ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಹಿಂಸಾಚಾರ ಸಾಧ್ಯತೆ: ದ್ವೇಷಕಾರಿ ಧರ್ಮೋಪದೇಶ ನೀಡುವವರ ಮೇಲೆ ನಿಗಾ ಇರಿಸಿ; ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ.

ನವದೆಹಲಿ: ಇರಾನ್‌–ಅಮೆರಿಕಾ–ಇಸ್ರೇಲ್‌ ದಾಳಿ-ಪ್ರತಿದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ವಾತಾವರಣ ನಿರ್ಮಾಣವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲಿ ಸಂಭಾವ್ಯ ಹಿಂಸಾಚಾರದ ಬಗ್ಗೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಫೆ.28 ರಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ, ದೇಶದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ. ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಜಾಗರೂಕತೆಯಿಂದ ಇರಬೇಕು. ಅಶಾಂತಿಯನ್ನ ಪ್ರಚೋದಿಸುವ ಇರಾನ್‌ ಪರ ಮೂಲಭೂತ ಪ್ರಚಾರಕರನ್ನ ಪತ್ತೆ ಮಾಡಬೇಕು ಎಂದು ಸೂಚಿಸಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ.

ಹೀಗಾಗಿ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಎಚ್ಚರಿಕೆಯಿಂದಿರಬೇಕು. ಅಶಾಂತಿ ಮತ್ತು ಉದ್ವಿಗ್ನತೆ ಉಂಟು ಮಾಡುವ ಇರಾನ್‌ ಪರವಾದ ಮೂಲಭೂತ ಪ್ರಚಾರಕರನ್ನ ಗುರುತಿಸಿ ಮೇಲ್ವಿಚಾರಣೆ ಮಾಡಬೇಕು ಎಂದು ಎಚ್ಚರಿಸಿದೆ.

ಅಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಿಸಲು ಗುಪ್ತಚರ ಸಂಸ್ಥೆಗಳು ಭದ್ರತಾ ಸಂಸ್ಥೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಿ ಹೇಳಿದೆ.

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮರಣದ ಬಗ್ಗೆ ಆಕ್ರೋಶ ಮತ್ತು ದುಃಖವನ್ನು ವ್ಯಕ್ತಪಡಿಸಲು ಶಿಯಾ ಮುಸ್ಲಿಮರು ಭಾನುವಾರ ಭಾರತದ ವಿವಿಧ ಭಾಗಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್​​ಪೆಕ್ಟರ್ ರಫೀಕ್​​ ಅಮಾನತು!

'ಅಮೆರಿಕನ್ನರಿಗೆ ಗಲ್ಫ್ ನೀರಿನ ಕೆಳಭಾಗವೇ ಗತಿ': 'ಪರಮಾಣು, ಕ್ಷಿಪಣಿ ಸಾಮರ್ಥ್ಯ' ರಕ್ಷಣೆಗೆ ಬದ್ಧ- ಖಮೇನಿ ಪ್ರತಿಜ್ಞೆ

ಟ್ರಂಪ್ ಯೋಜನೆ ಬುಡಮೇಲು ಮಾಡಿದ ಪಾಕಿಸ್ತಾನ: ನಿರ್ಬಂಧಕ್ಕೆ Dont Care; ರಷ್ಯಾ, ಚೀನಾ ಜೊತೆ ವ್ಯಾಪಾರಕ್ಕೆ ಇರಾನ್ ಗೆ ನೆರವು!

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

SCROLL FOR NEXT