ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ) 
ದೇಶ

ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ಕಳಚಿ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ..!

"ಆಕಾಶವೇನೂ ಕಳಚಿ ಬೀಳುವುದಿಲ್ಲ... ಇಷ್ಟು ತುರ್ತು ಏನಿದೆ?" ಎಂದು ಮೌಖಿಕವಾಗಿ ಪ್ರಶ್ನಿಸಿದ ನ್ಯಾಯಪೀಠ, ಪ್ರಕರಣವನ್ನು ಬೇಸಿಗೆ ರಜೆ ಬಳಿಕ ವಿಚಾರಣೆಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ.

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದಿರುವ ದೇಣಿಗೆ ದುರ್ಬಳಕೆ ಆರೋಪಗಳ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

"ಆಕಾಶವೇನೂ ಕಳಚಿ ಬೀಳುವುದಿಲ್ಲ... ಇಷ್ಟು ತುರ್ತು ಏನಿದೆ?" ಎಂದು ಮೌಖಿಕವಾಗಿ ಪ್ರಶ್ನಿಸಿದ ನ್ಯಾಯಪೀಠ, ಪ್ರಕರಣವನ್ನು ಬೇಸಿಗೆ ರಜೆ ಬಳಿಕ ವಿಚಾರಣೆಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ವಕೀಲರಾದ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಸಲ್ಲಿಸಿರುವ ಅರ್ಜಿಯಲ್ಲಿ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಆಡಳಿತ ಹಾಗೂ ದೇಣಿಗೆ ಹಣದ ದುರ್ಬಳಕೆ ಕುರಿತ ಆರೋಪಗಳ ಬಗ್ಗೆ ಸಿಬಿಐ ನೇತೃತ್ವದ ಬಹುಶಾಖಾ ವಿಶೇಷ ತನಿಖಾ ತಂಡ (SIT) ರಚಿಸಿ ನಿಗದಿತ ಅವಧಿಯೊಳಗೆ ನ್ಯಾಯಸಮ್ಮತ ತನಿಖೆ ನಡೆಸುವಂತೆ ಕೋರಲಾಗಿದೆ.

ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಹಾಗೂ ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಟ್ರಸ್ಟ್‌ಗೆ ಅಗತ್ಯ ನಿಯಂತ್ರಣ, ಮೇಲ್ವಿಚಾರಣೆ ಹಾಗೂ ಲೆಕ್ಕಪರಿಶೋಧನಾ ವ್ಯವಸ್ಥೆ ರೂಪಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ.

ರಾಮ ಮಂದಿರಕ್ಕೆ ಬಂದಿರುವ ದೇಣಿಗೆ ಹಣ ಕಾಣೆಯಾಗಿರುವುದು ಹಾಗೂ ಹಣಕಾಸು ಅಕ್ರಮಗಳು ನಡೆದಿವೆ ಎಂಬ ವರದಿಗಳು ಸತ್ಯವೋ ಸುಳ್ಳೋ ಎಂಬುದು ಸ್ವತಂತ್ರ ತನಿಖೆಯಿಂದ ಸ್ಪಷ್ಟವಾಗಬೇಕು ಎಂದು ಅರ್ಜಿಯಲ್ಲಿ, ತಿಳಿಸಲಾಗಿದೆ.

"ಈ ಆರೋಪಗಳು ಅಂತಿಮವಾಗಿ ಸಾಬೀತಾಗಲಿ ಅಥವಾ ಆಗದಿರಲಿ, ಇವು ಕೋಟ್ಯಂತರ ಭಕ್ತರಲ್ಲಿ ಆತಂಕ ಮತ್ತು ಅನುಮಾನ ಹುಟ್ಟಿಸಿವೆ. ಆದ್ದರಿಂದ ಸ್ವತಂತ್ರ ಹಾಗೂ ಪರಿಣತ ತನಿಖಾ ಸಂಸ್ಥೆಯ ಮೂಲಕ ಸತ್ಯಾಸತ್ಯತೆ ಪರಿಶೀಲನೆಯಾಗಬೇಕು.

ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್‌ಐಟಿ ಯಾವುದೇ ಎಫ್‌ಐಆರ್ ದಾಖಲಿಸದೇ ತನಿಖೆ ಆರಂಭಿಸಿರುವುದು ಸೂಕ್ತವಲ್ಲ. ಆಡಳಿತಾಧಿಕಾರಿಗಳ ತಂಡಕ್ಕಿಂತ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡದಿಂದ ತನಿಖೆ ನಡೆದರೆ ಸಾರ್ವಜನಿಕರಲ್ಲಿ ಹೆಚ್ಚಿನ ವಿಶ್ವಾಸ ಮೂಡಲಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಜೂನ್ 13ರಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮನವಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ರಾಮ ಮಂದಿರಕ್ಕೆ ಬಂದ ದೇಣಿಗೆಯ ದುರ್ಬಳಕೆ ಆರೋಪಗಳ ಹಿನ್ನೆಲೆಯಲ್ಲಿ ಈ ತನಿಖೆ ಆರಂಭಿಸಲಾಗಿದೆ.

ಈ ಎಸ್‌ಐಟಿಯಲ್ಲಿ ಲಖನೌ ವಿಭಾಗದ ಆಯುಕ್ತ ವಿಜಯ್ ವಿಶ್ವಾಸ್ ಪಂತ್, ಐಜಿಪಿ ಕಿರಣ್ ಎಸ್ ಹಾಗೂ ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಸದಸ್ಯರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ. ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

#OpentoWork: ಭಾರತಕ್ಕೆ ಆಘಾತ ನೀಡಿದ್ದ ಐರ್ಲೆಂಡ್ ವೇಗಿ ಲಿಂಕ್ಡ್‌ಇನ್ ಪೋಸ್ಟ್ ವೈರಲ್, Jai Moondraಗೆ ಕೆಲ್ಸ ಇಲ್ವಾ?

AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ, ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!

ಹೆದ್ದಾರಿಯಲ್ಲಿ ರಿವರ್ಸ್ ಬಂದ Tata Tiagoಗೆ ಬೊಲೆರೋ SUV ಢಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು, Video

ಪುಣೆ: ಮೂರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: 65 ವರ್ಷದ ವೃದ್ಧನಿಗೆ ಮರಣ ದಂಡನೆ ಶಿಕ್ಷೆ!