ಶಾಲಾ ಬಸ್‌ ಮೇಲೆ ಬಿದ್ದ ಬೃಹತ್‌ ಮರ 
ದೇಶ

Video ಮುಂಬೈನಲ್ಲಿ ಭಾರೀ ಮಳೆ: ಶಾಲಾ ಬಸ್‌ ಮೇಲೆ ಬಿದ್ದ ಬೃಹತ್‌ ಮರ; ಓರ್ವ ವಿದ್ಯಾರ್ಥಿ ಸಾವು, 10 ಮಂದಿಗೆ ಗಾಯ

ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿರುವ ಪ್ರಕಾರ, ಯೂನಿವರ್ಸಲ್ ಹೈಸ್ಕೂಲ್ ವ್ಯಾನ್ ನಲ್ಲಿ 15 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾಗ ಮರ ವಾಹನದ ಮೇಲೆ ಬಿದ್ದಿದೆ.

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಚೆಂಬೂರ್ ಪ್ರದೇಶದಲ್ಲಿ 18 ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್‌ ಮರ ಬಿದ್ದಿದ್ದು, ಘಟನೆಯಲ್ಲಿ 11 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಮತ್ತು 10 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಲವಾರು ವರದಿಗಳು ತಿಳಿಸಿವೆ.

ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿರುವ ಪ್ರಕಾರ, ಯೂನಿವರ್ಸಲ್ ಹೈಸ್ಕೂಲ್ ವ್ಯಾನ್ ನಲ್ಲಿ 15 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾಗ ಮರ ವಾಹನದ ಮೇಲೆ ಬಿದ್ದಿದೆ.

11 ವರ್ಷದ ವಿಹಾನ್ ಶ್ರೀವಾಸ್ತವ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ವರದಿ ಪ್ರಕಾರ, ಇಂದು ಮಧ್ಯಾಹ್ನ 2:50 ರ ಸುಮಾರಿಗೆ ತಿಲಕ್ ನಗರದ ಯೂನಿವರ್ಸಲ್ ಶಾಲೆಗೆ ಸೇರಿದ ಬಸ್ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ತಕ್ಷಣ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ಏತನ್ಮಧ್ಯೆ, ಮಹಾರಾಷ್ಟ್ರದಾದ್ಯಂತ ಮಳೆ ಹೆಚ್ಚಾಗಲಿದ್ದು, ಮುಂಬೈನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಪೂರ್ವ ಕರಾವಳಿಯಲ್ಲಿ ಸ್ವಲ್ಪ ಸಮಯ ಸ್ಥಗಿತಗೊಂಡಿದ್ದ ನೈಋತ್ಯ ಮಾನ್ಸೂನ್, ಕಳೆದ 24 ಗಂಟೆಗಳಲ್ಲಿ ಮತ್ತೆ ವೇಗ ಪಡೆದುಕೊಂಡಿದೆ ಎಂದು ವರದಿಯೊಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ಲೂಟಿ: BJP, RSSಗೆ, 'ಡೊನೇಷನ್ ಫಸ್ಟ್', 'ದೇಶ ನಂತರ': ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

ನರ್ಸ್ ಸರಳಾ ಭಟ್ ಅತ್ಯಾಚಾರ, ಕೊಲೆ: 36 ವರ್ಷಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಮಾಸ್ಟರ್ ಮೈಂಡ್ ಯಾಸಿನ್ ಮಲಿಕ್!

Cabinet Expansion: ಇನ್ನು 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ; ಸಚಿವ ಎಂಬಿ ಪಾಟೀಲ್

ಭಾರತೀಯ ಸೈನಿಕರ ಸಾವಿನ ಬಗ್ಗೆ ಸಂಸತ್ ಗೆ ತಪ್ಪು ಮಾಹಿತಿ ಆರೋಪ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್

ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!