ಸಂಗ್ರಹ ಚಿತ್ರ 
ದೇಶ

WhatsApp ಚಾಟ್‌ಗಳ ಆಧಾರದ ಮೇಲೆ ಕ್ರೌರ್ಯದ ನಡೆದಿದೆ ಎಂದು ವಿಚ್ಛೇದನ ನೀಡಲು ಸಾಧ್ಯವಿಲ್ಲ!

ನಾಸಿಕ್‌ನ ಪತಿ ಮತ್ತು ಪತ್ನಿಯ ನಡುವಿನ ವಿಚ್ಛೇದನ ಪ್ರಕರಣದಲ್ಲಿ ದಂಪತಿಗಳಿಗೆ ಪ್ರತಿಕ್ರಿಯಿಸಲು ಅವಕಾಶ ನೀಡದೆ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ವಿಚ್ಛೇದನವನ್ನು ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ.

ಮುಂಬೈ: ನಾಸಿಕ್‌ನ ಪತಿ ಮತ್ತು ಪತ್ನಿಯ ನಡುವಿನ ವಿಚ್ಛೇದನ ಪ್ರಕರಣದಲ್ಲಿ ದಂಪತಿಗಳಿಗೆ ಪ್ರತಿಕ್ರಿಯಿಸಲು ಅವಕಾಶ ನೀಡದೆ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ವಿಚ್ಛೇದನವನ್ನು ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ. ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ಕ್ರೌರ್ಯವನ್ನು ಉಲ್ಲೇಖಿಸಿ, ಪತಿ ತನ್ನ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ನಾಸಿಕ್ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನ್ಯಾಯಾಧೀಶರಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠವು, ನೊಂದ ಮಹಿಳೆಯ ಅರ್ಜಿಯನ್ನು ಅನುಮತಿಸಿದೆ. ಪತಿ ನೀಡಿದ ಸಾಕ್ಷ್ಯವನ್ನು (ವಾಟ್ಸಾಪ್ ಚಾಟ್‌ಗಳು) ನಿರಾಕರಿಸಲು ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಅವಕಾಶ ನೀಡಲು ವಿಫಲವಾಗಿದೆ ಎಂದು ಹೇಳಿದೆ. ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ವಿಚ್ಛೇದನ ಆದೇಶವನ್ನು ನೀಡಲಾಗುವುದಿಲ್ಲ. ಏಕೆಂದರೆ ಅವು ಪುರಾವೆಗಳಿಂದ ದೃಢೀಕರಿಸಲ್ಪಟ್ಟಿಲ್ಲ. ಆದ್ದರಿಂದ ವಿಚ್ಛೇದನ ಆದೇಶವನ್ನು ರದ್ದುಗೊಳಿಸಬೇಕು. ಪ್ರಕರಣವನ್ನು ಕೌಟುಂಬಿಕ ನ್ಯಾಯಾಲಯಕ್ಕೆ ಹಿಂತಿರುಗಿಸಬೇಕು. ಇದರಿಂದಾಗಿ ಹೆಂಡತಿ ತನ್ನ ವಾದ ಮಂಡಿಸಲು ಮತ್ತು ಸಾಕ್ಷ್ಯವನ್ನು ಒದಗಿಸಲು ಅವಕಾಶ ನೀಡುತ್ತದೆ.

ಮೇ 2025ರ ತನ್ನ ಆದೇಶದಲ್ಲಿ ಕೌಟುಂಬಿಕ ನ್ಯಾಯಾಲಯವು ಆ ವ್ಯಕ್ತಿ ಸಲ್ಲಿಸಿದ ವಾಟ್ಸಾಪ್ ಚಾಟ್ ಅನ್ನು ಅವಲಂಬಿಸಿದೆ. ಅದರಲ್ಲಿ ಮಹಿಳೆ ನಾಸಿಕ್‌ನಿಂದ ಪುಣೆಗೆ ತೆರಳಿ ಅಲ್ಲಿ ಪ್ರತ್ಯೇಕವಾಗಿ ವಾಸಿಸಲು ಒತ್ತಾಯಿಸಿದಳು. ಅದರಲ್ಲಿ ಪತ್ನಿ ತನ್ನ ಅತ್ತೆ ಮತ್ತು ಅತ್ತಿಗೆಯ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ವಾಟ್ಸಾಪ್ ಚಾಟ್‌ಗಳಲ್ಲಿ ಪತ್ನಿ ಬಲವಂತ, ಭಾವನಾತ್ಮಕ ಬ್ಲ್ಯಾಕ್‌ಮೇಲ್ ಮತ್ತು ನಿಂದನೀಯ ಭಾಷೆಯನ್ನು ಬಳಸಿದ್ದಾಳೆ. ಪತಿ ಕ್ರೌರ್ಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ವಿಚ್ಛೇದನ ನೀಡಬಹುದಾಗಿದೆ ಎಂದು ಕೌಟುಂಬಿಕ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕೌಟುಂಬಿಕ ನ್ಯಾಯಾಲಯವು ಪ್ರಕರಣವನ್ನು ಹೊಸದಾಗಿ ನಿರ್ಧರಿಸುತ್ತದೆಯಾದರೂ, ದೂರವಾದ ದಂಪತಿಗಳು ಮಧ್ಯಸ್ಥಿಕೆಯ ಮೂಲಕ ಸಮನ್ವಯದ ಸಾಧ್ಯತೆಯನ್ನು ಅನ್ವೇಷಿಸಬಹುದು ಎಂದು ಪೀಠ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ': Sam Curran ಅತ್ಯುತ್ಸಾಹ!

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?

SCROLL FOR NEXT