ಸ್ಟಾಲಿನ್, ವೈಕೋ 
ದೇಶ

ತಮಿಳುನಾಡು: ಡಿಎಂಕೆಗೆ ಮತ್ತೊಂದು ಹಿನ್ನಡೆ! 9 ವರ್ಷಗಳ ಮೈತ್ರಿ ಕಡಿದುಕೊಂಡ MDMK!

ಇದೀಗ ವೈಕೋ ನೇತೃತ್ವದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಪಕ್ಷ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದೆ.ಶನಿವಾರ ನಡೆದ ಪಕ್ಷದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಚೆನ್ನೈ: ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಒಂದಾದ ನಂತರ ಒಂದರಂತೆ ವಿವಿಧ ರಾಜಕೀಯ ಪಕ್ಷಗಳು ಡಿಎಂಕೆ ಜೊತೆಗಿನ ತಮ್ಮ ಸಂಬಂಧವನ್ನು ಕಡಿದುಕೊಳ್ಳುತ್ತಿವೆ.

ಇದೀಗ ವೈಕೋ ನೇತೃತ್ವದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಪಕ್ಷ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದೆ.ಶನಿವಾರ ನಡೆದ ಪಕ್ಷದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಭವಿಷ್ಯದ ಚುನಾವಣಾ ಮೈತ್ರಿಗಳ ಬಗ್ಗೆ ಚುನಾವಣೆಯ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ತಿಳಿಸಲಾಗಿದೆ.

ಕಳೆದ ಒಂದು ತಿಂಗಳಿನಿಂದ, ವೈಕೋ ತಮ್ಮ ಪಕ್ಷವು ಮೈತ್ರಿಕೂಟದಿಂದ ಹೊರಬರುವ ಬಗ್ಗೆ ಹಲವು ಸುಳಿವುಗಳನ್ನು ನೀಡಿದ್ದರು. ಆದಾಗ್ಯೂ, ಮೈತ್ರಿಕೂಟದ ಭಾಗವಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಎಂಡಿಎಂಕೆ ಅಭ್ಯರ್ಥಿಗಳು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ ಡಿಎಂಕೆಯೊಂದಿಗೆ ಇರುವುದಾಗಿ ಒತ್ತಿ ಹೇಳಿದ್ದಾರೆ.

ಶಾಸಕರಲ್ಲಿ ಒಬ್ಬರಾದ ಸಿರ್ಕಾಝಿಯ ಸೆಂಥಿಲ್ ಸೆಲ್ವಂ ಪಕ್ಷದ ಸಭೆಯನ್ನು ಬಹಿಷ್ಕರಿಸಿದ್ದು, ಎಂಡಿಎಂಕೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಡಿಎಂಕೆಗೆ ಸೇರುವುದಾಗಿ ಹೇಳಿದ್ದಾರೆ. ಎಂಡಿಎಂಕೆ ಶಾಸಕ ಮತ್ತು ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಟಿಎಂ ರಾಜೇಂದ್ರನ್ ಕೂಡ ಸ್ಥಾನವನ್ನು ಬಿಟ್ಟುಕೊಡಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಡಿಎಂಕೆ ಮೈತ್ರಿಕೂಟದ ಭಾಗವಾಗಿ ಎಂಡಿಎಂಕೆಯ ನಾಲ್ವರು ಅಭ್ಯರ್ಥಿಗಳು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು, ಇಬ್ಬರು ಚುನಾವಣೆಯಲ್ಲಿ ಗೆದ್ದಿದ್ದರು.

ತಮಿಳುನಾಡಿನಲ್ಲಿ ಕೋಮುವಾದಿ ಶಕ್ತಿಗಳು ನೆಲೆಗೊಳ್ಳುವುದನ್ನು ತಡೆಯಲು ಮತ್ತು ದ್ರಾವಿಡ ಚಳವಳಿಯ ಮೂಲ ತತ್ವಗಳನ್ನು ಎತ್ತಿಹಿಡಿಯಲು ಸೈದ್ಧಾಂತಿಕ ಆಧಾರದ ಮೇಲೆ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಎಂಡಿಎಂಕೆ ಸೇರ್ಪಡೆಗೊಂಡಿತ್ತು. 2026 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಎಂಡಿಎಂಕೆಯ ವಿಶಿಷ್ಟ ಗುರುತನ್ನು ತಡೆಯಲು ಮತ್ತು ಅದರ 32 ವರ್ಷಗಳ ರಾಜಕೀಯ ಪರಂಪರೆಯನ್ನು ಕಡೆಗಣಿಸಲು ಮೈತ್ರಿಕೂಟದೊಳಗೆ ಪ್ರಯತ್ನಗಳು ನಡೆದಿವೆ ಎಂದು ಎಂದು ಶನಿವಾರ ಅಂಗೀಕರಿಸಲಾದ ನಿರ್ಣಯದಲ್ಲಿ ಆರೋಪಿಸಲಾಗಿದೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ನಂತರ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಬೆಂಬಲಿಸಲು ಹಲವು ಪಕ್ಷಗಳು ಡಿಎಂಕೆ ಮೈತ್ರಿಯನ್ನು ಕಡಿದುಕೊಂಡಿದ್ದವು. ಈ ಮಧ್ಯೆ ಎಂಡಿಎಂಡಿಕೆ ಇದೀಗ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ; ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ, 2027ರಲ್ಲಿ ಟ್ರಂಪ್ ಭಾರತಕ್ಕೆ..!

ಮೆಜೆಸ್ಟಿಕ್ ಚಿತ್ರ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನ!

ಇಸ್ಲಾಂಗೆ ಮತಾಂತರಗೊಂಡರೆ ಹಿಂದುಳಿದ ವರ್ಗಗಗಳ ಸ್ಥಾನಮಾನ ಸಿಗಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು!

ಯಾವುದನ್ನೂ ಲಘುವಾಗಿ ಪರಿಗಣಿಸಬಾರದು, ಮೈದಾನಕ್ಕೆ ಇಳಿದಾಕ್ಷಣ ಗೆಲುವು ಸಾಧ್ಯವಿಲ್ಲ: ಕ್ಯಾಪ್ಟನ್ Shreyas Iyer ಆಕ್ರೋಶ!

ನಮಗೆ 'ಬಿಜೆಪಿ ಮುಕ್ತ ರಾಮ' ಬೇಕು: ರಾಮ ಮಂದಿರ ದೇಣಿಗೆ ವಿವಾದದ ಬಗ್ಗೆ ಉದ್ಧವ್ ಠಾಕ್ರೆ ವಾಗ್ದಾಳಿ!