ಮೊಬೈಲ್ ಟವರ್ ಏರಿದ 17ರ ಹುಡುಗಿ 
ದೇಶ

ಪ್ರಿಯಕರನ ಬಿಡುಗಡೆಗಾಗಿ ಬಾಲಕಿ ಹೈ-ಡ್ರಾಮಾ: ಮೊಬೈಲ್ ಟವರ್ ಏರಿದ 17ರ ಹುಡುಗಿ!

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಅಪ್ರಾಪ್ತ ಬಾಲಕಿಯ ಪ್ರಿಯಕರನನ್ನು ಎರಡು ದಿನಗಳ ಹಿಂದೆ, ಅಪಹರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ಬೊಕಾರೊ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಮಂಗಳವಾರ 17 ವರ್ಷದ ಬಾಲಕಿಯೊಬ್ಬಳು 100 ಅಡಿ ಎತ್ತರದ ಮೊಬೈಲ್ ಟವರ್ ಹತ್ತಿ ತನ್ನ 22 ವರ್ಷದ ಗೆಳೆಯನನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಅಪ್ರಾಪ್ತ ಬಾಲಕಿಯ ಪ್ರಿಯಕರನನ್ನು ಎರಡು ದಿನಗಳ ಹಿಂದೆ, ಆಕೆಯನ್ನು ಅಪಹರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

"ಆದರೆ ಹುಡುಗಿ ಇಂದು ಬೆಳಗ್ಗೆ ಗೋಮಿಯಾದ ಧೆಂಧೆ ಗ್ರಾಮದಲ್ಲಿರುವ ಮೊಬೈಲ್ ಟವರ್ ಹತ್ತಿದ್ದಾಳೆ ಮತ್ತು ತನ್ನ ಬೇಡಿಕೆ ಈಡೇರಿಸದಿದ್ದರೆ ಮೇಲಿನಿಂದ ಹಾರುವುದಾಗಿ ಬೆದರಿಕೆ ಹಾಕುತ್ತಿದ್ದಾಳೆ. ಬಾಲಕಿ ಪಕ್ಕದ ಲಾಲ್‌ಪಾನಿಯಾ ಪ್ರದೇಶದವಳು" ಎಂದು ಗೋಮಿಯಾ ಪೊಲೀಸ್ ಠಾಣಾಧಿಕಾರಿ ಪ್ರಫುಲ್ ಕುಮಾರ್ ಮಹ್ತೊ ಅವರು ಪಿಟಿಐಗೆ ತಿಳಿಸಿದ್ದಾರೆ.

ಬಾಲಕಿಯನ್ನು ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಬಾಲಕಿಯ ತಾಯಿ ಜೂನ್ 18 ರಂದು ತನ್ನ ಮಗಳನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು, ಬಾಲಕಿ ಮತ್ತು ಆಕೆಯ ಪ್ರೇಮಿಯನ್ನು ರಾಂಚಿಯ ಸುಖ್‌ದೇವ್ ನಗರದಲ್ಲಿ ಪತ್ತೆಹಚ್ಚಲಾಯಿತು ಮತ್ತು ಹುಡುಗಿಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಲಾಯಿತು ಎಂದು ಲಾಲ್‌ಪಾನಿಯಾ ಪೊಲೀಸ್ ಠಾಣಾಧಿಕಾರಿ ಜೈಪ್ರಕಾಶ್ ಎಕ್ಕಾ ತಿಳಿಸಿದ್ದಾರೆ.

ರಾಂಚಿಯ ಮೂಲದ ಆ ವ್ಯಕ್ತಿ ಪ್ರಸ್ತುತ ತೆನುಘಾಟ್ ಜೈಲಿನಲ್ಲಿದ್ದಾನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?

ನಾಲಿಗೆ ಬಿಗಿ ಹಿಡಿದು ಮಾತನಾಡಿ, ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ಈಶ್ವರಪ್ಪಗೆ ಬಿಸಿ ಪಾಟೀಲ್ ಎಚ್ಚರಿಕೆ

'ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲುಗಳು': Bigg Boss ಮಾಜಿ ಸ್ಪರ್ಧಿಗಳಿಗೆ ಸಂಕಷ್ಟ; ಕಿಶನ್, ನಿವೇದಿತಾ ಗೌಡ ವಿರುದ್ಧ ದೂರು!

Cricket: IPL 2026 ಎಫೆಕ್ಟ್, ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಸೂರ್ಯಾಂಶ್ ಶೆಡ್ಗೆ ಭಾರತ ಟಿ20 ತಂಡಕ್ಕೆ ಆಯ್ಕೆ

ಫ್ಲೈಓವರ್ ನಿರ್ಮಿಸುತ್ತಿರುವಾಗ ರಸ್ತೆಗೆ ವೈಟ್‌ಟಾಪಿಂಗ್ ಏಕೆ? ಬಿಲ್ ಗಾಗಿ ಕಾಮಗಾರಿಯೇ? B-SMILE ನಿರ್ದೇಶಕರಿಗೆ ಕೃಷ್ಣ ಬೈರೇಗೌಡ ತರಾಟೆ