸಚಿವ ಎನ್. ಆನಂದ್ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (National Green Tribunal) ಪ್ರಧಾನ ಪೀಠದ ಮುಂದೆ ಅರ್ಜಿಯನ್ನೂ ಸಲ್ಲಿಸಲಾಗಿದೆ ಎಂದರು.

ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಪ್ರಧಾನಮಂತ್ರಿಯನ್ನು ನೇರವಾಗಿ ಭೇಟಿ ಮಾಡಿ ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ. ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಹೊಸ ನ್ಯಾಯಮಂಡಳಿ (Tribunal) ಅಗತ್ಯವಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಮೇಕೆದಾಟು ಅಣೆಕಟ್ಟಿಗೆ ವಿರೋಧವಾಗಿ ವಿಧಾನಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯವನ್ನು ಪ್ರಧಾನಮಂತ್ರಿಗೆ ಕಳುಹಿಸಲಾಗಿದೆ ಎಂದರು.

ಹೊಸ ನ್ಯಾಯಮಂಡಳಿ ರಚನೆಯಾದರೂ ತಮಿಳುನಾಡಿಗೆ ಯಾವುದೇ ಹಾನಿಯಾಗುವುದಿಲ್ಲ. ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ಇರುವ ಅಪಾಯ ಇನ್ನೂ ದೂರವಾಗಿಲ್ಲ. ಕಾವೇರಿ ಪ್ರಾಧಿಕಾರವು ಕರ್ನಾಟಕದ ಸವಿಸ್ತಾರ ಯೋಜನಾ ವರದಿಯನ್ನು (DPR) ತಿರಸ್ಕರಿಸಿದೆ ಎಂದು ಹೇಳುವುದು ತಪ್ಪು. ಕಾವೇರಿ ಪ್ರಾಧಿಕಾರವು ಕರ್ನಾಟಕದ ವರದಿಯನ್ನು ತಿರಸ್ಕರಿಸದೆ, ಅದನ್ನು ಹಾಗೆಯೇ ಜಲಸಂಪನ್ಮೂಲ ಇಲಾಖೆಯ ಪ್ರಾಧಿಕಾರಕ್ಕೆ ಕಳುಹಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸ್ವಿಟ್ಜರ್ಲೆಂಡ್‌ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!

ಟ್ರಂಪ್ ಬೆದರಿಕೆಗೆ ಇರಾನ್ ತಿರುಗೇಟು: ಶಾಂತಿ ಮಾತುಕತೆ ಮಧ್ಯೆಯೇ ವಾಕ್‌ಔಟ್‌; ಬೆದರಿಕೆಗಳಿಗೆ ಹೆದರಲ್ಲ-ನಮ್ಮ ತಾಳ್ಮೆ ಪರೀಕ್ಷಿಸಬೇಡಿ- ಅಮೆರಿಕಕ್ಕೆ ಕಠಿಣ ಎಚ್ಚರಿಕೆ

ಆಯುಷ್ಮಾನ್ ವಿಮೆ ಅಲ್ಲ ಭರವಸೆ ಯೋಜನೆ, ಜನಔಷಧಿ ಕೇಂದ್ರಗಳ ಸರಿಪಡಿಸಬೇಕು: ಸಚಿವ ಯು.ಟಿ. ಖಾದರ್‌ (INTERVIEW)

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ..!

Iran ಅಣ್ವಸ್ತ್ರ ಹೊಂದಲು ಬಿಡಲ್ಲ, Hezbollah ಸಂಪೂರ್ಣ ನಾಶವಾಗುವವರೆಗೂ ಹಿಂದೆ ಸರಿಯಲ್ಲ: ನೆತನ್ಯಾಹು ಖಡಕ್ ಎಚ್ಚರಿಕೆ