ಚಂಪತ್ ರಾಯ್ 
ದೇಶ

ಅಯೋಧ್ಯೆ ದೇಣಿಗೆ ಲೂಟಿ: FIR ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್, ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಅನುಕಲ್ಪ್ ಮಿಶ್ರಾ, ಲವ್‌ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ಟಿನ್ನು ಯಾದವ್, ಮನೀಶ್ ಯಾದವ್ ಮತ್ತು ಇತರರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಗುರುವಾರ ಎಫ್‌ಐಆರ್ ದಾಖಲಿಸಿದ್ದು, ಇದರ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರು ಶುಕ್ರವಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸ್ವೀಕರಿಸಿದ ದೇಣಿಗೆಗಳ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗ ಅಧಿಕೃತವಾಗಿ ಎಫ್ಐಆರ್ ದಾಖಲಿಸುವ ಮೂಲಕ ಆರೋಪಿಗಳನ್ನು ಹೆಸರಿಸಿದೆ.

ಉತ್ತರ ಪ್ರದೇಶ ಸರ್ಕಾರದ ನಿರ್ದೇಶನದ ಮೇರೆಗೆ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ನ ಸೆಕ್ಷನ್ 306, 316(5), 317(4), 317(5), 61 ಮತ್ತು 3(5) ಸೇರಿದಂತೆ ಹಲವು ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅನುಕಲ್ಪ್ ಮಿಶ್ರಾ, ಲವ್‌ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ಟಿನ್ನು ಯಾದವ್, ಮನೀಶ್ ಯಾದವ್ ಮತ್ತು ಇತರರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅಯೋಧ್ಯೆಯ ಮಾಜಿ ಎಸ್‌ಪಿ ಶಾಸಕ ಪವನ್ ಪಾಂಡೆ ಅವರು ರಾಮ ಮಂದಿರದಲ್ಲಿ 7 ಕೋಟಿಯಿಂದ 7.5 ಕೋಟಿ ರೂ.ಗಳವರೆಗೆ ದೇಣಿಗೆ ದುರುಪಯೋಗವಾಗಿದೆ ಎಂದು ಆರೋಪಿಸಿದ ನಂತರ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ರಚನೆ ಮಾಡಿದೆ.

ಈ ಹಗರಣದ ಕುರಿತು ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸನಾತನ ಮೌಲ್ಯಗಳು ಮತ್ತು ಸಾರ್ವಜನಿಕರ ಶ್ರದ್ಧೆಯೊಂದಿಗೆ ಆಟವಾಡಲು ಯತ್ನಿಸುವವರ ವಿರುದ್ಧ ನಮ್ಮ ಸರ್ಕಾರ ಶೂನ್ಯ ಸಹಿಷ್ಣುತೆ (Zero-tolerance) ನೀತಿಯನ್ನು ಅಳವಡಿಸಿಕೊಂಡಿದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಶೇಷ ತನಿಖಾ ತಂಡ (SIT) ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ತಕ್ಷಣವೇ ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ಯೋಗಿ ಹೇಳಿದ್ದಾರೆ.

ಇಂದು ದೇವರಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ಅಯೋಧ್ಯೆಯ ಘನತೆಗೆ ಧಕ್ಕೆ ತರುವ ಯಾವುದೇ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!