ರಾಷ್ಟ್ರಪತಿ ಭವನ 
ದೇಶ

ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ದೇಶದ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಬದಲಾವಣೆ!

ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಸರ್ಕಾರ ಒಂಬತ್ತು ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಿಸಿದೆ.

ನವದೆಹಲಿ: ಭಾರತದ ರಾಷ್ಟ್ರಪತಿ ಭವನವು ಶುಕ್ರವಾರದಂದು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಮಹತ್ವದ ರಾಜ್ಯಪಾಲರ ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ ಬದಲಾವಣೆ ಘೋಷಿಸಿದೆ.

ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸ ಹುದ್ದೆಗಳಿಗೆ ನೇಮಕ ಮಾಡಲಾಗಿ

ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಸರ್ಕಾರ ಒಂಬತ್ತು ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಿಸಿದೆ. ಆರ್.ಎನ್. ರವಿ ಅವರನ್ನು ಚೆನ್ನೈನಿಂದ ಕೋಲ್ಕತ್ತಾಗೆ ಸ್ಥಳಾಂತರಿಸಿ ಹೆಚ್ಚುವರಿ ಜವಾಬ್ದಾರಿ ನೀಡಿದೆ.

ಶಿಮ್ಲಾದ ರಾಜಭವನದಿಂದ ಶಿವ ಪ್ರತಾಪ್ ಶುಕ್ಲಾ ಅವರನ್ನು ಹೈದರಾಬಾದ್‌ಗೆ ಮತ್ತು ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದಿಂದ ಮಹಾರಾಷ್ಟ್ರದ ರಾಜಭವನಕ್ಕೆ ವರ್ಗಾಯಿಸಿರುವುದಾಗಿಯೂ ರಾಷ್ಟ್ರಪತಿ ಭವನ ಘೋಷಿಸಿದೆ.

ಬಿಹಾರದ ಬಿಜೆಪಿ ನಾಯಕ ನಂದ ಕಿಶೋರ್ ಯಾದವ್ ಅವರನ್ನು ನಾಗಾಲ್ಯಾಂಡ್ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಬಿಹಾರದ ಆರಿಫ್ ಮೊಹಮ್ಮದ್ ಖಾನ್ ಅವರ ಬದಲಾಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಚೆನ್ನೈನಲ್ಲಿರುವ ರಾಜಭವನದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ಲಡಾಖ್‌ನ ರಾಜ್ ನಿವಾಸ್‌ಗೆ ವರ್ಗಾಯಿಸಲಾಗಿದೆ. ಅವರ ಸ್ಥಾನದಲ್ಲಿ, ತರಣ್‌ಜಿತ್ ಸಿಂಗ್ ಸಂಧು ಅವರನ್ನು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ನೇಮಕಗೊಂಡವರು ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಳ್ಳುವ ದಿನಾಂಕಗಳಿಂದ ನೇಮಕಾತಿಗಳು ಜಾರಿಗೆ ಬರುತ್ತವೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

Exit polls ಮೇಲೆ ನನಗೆ ನಂಬಿಕೆ ಇಲ್ಲ: ಅದೊಂದು ಜಾಲ- ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿ!

ನರ್ಮದಾ ನದಿಯಲ್ಲಿ 30 ಪ್ರವಾಸಿಗರಿದ್ದ ಕ್ರೂಸ್ ಹಡಗು ಜಲಸಮಾಧಿ: ಐದು ಶವಗಳು ಪತ್ತೆ, ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ!

ರಜತ್ ಪಾಟಿದಾರ್ ಔಟ್ ವಿವಾದ: ಚೆಂಡು ನೆಲಕ್ಕೆ ತಾಗಿದ್ದರೂ ಅಂಪೈರ್ ಎಡವಟ್ಟು; Virat Kohli ಆಕ್ರೋಶ, Video!

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

SCROLL FOR NEXT