ಉದ್ಧವ್ ಠಾಕ್ರೆ  
ದೇಶ

ನಮಗೆ 'ಬಿಜೆಪಿ ಮುಕ್ತ ರಾಮ' ಬೇಕು: ರಾಮ ಮಂದಿರ ದೇಣಿಗೆ ವಿವಾದದ ಬಗ್ಗೆ ಉದ್ಧವ್ ಠಾಕ್ರೆ ವಾಗ್ದಾಳಿ!

ಪಕ್ಷವು ಹಿಂದೂಗಳ ಭಾವನೆಗಳೊಂದಿಗೆ ಆಟವಾಡುವ ಮೂಲಕ ಅವರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮುಕ್ತ ರಾಮ' ನಿಗಾಗಿ ಪ್ರತಿಭಟನೆ ಮುನ್ನಡೆಸುವುದಾಗಿಯೂ ಅವರು ಪ್ರತಿಜ್ಞೆ ಮಾಡಿದ್ದಾರೆ.

ಮುಂಬೈ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಹಿಂದೂತ್ವದ ಬಗ್ಗೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಶಿವಸೇನಾ ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಪಕ್ಷವು ಹಿಂದೂಗಳ ಭಾವನೆಗಳೊಂದಿಗೆ ಆಟವಾಡುವ ಮೂಲಕ ಅವರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮುಕ್ತ ರಾಮ' ನಿಗಾಗಿ ಪ್ರತಿಭಟನೆ ಮುನ್ನಡೆಸುವುದಾಗಿಯೂ ಅವರು ಪ್ರತಿಜ್ಞೆ ಮಾಡಿದ್ದಾರೆ.

ಶಿವಸೇನೆಗೆ ಸೇರ್ಪಡೆಗೊಂಡಿರುವ ಭಿನ್ನಮತೀಯ ಸೇನಾ-ಯುಬಿಟಿ ಸಂಸದ ಸಂಜಯ್ ದೇಶಮುಖ್ ಪ್ರತಿನಿಧಿಸುವ ಯವತ್ಮಾಲ್-ವಾಶಿನ್ ಕ್ಷೇತ್ರದಲ್ಲಿ ನಡೆದ Rally ಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ರಾಜಕೀಯ ಪಕ್ಷಗಳನ್ನು ಬಿಜೆಪಿ ಒಡೆಯುತ್ತಿದೆ ಎಂದು ಆರೋಪಿಸಿದರು.

ನಿಜವಾದ ಹಿಂದುತ್ವವು ಮಾನವೀಯತೆಯನ್ನು ಕಲಿಸುತ್ತದೆ. ದೇವಾಲಯಗಳನ್ನು ಲೂಟಿ ಮಾಡುವ ನಿಮ್ಮ (ಬಿಜೆಪಿಯ) ಹಿಂದುತ್ವವನ್ನು ನಾವು ತಿರಸ್ಕರಿಸುತ್ತೇವೆ. ನಮಗೆ 'ಬಿಜೆಪಿ ಮುಕ್ತ ರಾಮ' ಬೇಕು ಮತ್ತು ಶಿವಸೇನೆ-ಯುಬಿಟಿ ಅಂತಹ ಪ್ರತಿಭಟನೆಗಳನ್ನು ನಡೆಸುತ್ತದೆ" ಎಂದು ಅವರು ಹೇಳಿದರು.

79.85 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾ ಅಧಿಕಾರಿಗಳು ವರದಿ ಮಾಡಿದ್ದರೂ ದೇಣಿಗೆ ದುರುಪಯೋಗದ ಆರೋಪದ ಮೇಲೆ ಬಂಧಿಸಲಾದ ಎಲ್ಲಾ ಎಂಟು ಜನರನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!