ಅಯೋಧ್ಯೆ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಂತೆಯೇ ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ವಿವಾದ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಅಯೋಧ್ಯೆ ರಾಮ ಮಂದಿರಕ್ಕೆ ನೀಡಲಾದ ದೇಣಿಗೆಯ ಹಣ ಮತ್ತು ಕಾಣಿಕೆ ದುರುಪಯೋಗ ಆರೋಪವನ್ನು ವಿರೋಧ ಪಕ್ಷಗಳು ತಮ್ಮ ಪ್ರಚಾರದ ಪ್ರಮುಖ ವಿಷಯವಾಗಿ ಇಟ್ಟುಕೊಂಡು ಬಿಜೆಪಿ ವಿರುದ್ಧ ಮುಗಿಬಿದ್ದಿವೆ.
ಈ ಆರೋಪಗಳ ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ನೀಡಿದ ದೂರಿನ ಮೇರೆಗೆ ಅಯೋಧ್ಯೆ ರಾಮ ಮಂದಿರದಲ್ಲಿ ಕಾಣಿಕೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರ ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಎಫ್ಐಆರ್ನಲ್ಲಿ ಹೆಸರಿಸಲಾಗಿದೆ.
ಟಿನ್ನು ಯಾದವ್ ಅವರನ್ನು ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ. ಕೃಷ್ಣ ಮೋಹನ್ ನೀಡಿದ ದೂರಿನ ಮೇರೆಗೆ BNS ಕಾಯ್ದೆಯ ಸೆಕ್ಷನ್ 306, 316, 317, ಮತ್ತು 61ರ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಫ್ ಐಆರ್ ನಲ್ಲಿ ಯಾವುದೇ ಪ್ರಮುಖ ವ್ಯಕ್ತಿಗಳನ್ನು ಹೆಸರಿಸಿಲ್ಲ. ಬಂಧಿತರಲ್ಲಿ ಆರು ಮಂದಿ ಕ್ಯಾಷಿಯರ್ ಆಗಿದ್ದಾರೆ. ಎಸ್ ಐಟಿ ತನಿಖಾ ವರದಿ ನಂತರ ಸಲ್ಲಿಕೆ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಟಿನ್ನು ಯಾದವ್ ಮತ್ತು ಅಂಕುಲ್ ಮಿಶ್ರಾ ವಿರುದ್ಧ ವಂಚನೆ, ಕ್ರಿಮಿನಲ್ ಪಿತೂರಿ ಆರೋಪದಲ್ಲಿ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.