ವಿಮಾನ ಹಾರಾಟ ರದ್ದುಗೊಂಡಿದ್ದರಿಂದ ಪ್ರಯಾಣಿಕರ ಪರದಾಟದ ಚಿತ್ರ 
ದೇಶ

ಇಸ್ರೇಲ್-ಇರಾನ್ ಯುದ್ಧ: ಇಂಡಿಯನ್ ಏರ್ ಲೈನ್ಸ್ ನ 350 ವಿಮಾನಗಳ ಹಾರಾಟ ರದ್ದು!

ವಾಯುಪ್ರದೇಶದ ಬಂದ್ ಮತ್ತು ಭದ್ರತಾ ಕಾಳಜಿಯೊಂದಿಗೆ ಏರ್ ಇಂಡಿಯಾ ಮತ್ತು ಇಂಡಿಗೋ ಸಹ ಈ ವಾಯುಪ್ರದೇಶಗಳನ್ನು ಬಳಸುವ ತಮ್ಮ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ.

ನವದೆಹಲಿ: ಮಧ್ಯ ಪ್ರಾಚ್ಯದಲ್ಲಿ ಸಂಘರ್ಷದಿಂದಾಗಿ ಎರಡನೇ ದಿನವೂ ಕಾರ್ಯಾಚರಣೆಗೆ ಅಡ್ಡಿಯಾದ್ದರಿಂದ ಭಾನುವಾರ ಇಂಡಿಯನ್ ಏರ್ ಲೈನ್ಸ್ ನ 350 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ವಾಯುಪ್ರದೇಶದ ಬಂದ್ ಮತ್ತು ಭದ್ರತಾ ಕಾಳಜಿಯೊಂದಿಗೆ ಏರ್ ಇಂಡಿಯಾ ಮತ್ತು ಇಂಡಿಗೋ ಸಹ ಈ ವಾಯುಪ್ರದೇಶಗಳನ್ನು ಬಳಸುವ ತಮ್ಮ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ, ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ರಾಜಕೀಯ ಬೆಳವಣಿಗೆಗಳಿಂದ ಉಂಟಾದ ವಾಯುಪ್ರದೇಶ ನಿರ್ಬಂಧ ಹಿನ್ನೆಲೆಯಲ್ಲಿ ಭಾರತದ ವಿಮಾನಯಾನ ಸಂಸ್ಥೆಗಳಿಂದ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 350 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಪಶ್ಚಿಮ ಏಷ್ಯಾ ದೇಶಗಳಿಗೆ ತೆರಳಬೇಕಿದ್ದ 444 ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವ ನಿರೀಕ್ಷೆಯಿತ್ತು. ಸದ್ಯ 350 ವಿಮಾನಗಳನ್ನು ರದ್ದುಪಡಿಸಲಾಗಿದೆ. ಶನಿವಾರವೂ ದೇಶಿಯ ವಿಮಾನಯಾನ ಸಂಸ್ಥೆಗಳ 410 ವಿಮಾನಗಳನ್ನು ರದ್ದುಗೊಳಿಸಲಾಗಿತ್ತು. ರದ್ದುಗೊಳಿಸಲಾದ ವಿಮಾನಗಳ ಬಗ್ಗೆ ಏರ್ ಇಂಡಿಯಾ ಹಾಗೂ ಸ್ಪೆಸ್ ಜೆಟ್ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿವೆ.

ಭಾನುವಾರ ಬೆಳಗ್ಗೆ ಒಟ್ಟು 22 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ಹೇಳಿದೆ. UAE ಗೆ ತೆರಳಬೇಕಾಗಿದ್ದ ಹಾಗೂ ಅಲ್ಲಿಂದ ಬರಬೇಕಿದ್ದ 33 ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ಸ್ಪೈಸ್ ಜೆಟ್ ತಿಳಿಸಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಬಹ್ರೇನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಬರುವ ವಿಮಾನಗಳ ಹಾರಾಟವನ್ನು ಮಾರ್ಚ್ 2ರವರೆಗೂ ವಿಸ್ತರಿಸಿದೆ.

ಈ ಮಧ್ಯೆ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ಅಗತ್ಯಕ್ಕೆ ತಕ್ಕಂತೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಒದಗಿಸುವಂತೆ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣ ನಿರ್ವಾಹಕರು ಮತ್ತು ಇತರ ಪಾಲುದಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ವಿಮಾನಯಾನ ಸಚಿವಾಲಯ ತಿಳಿಸಿದೆ.

ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 28 ರಂದು ಅಥವಾ ಮೊದಲು ಮಾಡಿದ ಬುಕಿಂಗ್‌ಗಳಿಗಾಗಿ ಮೂಲತಃ ಮಾರ್ಚ್ 5 ರವರೆಗೆ ಯೋಜಿಸಲಾಗಿದೆ, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಮಾನಗಳನ್ನು ಮರುಹೊಂದಿಸಬಹುದು ಅಥವಾ ಪೂರ್ಣ ಮರುಪಾವತಿಗೆ ವಿನಂತಿಸಬಹುದು. ಇದು ಮಧ್ಯಪ್ರಾಚ್ಯಕ್ಕೆ ಪ್ರಯಾಣಿಸಲು ಮತ್ತು ನಡೆಯುತ್ತಿರುವ ಪರಿಸ್ಥಿತಿಯಿಂದಾಗಿ ಪರಿಣಾಮ ಬೀರಿದೆ. ಭಾನುವಾರ ದೆಹಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳಲ್ಲಿ 225 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ನಮ್ಮ ಪ್ರತೀಕಾರ ಭೀಕರವಾಗಿರುತ್ತೇ: ಖಮೇನಿ ಸಾವಿನ ಬೆನ್ನಲ್ಲೇ ಜಮ್ಕರನ್ ಮೇಲೆ ಕೆಂಪು ಧ್ವಜ ಹಾರಾಟ, ಇಸ್ರೇಲ್ ಕಟ್ಟಡಗಳು ಧ್ವಂಸ!

ಸೆಮಿಸ್ ನಿರ್ಣಾಯಕ ಪಂದ್ಯದಲ್ಲಿ ಭಾರತ ಕಳಪೆ ಫೀಲ್ಡಿಂಗ್; 195 ರನ್ ಬಾರಿಸಿದ ವೆಸ್ಟ್ ಇಂಡೀಸ್!

ಇಸ್ರೇಲ್-ಇರಾನ್ ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿ ಮುಂದಾಗಬೇಕು: ಓವೈಸಿ

ಖಮೇನಿ ಹತ್ಯೆಗೆ ರಷ್ಯಾ ಅಧ್ಯಕ್ಷ ಪುಟಿನ್ ಕೆಂಡಾಮಂಡಲ: ಹೇಳಿದ್ದೇನು?

ಇರಾನ್ ಮೇಲೆ ಇಸ್ರೇಲ್ ದಾಳಿ: ಪ್ರಧಾನಿ ಮೋದಿಗೆ ಮೊದಲೇ ಗೊತಿತ್ತಾ? ಕೆರಳಿದ ವಿಪಕ್ಷಗಳು!

SCROLL FOR NEXT