ದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟಿಸಿದ ಆಂಧ್ರ CM 
ದೇಶ

ದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟಿಸಿದ ಆಂಧ್ರ CM; ಪ್ರತಿ ವರ್ಷ 900 ಕೆಜಿ ಚಿನ್ನ ಉತ್ಪಾದನೆ!

ಈ ಖಾಸಗಿ ಚಿನ್ನದ ಗಣಿಗಾರಿಕೆಯನ್ನು ಜಿಯೋ ಮೈಸೂರು ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಡೆಕ್ಕನ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಬರೋಬ್ಬರಿ 405 ಕೋಟಿ ರೂ. ಹೂಡಿಕೆಯೊಂದಿಗೆ ಆರಂಭಿಸುತ್ತಿವೆ.

ಕರ್ನೂಲ್: ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಬುಧವಾರ ಕರ್ನೂಲ್ ಜಿಲ್ಲೆಯ ತುಗ್ಗಲಿ ಮಂಡಲದ ಜೊನ್ನಗಿರಿಯಲ್ಲಿ ದೇಶದ ಮೊದಲ ಖಾಸಗಿ ಚಿನ್ನದ ಗಣಿಗಾರಿಕೆ ಮತ್ತು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು.

ಈ ಖಾಸಗಿ ಚಿನ್ನದ ಗಣಿಗಾರಿಕೆಯನ್ನು ಜಿಯೋ ಮೈಸೂರು ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಡೆಕ್ಕನ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಬರೋಬ್ಬರಿ 405 ಕೋಟಿ ರೂ. ಹೂಡಿಕೆಯೊಂದಿಗೆ ಆರಂಭಿಸುತ್ತಿವೆ.

ಸ್ವಾತಂತ್ರ್ಯದ ನಂತರ ಭಾರತದ ಏಕೈಕ ಖಾಸಗಿ ವಲಯದ ಪ್ರಾಥಮಿಕ ಚಿನ್ನದ ಗಣಿ(Gold Mine) ಎಂದು ಕರೆಯಲ್ಪಡುವ ಈ ಉದ್ಯಮವು ದೇಶದ ಗಣಿಗಾರಿಕೆ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲನ್ನು ಪ್ರತಿನಿಧಿಸುತ್ತಿದ್ದು, ಇದು ರಾಜ್ಯದಲ್ಲಿ ವಾಣಿಜ್ಯಿಕವಾಗಿ ಚಿನ್ನದ ಉತ್ಪಾದನೆಗೆ ನಾಂದಿ ಹಾಡಿದೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಚಿವರಾದ ಕೊಲ್ಲು ರವೀಂದ್ರ, ನಿಮ್ಮಲ ರಾಮನಾಯ್ಡು ಮತ್ತು ಟಿಜಿ ಭಾರತ್ ಅವರೊಂದಿಗೆ ಇಂದು ಎರಡನೇ ಘಟಕಕ್ಕೆ ಅಡಿಪಾಯ ಹಾಕುವ ಮೂಲಕ ಮೊದಲ ಘಟಕಕ್ಕೆ ಚಾಲನೆ ನೀಡಿದರು.

ಈ ಯೋಜನೆಯು ಮೊದಲ ಹಂತದಲ್ಲಿ 600 ಎಕರೆಗಳನ್ನು ಒಳಗೊಂಡಿದೆ. ಅಂತಿಮವಾಗಿ ರಾಜ್ಯ ಸರ್ಕಾರವು ಹಂಚಿಕೆ ಮಾಡಿದ 1,500 ಎಕರೆಗಳಲ್ಲಿ ಗಣಿ ಕಾರ್ಯಾಚರಣೆಗಳು ವಿಸ್ತರಿಸುತ್ತವೆ.

ಈ ಘಟಕವು ತನ್ನ ಮೊದಲ ವರ್ಷದ ಕಾರ್ಯಾಚರಣೆಯಲ್ಲಿ 400 ಕೆಜಿಯಷ್ಟು ಚಿನ್ನವನ್ನು ಉತ್ಪಾದಿಸುವ ನಿರೀಕ್ಷೆ ಇದ್ದು, ಎರಡನೇ ವರ್ಷದಿಂದ ವಾರ್ಷಿಕ ಉತ್ಪಾದನೆಯು 900 ಕೆಜಿಗೆ ಹೆಚ್ಚಾಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ

ಮಂಡ್ಯ: ಮುತ್ತತ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ದುರ್ಘಟನೆ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ!

Mr. ಪ್ರಿಯಾಂಕ್ ಖರ್ಗೆ, ಸೀಟ್‌ಬೆಲ್ಟ್‌, ವೇಗದ ಮಿತಿ ನಿಮಗೆ ಅನ್ವಯಿಸುವುದಿಲ್ಲವೇ?

"ಅಪ್ಪಾ, ಅಮ್ಮಾ... ನಾನು ತಪ್ಪು ಮಾಡಿದೆ..." : ಗರ್ಭಿಣಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ, ಬಲಪಂಥೀಯ ಕಾರ್ಯಕರ್ತನ ವಿರುದ್ಧ ತನಿಖೆ

CUET UG 2026: BJP ಶಾಸಕ ಕೈಲಾಶ್ ಗೆಹ್ಲೋಟ್ ಪುತ್ರಿ ದೇಶಕ್ಕೆ ಟಾಪರ್; ಸಾಧನೆ ಬಗ್ಗೆ ದೇವಿನಾ ಹೇಳಿದ್ದೇನು?