ಪ್ರಧಾನಿ ಮೋದಿ 
ದೇಶ

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ

ಪ್ರಧಾನಿ ಮೋದಿ ಅವರು ಎರಡೂ ದೇಶಗಳಲ್ಲಿ ವಾಸಿಸುವ ಭಾರತೀಯ ಸಮುದಾಯದ ಯೋಗಕ್ಷೇಮದ ಬಗ್ಗೆಯೂ ಉಭಯ ದೇಶಗಳ ನಾಯಕರೊಂದಿಗೆ ಚರ್ಚಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಹಾಗೂ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದು, ಪಶ್ಚಿಮ ಏಷ್ಯಾದಲ್ಲಿ ಪ್ರಸ್ತುತ ನಡೆಯುತ್ತಿರುವ ಸಂಘರ್ಷದಲ್ಲಿ ಈ ಎರಡೂ ದೇಶಗಳ ಮೇಲೆ ಇರಾನ್ ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ಎರಡೂ ದೇಶಗಳಲ್ಲಿ ವಾಸಿಸುವ ಭಾರತೀಯ ಸಮುದಾಯದ ಯೋಗಕ್ಷೇಮದ ಬಗ್ಗೆಯೂ ಉಭಯ ದೇಶಗಳ ನಾಯಕರೊಂದಿಗೆ ಚರ್ಚಿಸಿದ್ದಾರೆ.

"ಪ್ರಧಾನಿ ಮೋದಿ ಅವರು ಇಂದು ಇಬ್ಬರು ಪ್ರಮುಖ ನಾಯಕರೊಂದಿಗೆ ದೂರವಾಣಿ ಸಂಭಾಷಣೆಗಳನ್ನು ನಡೆಸಿದರು. ಅವರು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಹಾಗೂ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದರು. ಈ ಎರಡೂ ದೇಶಗಳ ಮೇಲಿನ ದಾಳಿಗಳನ್ನು ಪ್ರಧಾನಿ ಖಂಡಿಸಿದರು" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಬಳಿಕ ಇರಾನ್, ಇಸ್ರೇಲ್, ಬಹ್ರೇನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ಪಶ್ಚಿಮ ಏಷ್ಯಾದ ದೇಶಗಳ ಮೇಲೆ ಸರಣಿ ಕ್ಷಿಪಣಿಗಳನ್ನು ಹಾರಿಸಿದ ನಂತರ ಮೋದಿ ಈ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಇದಕ್ಕು ಮುನ್ನ ಯುಎಇ ಅಧ್ಯಕ್ಷರೊಂದಿಗೂ ಮಾತನಾಡಿದ್ದ ಪ್ರಧಾನಿ ಮೋದಿ, ಯುಎಇ (UAE) ಮೇಲಿನ ಇರಾನ್‌ ದಾಳಿಯನ್ನ ತೀವ್ರವಾಗಿ ಖಂಡಿಸಿದ್ದರು. ʻಯುಎಇ ಅಧ್ಯಕ್ಷ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದೆ. ಯುಎಇ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದೆ ಮತ್ತು ಈ ದಾಳಿಯಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನಯಾನ ಸಂಸ್ಥೆಗಳಿಗೆ ಬಿಗ್ ರಿಲೀಫ್; ATF ದರ ಲೀಟರ್‌ಗೆ 5 ರೂ. ಇಳಿಕೆ, ವಿಮಾನ ಪ್ರಯಾಣ ದರವೂ ಕಡಿಮೆಯಾಗುತ್ತಾ..?

ಜನ್ಮಸಿದ್ಧ ಪೌರತ್ವ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಟ್ರಂಪ್‌ಗೆ ಭಾರೀ ಶಾಕ್, 'ದೇಶಕ್ಕೆ ಮಾರಕ' ಎಂದ ಅಮೆರಿಕ ಅಧ್ಯಕ್ಷ..!

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?

ಜನ್ಮಸಿದ್ಧ ಪೌರತ್ವ ವಿವಾದ: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಚೀನಾಗೆ ಅಭಿನಂದನೆ ತಿಳಿಸಿದ ಟ್ರಂಪ್, ಕಾರಣ..?

ಮಂಗಳೂರಿನಲ್ಲಿ ಭಾರೀ ಮಳೆಗೆ ಭೂಕುಸಿತ: ಮನೆಯ ಮೇಲೆ ಮಣ್ಣು ಕುಸಿದು ಮೂವರ ದುರ್ಮರಣ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ..!