AIADMK ಶಾಸಕ ಎಂ.ಆರ್. ವಿಜಯಭಾಸ್ಕರ್ ರಾಜೀನಾಮೆ 
ದೇಶ

AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ, ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!

ತಮಿಳುನಾಡಿನ ಕರೂರು ಕ್ಷೇತ್ರದ ಶಾಸಕ ಎಂ.ಆರ್. ವಿಜಯಭಾಸ್ಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಚೆನ್ನೈ: ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷವಾದ ಮಾಜಿ ಸಿಎಂ ಜಯಲಲಿತಾ ಅವರ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ಗೆ ಮತ್ತೊಂದು ರಾಜಕೀಯ ಆಘಾತ ಎದುರಾಗಿದ್ದು ಮತ್ತೋರ್ವ ಪ್ರಮುಖ ಶಾಸಕ ಪಕ್ಷ ತೊರೆದಿದ್ದಾರೆ.

ಹೌದು.. ತಮಿಳುನಾಡಿನ ಕರೂರು ಕ್ಷೇತ್ರದ ಶಾಸಕ ಎಂ.ಆರ್. ವಿಜಯಭಾಸ್ಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಎಂ.ಆರ್. ವಿಜಯಭಾಸ್ಕರ್ ಅವರು ಸೋಮವಾರ ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ. ಪ್ರಭಾಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆಗೆ ಸಂಬಂಧಿಸಿದಂತೆ ಅವರು ಇನ್ನೂ ಯಾವುದೇ ಅಧಿಕೃತ ಕಾರಣವನ್ನು ಬಹಿರಂಗಪಡಿಸಿಲ್ಲ.

ಪಕ್ಷ ತೊರೆದ 6ನೇ ಶಾಸಕ

ಇನ್ನು ವಿಜಯ ಭಾಸ್ಕರ್ ಇತ್ತೀಚಿನ ವಿಧಾನಸಭಾ ಚುನಾವಣೆಯ ಬಳಿಕ ಪಕ್ಷ ತೊರೆದ ಆರನೇ ಶಾಸಕರಾಗಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಎಐಎಡಿಎಂಕೆಯಿಂದ ನಿರಂತರವಾಗಿ ಶಾಸಕರು ಹೊರನಡೆಯುತ್ತಿರುವುದು ಪಕ್ಷದೊಳಗಿನ ಅಸಮಾಧಾನವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ.

ವಿಧಾನಸಭಾ ಚುನಾವಣೆಯ ಬಳಿಕ ಎಐಎಡಿಎಂಕೆಯಿಂದ ಹಲವು ಶಾಸಕರು ರಾಜೀನಾಮೆ ನೀಡಿದ್ದು ಅಥವಾ ಪಕ್ಷ ತೊರೆದಿದ್ದಾರೆ. ಕೆಲವರು ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವನ್ನು ಸೇರಿರುವುದು ತಮಿಳುನಾಡಿನ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ಕಾರಣವಾಗಿದೆ. ಈ ಬೆಳವಣಿಗೆಗಳು ರಾಜ್ಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗುತ್ತಿರುವ ಸೂಚನೆಗಳೆಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಬೆಳವಣಿಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸಾಮಿ ಅವರಿಗೆ ಮತ್ತೊಂದು ಸವಾಲಾಗಿ ಪರಿಣಮಿಸಿದೆ. ಚುನಾವಣೆಯ ಬಳಿಕ ಪಕ್ಷವನ್ನು ಸಂಘಟಿಸಲು ಅವರು ಪ್ರಯತ್ನಿಸುತ್ತಿರುವ ನಡುವೆಯೇ ಶಾಸಕರ ಸರಣಿ ನಿರ್ಗಮನ ಪಕ್ಷದ ವಿಧಾನಸಭೆಯಲ್ಲಿನ ಬಲದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಉಪ ಚುನಾವಣೆ

ವಿಜಯಭಾಸ್ಕರ್ ಅವರ ರಾಜೀನಾಮೆಯನ್ನು ಸ್ಪೀಕರ್ ಅಧಿಕೃತವಾಗಿ ಅಂಗೀಕರಿಸಿದ ಬಳಿಕ ಕರೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಕುರಿತು ಚುನಾವಣಾ ಆಯೋಗ ಮುಂದಿನ ದಿನಗಳಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ವಿಧಾನಸಭಾ ಚುನಾವಣೆಯ ನಂತರ ಕೇವಲ ಎರಡು ತಿಂಗಳಲ್ಲೇ ಎಐಎಡಿಎಂಕೆಯ ಆರು ಶಾಸಕರು ರಾಜೀನಾಮೆ ನೀಡಿರುವುದು ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಬೆಳವಣಿಗೆಗಳು ರಾಜ್ಯ ರಾಜಕೀಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತವೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ತಲೆ ಮೇಲೆ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ..!

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ. ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

Pune Fort Murder: ಎಂಗೇಜ್ ಮೆಂಟ್ ಗೂ ಮುನ್ನ ಕೇತನ್ ನಿಂದ 1 ಕೋಟಿ ರೂ. ಪಡೆದು ಚೇತನ್ ಗೆ ವರ್ಗಾಯಿಸಿದ್ದ ಪಾತಕಿ ಸಿಯಾ ಗೋಯಲ್!

ಇರಾನ್ ಯುದ್ಧದಲ್ಲಿ ಅನಿರೀಕ್ಷಿತ ಗೆಲುವು ಕಂಡ ಕ್ಯಾಲಿಫೋರ್ನಿಯಾದ ಪಿಸ್ತಾಶಿಯೊ ಕಿಂಗ್ಸ್! (ಜಾಗತಿಕ ಜಗಲಿ)

ರಾಮ ಮಂದಿರ ದೇಣಿಗೆ ವಿವಾದ: ಅಂಬಾನಿ ನೀಡಿದ ದೇಣಿಗೆ ಹಣ ಎಲ್ಲಿ..? ಗಜ್ನಿ ನಂತರ ದೇವಾಲಯ ಲೂಟಿ ಮಾಡಿದ್ದು BJP-RSS; ಬಿ.ಕೆ.ಹರಿಪ್ರಸಾದ್ ವಾಗ್ದಾಳಿ