ಅಯತೊಲ್ಲಾ ಅಲಿ ಖಮೇನಿ online desk
ದೇಶ

ಖಮೇನಿ ಅಂತ್ಯಕ್ರಿಯೆಗೆ ಹೋಗುತ್ತಿಲ್ಲ ಪ್ರಧಾನಿ ಮೋದಿ; ಆದ್ರೆ ಭಾರತದ ಪರವಾಗಿ ಇಬ್ಬರು ಭಾಗಿ!

ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.

ನವದೆಹಲಿ: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಬರೋಬ್ಬರಿ 100 ದಿನದ ಬಳಿಕ ನಡೆಯುತ್ತಿದ್ದು, ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಆಹ್ವಾನ ನೀಡಿದ್ದರು. ಆದರೆ ಪ್ರಧಾನಿ ಮೋದಿ ಅವರು ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ.

ಆದರೆ ಭಾರತದ ಪ್ರತಿನಿಧಿಗಳಾಗಿ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವರಾದ ಪಬಿತ್ರ ಮಾರ್ಗೆರಿಟಾ ಮತ್ತು ಬಿಹಾರ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೇನ್ ಅವರು ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಮೂರು ದಶಕಗಳ ಕಾಲ ಇರಾನ್ ಅನ್ನು ಆಳಿದ ಖಮೇನಿ, ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯ ಮೊದಲ ದಿನವೇ ಹತ್ಯೆಯಾಗಿದ್ದರು. ನಂತರ ಅಲಿ ಖಮೇನಿಯವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ಇರಾನ್ ಮುಂದಿನ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಈ ವೇಳೆ 1 ಕೋಟಿಗೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ.

ಜುಲೈ 5, 6 ಮತ್ತು 7 ರಂದು ಟೆಹ್ರಾನ್ ಹಾಗೂ ಕೋಮ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ವಿಧಿವಿಧಾನಗಳು ಜುಲೈ 9 ರಂದು ಮಶಾದ್ ನಗರದಲ್ಲಿ ನಡೆಯಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಲ್ಲಿ ಸಡನ್ ಆಪರೇಷನ್? ವಿಜಯೇಂದ್ರ ಚೇಂಜ್: ಸದಾನಂದಗೌಡ ಆಡಿಯೋ ವೈರಲ್; ಮಾಜಿ ಸಿಎಂ ಹೇಳಿದ್ದೇನು?

ಲಿಪ್ ಲಾಕ್ ದೃಶ್ಯದ ವೇಳೆ ನಟನಿಗೆ ರಕ್ತಬರುವಂತೆ ಕಚ್ಚಿದ್ರಾ ನಟಿ ಕಂಗನಾ ರಣಾವತ್? Video Viral

ನಾನು ಫಡ್ನವೀಸ್ 'ಹಿತೈಷಿ', ಅವರು ಪ್ರಧಾನಿ ಅಭ್ಯರ್ಥಿಯಾದರೆ ಬೆಂಬಲ- ಅಚ್ಚರಿ ಮೂಡಿಸಿದ ಉದ್ಧವ್ ಠಾಕ್ರೆ ಹೇಳಿಕೆ!

Video: ಹಲವು ವರ್ಷಗಳ ಬಳಿಕ ತ್ರಯಂಬಕೇಶ್ವರ ದೇಗುಲ ಅಮೃತಕುಂಡದಲ್ಲಿ ಶಿವಲಿಂಗ ದರ್ಶನ; ಭಕ್ತರಲ್ಲಿ ಸಂಭ್ರಮ

ರಾಮ ಮಂದಿರಕ್ಕಾಗಿ ಅವರು ವೈಯಕ್ತಿಕ ಜೀವನವನ್ನು ತ್ಯಾಗ ಮಾಡಿದ್ದಾರೆ: ಚಂಪತ್ ರಾಯ್ ಪರ ಸಹೋದರನ ಸಮರ್ಥನೆ