ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಏಷ್ಯಾ ಸಂಘರ್ಷ: 8 ಗಂಟೆಗಳ ಕಾಲ ಹಾರಾಟದ ನಂತರ ಇಂಡಿಗೋ ವಿಮಾನ ದೆಹಲಿಗೆ ವಾಪಸ್!

ಕೊನೆ ಕ್ಷಣದ ವಾಯುಪ್ರದೇಶ ನಿರ್ಬಂಧಗಳಿಂದಾಗಿ ದೆಹಲಿ - ಮ್ಯಾಂಚೆಸ್ಟರ್‌ ವಿಮಾನ ತನ್ನ ಮೂಲ ಸ್ಥಳಕ್ಕೆ ಮರಳಬೇಕಾಯಿತು ಎಂದು ಇಂಡಿಗೋ ತಿಳಿಸಿದೆ.

ನವದೆಹಲಿ: ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತ್ತಿದ್ದ ಇಂಡಿಗೋ ವಿಮಾನವು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಆಫ್ರಿಕಾದ ಮೇಲೆ ಸುಮಾರು ಎಂಟು ಗಂಟೆಗಳ ಕಾಲ ಹಾರಾಟ ನಡೆಸಿದ ನಂತರ ವಾಪಸ್ ದೆಹಲಿ ಬಂದಿದೆ.

ಕೊನೆ ಕ್ಷಣದ ವಾಯುಪ್ರದೇಶ ನಿರ್ಬಂಧಗಳಿಂದಾಗಿ ದೆಹಲಿ - ಮ್ಯಾಂಚೆಸ್ಟರ್‌ ವಿಮಾನ ತನ್ನ ಮೂಲ ಸ್ಥಳಕ್ಕೆ ಮರಳಬೇಕಾಯಿತು ಎಂದು ಇಂಡಿಗೋ ತಿಳಿಸಿದೆ.

6E 033 ವಿಮಾನವು ಸೋಮವಾರ(ಮಾರ್ಚ್ 9, 2026) ಬೆಳಗಿನ ಜಾವ 12.30 ಕ್ಕೆ ದೆಹಲಿಯಿಂದ ಹೊರಟಿತು. ಈ ವಿಮಾನವು ಸಂಘರ್ಷ ಪೀಡಿತ ಪರ್ಷಿಯನ್ ಕೊಲ್ಲಿ ಪ್ರದೇಶವನ್ನು ಸಂಪೂರ್ಣವಾಗಿ ತಪ್ಪಿಸಿ, ಆಫ್ರಿಕಾದ ಮೇಲೆ ಹಾರುತ್ತಿತ್ತು. ಅದು ಇಥಿಯೋಪಿಯಾ ಮೂಲಕ ಖಂಡವನ್ನು ಪ್ರವೇಶಿಸಿತು ಮತ್ತು ಎರಿಟ್ರಿಯಾದ ಮೇಲೆ ಹಾರುತ್ತಿದ್ದಾಗ ಯು-ಟರ್ನ್ ತೆಗೆದುಕೊಂಡು ದೆಹಲಿಗೆ ಹಿಂತಿರುಗಲು ಪ್ರಾರಂಭಿಸಿತು, ಅಂತಿಮವಾಗಿ ಮಧ್ಯಾಹ್ನ 2.30 ರ ಸುಮಾರಿಗೆ ದೆಹಲಿಯಲ್ಲಿ ಲ್ಯಾಂಡ್ ಆಗಿದೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಣಾಮ "ಕೊನೆಯ ಕ್ಷಣದ ವಾಯುಪ್ರದೇಶದ ನಿರ್ಬಂಧಗಳಿಂದಾಗಿ" ವಿಮಾನ ಹಿಂತಿರುಗಬೇಕಾಯಿತು ಎಂದು ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಣವನ್ನು ಪುನರಾರಂಭಿಸುವ ಸಾಧ್ಯತೆಯನ್ನು ನಿರ್ಣಯಿಸಲು ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಜಮ್ಮು ಮತ್ತು ಕಾಶ್ಮೀರ ಪಾಕಿಸ್ತಾನದ ಭಾಗ ಎಂದು ತೋರಿಸಿದ್ದ ನೇಪಾಳ ಏರ್‌ಲೈನ್ಸ್ ಯೂಟರ್ನ್; ಕ್ಷಮೆಯಾಚನೆ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ

ಬೆಂಗಳೂರು: ಉತ್ತರಾಖಂಡ ರಾಜ್ಯಪಾಲರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಬೈಕ್ ಸವಾರನ ಬಂಧನ; ಆಗಿದ್ದೇನು?

SCROLL FOR NEXT