ಡೆಹ್ರಾಡೂನ್-ಹಿಮಾಚಲ ಗಡಿಯಲ್ಲಿ ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿರುವುದು. 
ದೇಶ

ಉಗ್ರರ ದಾಳಿ ಭೀತಿ; ದೆಹಲಿ-ಉತ್ತರಾಖಂಡದಲ್ಲಿ ಹೈ ಅಲರ್ಟ್, ದೇವಾಲಯ-ರೈಲು ನಿಲ್ದಾಣಗಳಿಗೆ ಬಿಗಿ ಭದ್ರತೆ..!

ಗುಪ್ತಚರ ಮೂಲಗಳ ಪ್ರಕಾರ, ಬೆದರಿಕೆ ಇ-ಮೇಲ್‌ನಲ್ಲಿ ದೆಹಲಿ ಮತ್ತು ಉತ್ತರಾಖಂಡದ ಹಲವು ದೇವಾಲಯಗಳು, ಸರ್ಕಾರಿ ಕಚೇರಿಗಳು, ರೈಲು ನಿಲ್ದಾಣಗಳು ಹಾಗೂ ಪೊಲೀಸ್ ಕಟ್ಟಡಗಳನ್ನು ಸಂಭಾವ್ಯ ಗುರಿಗಳಾಗಿ ಉಲ್ಲೇಖಿಸಲಾಗಿದೆ.

ನವದೆಹಲಿ: ಉಗ್ರರ ದಾಳಿ ಬೆದರಿಕೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ಗುಪ್ತಚರ ಸಂಸ್ಥೆಗಳು ಹೈ ಅಲರ್ಟ್ ಘೋಷಿಸಿವೆ.

ಮುಂಬರುವ ದಿನಗಳಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಎಚ್ಚರಿಸುವ ಇ-ಮೇಲ್ ಒಂದು ಪತ್ತೆಯಾದ ಬಳಿಕ ಬಿಗಿ ಭದ್ರತೆ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ನಾಗ್ರಾಸು ಗುರುದ್ವಾರದಲ್ಲಿ ನಿಹಾಂಗ್ ಸಿಖ್ಖರು ಮತ್ತು ಆಡಳಿತದ ನಡುವೆ ಉಂಟಾಗಿದ್ದ ಉದ್ವಿಗ್ನತೆಯ ಬೆನ್ನಲ್ಲೇ ನಡೆದಿದೆ.

ಜೂನ್ 16ರಂದು ಕರ್ಣಪ್ರಯಾಗ ಮಾರುಕಟ್ಟೆಯಲ್ಲಿ ಸ್ಥಳೀಯರೊಂದಿಗೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ನಾಲ್ವರು ನಿಹಾಂಗ್ ಸಿಖ್ಖರನ್ನು ಬಿಡುಗಡೆ ಮಾಡುವಂತೆ ಅವರು ಆಗ್ರಹಿಸಿದ್ದರು.

ಮೂರು ದಿನಗಳ ಕಾಲ ಮುಂದುವರಿದಿದ್ದ ಪ್ರತಿಭಟನೆ ಜೂನ್ 23ರಂದು ಸಿಖ್ ಪ್ರತಿನಿಧಿಗಳ ಮಧ್ಯಸ್ಥಿಕೆಯಿಂದ ಅಂತ್ಯಗೊಂಡಿತ್ತು. ಆದರೆ, ಜೂನ್ 25ರ ರಾತ್ರಿ, ಹಿಮಾಚಲ ಪ್ರದೇಶಕ್ಕೆ ಹೊಂದಿಕೊಂಡಿರುವ ಡೆಹ್ರಾಡೂನ್ ಜಿಲ್ಲೆಯ ಕುಲ್ಹಾಲ್ ಗಡಿ ಮೂಲಕ ನಿಹಾಂಗ್ ಸಿಖ್ಖರ ಗುಂಪೊಂದು ಉತ್ತರಾಖಂಡ ಪ್ರವೇಶಿಸಲು ಯತ್ನಿಸಿದ್ದು, ಬಂಧಿತರ ಬಿಡುಗಡೆಗೆ ಒತ್ತಾಯಿಸಿತ್ತು. ಬಳಿಕ ಅಧಿಕಾರಿಗಳು ಅವರನ್ನು ಮನವೊಲಿಸಿ ಪಾಂಟಾ ಸಾಹಿಬ್ ಕಡೆಗೆ ಹಿಂತಿರುಗುವಂತೆ ಮಾಡಿದ್ದರು.

ಇದೇ ವೇಳೆ, ಬಂಧಿತರಾಗಿದ್ದ ನಾಲ್ವರು ನಿಹಾಂಗ್ ಸಿಖ್ಖರಿಗೆ ಶನಿವಾರ ಉತ್ತರಾಖಂಡದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ದೇವಾಲಯಗಳು, ಸರ್ಕಾರಿ ಕಚೇರಿಗಳು ಗುರಿ?

