ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಿದ ಸಿಎಂ ಜೋಸೆಫ್ ವಿಜಯ್ 
ದೇಶ

Video: 300 ಹೊಸ ಬಸ್‌ಗಳಿಗೆ ಚಾಲನೆ ನೀಡಿ ಅದರಲ್ಲೇ ಪ್ರಯಾಣಿಸಿದ CM Vijay

ಸುಮಾರು 127.21 ಕೋಟಿ ವೆಚ್ಚದಲ್ಲಿ ಖರೀದಿಸಲಾದ ಈ 300 ಹೊಸ ಬಸ್‌ಗಳ ಪೈಕಿ 164 ಡೀಸೆಲ್ ಬಸ್‌ಗಳು ಹಾಗೂ ಪರಿಸರ ಸ್ನೇಹಿ, ಬಿಎಸ್-6 ಮಾಲಿನ್ಯ ನಿಯಮಗಳಿಗೆ ಅನುಗುಣವಾದ 136 ಸಿಎನ್‌ಜಿ ಬಸ್‌ಗಳಾಗಿವೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 300 ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಬಳಿಕ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿದರು.

ತಮಿಳುನಾಡು ರಾಜ್ಯದ ಸಾರಿಗೆ ಸೇವೆಗಳನ್ನು ಸುಧಾರಿಸುವ ಹಾಗೂ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಉತ್ತೇಜಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುವ ಉದ್ದೇಶದಿಂದ ಮುಖ್ಯಮಂತ್ರಿ ವಿಜಯ್ ಈ ಸಾಂಕೇತಿಕ ಪ್ರಯಾಣ ಕೈಗೊಂಡರು ಎನ್ನಲಾಗಿದೆ.

ಸುಮಾರು 127.21 ಕೋಟಿ ವೆಚ್ಚದಲ್ಲಿ ಖರೀದಿಸಲಾದ ಈ 300 ಹೊಸ ಬಸ್‌ಗಳ ಪೈಕಿ 164 ಡೀಸೆಲ್ ಬಸ್‌ಗಳು ಹಾಗೂ ಪರಿಸರ ಸ್ನೇಹಿ, ಬಿಎಸ್-6 ಮಾಲಿನ್ಯ ನಿಯಮಗಳಿಗೆ ಅನುಗುಣವಾದ 136 ಸಿಎನ್‌ಜಿ ಬಸ್‌ಗಳಾಗಿವೆ.

ಪ್ರಯಾಣಿಕರಿಗೆ ಉತ್ತಮ ಸಂಪರ್ಕ ವ್ಯವಸ್ಥೆ, ಕಡಿಮೆ ಕಾಯುವಿಕೆ ಸಮಯ ಹಾಗೂ ಸುರಕ್ಷಿತ ಮತ್ತು ಆರಾಮದಾಯಕ ಸಂಚಾರ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಬಸ್‌ಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ನಿಯೋಜಿಸಲಾಗಿದೆ.

ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್‌ಗಳಿಗೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ ವಿಜಯ್ ಅವರು ಹೊಸದಾಗಿ ಸೇರ್ಪಡೆಯಾದ ಬಸ್‌ವೊಂದರಲ್ಲಿ ಪ್ರಯಾಣಿಸಿ, ಚಾಲಕರು ಮತ್ತು ಸಾರಿಗೆ ಇಲಾಖೆಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ ಅವರನ್ನು ಅಭಿನಂದಿಸಿದರು.

ರಾಜ್ಯದ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ ಜಿಪಿಎಸ್ ಆಧಾರಿತ ವಾಹನ ಟ್ರ್ಯಾಕಿಂಗ್ ವ್ಯವಸ್ಥೆ, ಡಿಜಿಟಲ್ ಟಿಕೆಟ್ ಸಂಗ್ರಹಣೆ, ಪ್ರಯಾಣಿಕರ ಮಾಹಿತಿ ವ್ಯವಸ್ಥೆ ಹಾಗೂ ಪ್ರಮುಖ ಬಸ್ ನಿಲ್ದಾಣಗಳಲ್ಲಿ 24 ಗಂಟೆಗಳ ಸಹಾಯ ಕೇಂದ್ರಗಳನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ವಿಜಯ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಅಂದಹಾಗೆ ತಮಿಳುನಾಡಿನ ಸರ್ಕಾರಿ ಸಾರಿಗೆ ನಿಗಮಗಳು ಪ್ರಸ್ತುತ 21,500ಕ್ಕೂ ಅಧಿಕ ಬಸ್‌ಗಳನ್ನು ಸಂಚಲನಗೊಳಿಸುತ್ತಿದ್ದು, ಪ್ರತಿದಿನ ಎರಡು ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿವೆ. ಹೊಸ ಬಸ್‌ಗಳ ಸೇರ್ಪಡೆಯಿಂದ ನಗರ ಹಾಗೂ ಉಪನಗರ ಪ್ರದೇಶಗಳ ಸಾರಿಗೆ ಸಂಪರ್ಕ ಮತ್ತಷ್ಟು ಬಲಗೊಳ್ಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ವೈಶಾಕ್ ಆತ್ಮಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​: ನಟಿ ಕೃಷಿ ತಾಪಂಡ ಜತೆ ಅಕ್ರಮ ಸಂಬಂಧ; ಪೊಲೀಸರಿಗೆ ಪತ್ನಿ ದೂರು

ಇತ್ತೀಚಿಗೆ ಶಿವಸೇನೆ ಸೇರಿದ ಠಾಕ್ರೆ ಬಣದ ಸಂಸದನ ವಿರುದ್ಧ ಕ್ರಮ: ಮಹಾ ಸಿಎಂ ಫಡ್ನವೀಸ್ ಭರವಸೆ

ಬಿಜೆಪಿಯ ಸಕ್ರಿಯ ಸದಸ್ಯತ್ವ ಪಡೆದ ರಾಜನಾಥ್ ಸಿಂಗ್ 2ನೇ ಪುತ್ರನಿಗೆ ಉಪಾಧ್ಯಕ್ಷ ಹುದ್ದೆ!

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!