ಗುಪ್ತಚರ ಮೂಲಗಳ ಪ್ರಕಾರ, ಬೆದರಿಕೆ ಇ-ಮೇಲ್‌ನಲ್ಲಿ ದೆಹಲಿ ಮತ್ತು ಉತ್ತರಾಖಂಡದ ಹಲವು ದೇವಾಲಯಗಳು, ಸರ್ಕಾರಿ ಕಚೇರಿಗಳು, ರೈಲು ನಿಲ್ದಾಣಗಳು ಹಾಗೂ ಪೊಲೀಸ್ ಕಟ್ಟಡಗಳನ್ನು ಸಂಭಾವ್ಯ ಗುರಿಗಳಾಗಿ ಉಲ್ಲೇಖಿಸಲಾಗಿದೆ. ಕೆಲವು ರಾಜಕೀಯ ನಾಯಕರ ಹೆಸರೂ ಪ್ರಸ್ತಾಪವಾಗಿರುವುದರಿಂದ ಭದ್ರತಾ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆ ವಹಿಸಿವೆ.

ಭದ್ರತೆ ಮತ್ತಷ್ಟು ಬಿಗಿ

ಬೆದರಿಕೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್, ಉತ್ತರಾಖಂಡ ಪೊಲೀಸ್ ಹಾಗೂ ಕೇಂದ್ರ ಗುಪ್ತಚರ ಸಂಸ್ಥೆಗಳು ಸೂಕ್ಷ್ಮ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿವೆ.

ಪ್ರಮುಖ ಧಾರ್ಮಿಕ ಸ್ಥಳಗಳು, ಸರ್ಕಾರಿ ಕಟ್ಟಡಗಳು, ರೈಲು ನಿಲ್ದಾಣಗಳು ಹಾಗೂ ಸಾರಿಗೆ ಕೇಂದ್ರಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸ್ಥಳೀಯ ಪೊಲೀಸರಿಗೆ ಗಸ್ತು ತೀವ್ರಗೊಳಿಸುವಂತೆ ಸೂಚಿಸಲಾಗಿದೆ.

ಇ-ಮೇಲ್ ಮೂಲ ಪತ್ತೆಗೆ ತನಿಖೆ

ಬೆದರಿಕೆ ಇ-ಮೇಲ್‌ನ ಸತ್ಯಾಸತ್ಯತೆ ಪರಿಶೀಲಿಸಲು ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದು, ಸೈಬರ್ ತಜ್ಞರು ಇ-ಮೇಲ್‌ನ ಡಿಜಿಟಲ್ ಮೂಲವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ಸದ್ಯಕ್ಕೆ ದಾಳಿ ನಡೆಯುವ ನಿಖರ ಸ್ಥಳ ಅಥವಾ ಸಮಯದ ಕುರಿತು ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದಾಗ್ಯೂ, ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲಾಗುತ್ತಿದೆ': Op Sindoor ಕುರಿತು ರಾಜನಾಥ್ ಸಿಂಗ್ ಹೇಳಿಕೆಗಳ ಕುರಿತ ಪೋಸ್ಟ್‌ಗಳಿಗೆ ಕೇಂದ್ರದ ಪ್ರತಿಕ್ರಿಯೆ

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ, ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರ ಮತ್ತು ದೆಹಲಿಯಲ್ಲಿ ಕಂಪನದ ಅನುಭವ

ಸಿಸಿಟಿವಿ ನಾಪತ್ತೆ, SOP ನಿರ್ಲಕ್ಷ್ಯ, ಶೌಚಾಲಯದಲ್ಲಿ ಹಣ!: ರಾಮ ಮಂದಿರ ದೇಣಿಗೆ ಕುರಿತು ಎಸ್‌ಐಟಿ ತನಿಖೆಯಲ್ಲಿ 'ವಂಚನೆ'ಯ ಜಾಲ ಬಯಲು!

ನಟ ಕಿಚ್ಚ ಸುದೀಪ್ ಹೊಸ ಕ್ಯಾರವ್ಯಾನ್: 6.5 ಕೋಟಿ ರೂ ಮೌಲ್ಯ, ಹೈಟೆಕ್ ಸೌಲಭ್ಯದ 'ರಸ್ತೆ ಮೇಲಿನ ವಿಮಾನ', Video

'ಅವ್ರು ನಿಜವಾದ ರಾಮ ಭಕ್ತರಲ್ಲ: ದೇಣಿಗೆ ವಿವಾದ, ಪ್ರಧಾನಿ ಮೋದಿಯ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್!