ಸಾಂದರ್ಭಿಕ ಚಿತ್ರ 
ದೇಶ

ಜಾಗತಿಕ ಇಂಧನ ಬಿಕ್ಕಟ್ಟು: ಡೀಸೆಲ್ ಗಾಗಿ ಭಾರತದಿಂದ ನೆರವು ಕೋರಿದ ಬಾಂಗ್ಲಾದೇಶ! ಲಂಕಾ, ಮಾಲ್ಡೀವ್ಸ್ ನಿಂದಲೂ ಮನವಿ

ಬಾಂಗ್ಲಾದೇಶ ಪೆಟ್ರೋಲ್ ಮತ್ತು ಡೀಸೆಲ್‌ನ ತೀವ್ರ ಕೊರತೆ ಎದುರಿಸುತ್ತಿದ್ದು, ಭಾರತದಿಂದ ಡೀಸೆಲ್ ಪೂರೈಸುವಂತೆ ಮನವಿ ಸ್ವೀಕರಿಸಿರುವುದಾಗಿ ರಣಧೀರ್ ಜೈಸ್ವಾಲ್ ಗುರುವಾರ ತಿಳಿಸಿದ್ದಾರೆ.

ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಜಾಗತಿಕ ಇಂಧನ ಬಿಕ್ಕಟ್ಟು ಎದುರಾಗಿರುವಂತೆಯೇ, ಪೆಟ್ರೋಲಿಯಂ ಉತ್ಪನ್ನಗಳಿಗಾಗಿ ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಮಾಲ್ಡೀವ್ಸ್‌ನಿಂದ ಭಾರತಕ್ಕೆ ಮನವಿ ಬಂದಿರುವುದಾಗಿ ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಗುರುವಾರ ತಿಳಿಸಿದ್ದಾರೆ.

ಬಾಂಗ್ಲಾದೇಶ ಪೆಟ್ರೋಲ್ ಮತ್ತು ಡೀಸೆಲ್‌ನ ತೀವ್ರ ಕೊರತೆ ಎದುರಿಸುತ್ತಿದ್ದು, ಭಾರತದಿಂದ ಡೀಸೆಲ್ ಪೂರೈಸುವಂತೆ ಮನವಿ ಸ್ವೀಕರಿಸಿರುವುದಾಗಿ ಅವರು ಹೇಳಿದರು.

"ಭಾರತ ನಮ್ಮ ನೆರೆಹೊರೆ ರಾಷ್ಟ್ರಗಳಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುವ ಪ್ರಮುಖ ರಫ್ತುದಾರ ರಾಷ್ಟ್ರವಾಗಿದೆ. ಬಾಂಗ್ಲಾದೇಶ ಪೆಟ್ರೋಲಿಯಂ ಕಾರ್ಪೊರೇಷನ್ ಸಹಭಾಗಿತ್ವದಲ್ಲಿ ಜಲಮಾರ್ಗಗಳು, ರೈಲು ಮತ್ತು ಭಾರತ-ಬಾಂಗ್ಲಾದೇಶ ಫ್ರೆಂಡ್ ಶಿಪ್ ಪೈಪ್‌ಲೈನ್ ಮೂಲಕ ಬಾಂಗ್ಲಾದೇಶಕ್ಕೆ ಡೀಸೆಲ್ ಅನ್ನು ಪೂರೈಸುತ್ತಿದ್ದೇವೆ. ಅಂದಿನಿಂದ ಬಾಂಗ್ಲಾದೇಶಕ್ಕೆ ಡೀಸೆಲ್ ರಫ್ತು ಮುಂದುವರೆದಿದೆ ಎಂದು ಅವರು ತಿಳಿಸಿದರು.

ಬಾಂಗ್ಲಾದೇಶಕ್ಕೆ ಪೂರೈಕೆ ಮಾಡುವ ಮುನ್ನ ಭಾರತ ತನ್ನ ಡೀಸೆಲ್ ಲಭ್ಯತೆ ಮತ್ತು ಸಂಸ್ಕರಣಾ ಸಾಮರ್ಥ್ಯವನ್ನು ಪರಿಗಣಿಸುತ್ತದೆ. ಶ್ರೀಲಂಕಾ ಮತ್ತು ಮಾಲ್ಡೀವ್ಸ್‌ನಿಂದಲೂ ಅಂತಹ ಮನವಿಗಳನ್ನು ಸ್ವೀಕರಿಸಿದ್ದೇವೆ ಎಂದು MEA ವಕ್ತಾರರು ತಿಳಿಸಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ನಡುವೆ ನಿರಂತರವಾಗಿ ನಡೆಯುತ್ತಿರುವ ಇಂಧನ ವ್ಯಾಪಾರದ ಭಾಗವಾಗಿ ಭಾರತ-ಬಾಂಗ್ಲಾದೇಶ ಫ್ರೆಂಡ್ ಶಿಪ್ ಪೈಪ್‌ಲೈನ್ ಮೂಲಕ ಬಾಂಗ್ಲಾದೇಶಕ್ಕೆ ಡೀಸೆಲ್ ಪೂರೈಕೆ ಮಾಡಲಾಗುತ್ತಿದೆ ಎಂಬುದನ್ನು ಭಾರತ ಸರ್ಕಾರದ ಮೂಲಗಳು ತಿಳಿಸಿವೆ.

ಅಸ್ಸಾಂನ ನುಮಾಲಿಗಢ್ ಸಂಸ್ಕರಣಾಗಾರದಿಂದ ವಾಣಿಜ್ಯ ಆಧಾರದ ಮೇಲೆ ಬಾಂಗ್ಲಾದೇಶಕ್ಕೆ ಡೀಸೆಲ್ ಪೂರೈಸಲಾಗುತ್ತಿದೆ.

ಈ ಪೈಪ್‌ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಜಂಟಿಯಾಗಿ ಉದ್ಘಾಟಿಸಿದ್ದರು. ನುಮಾಲಿಗಢ್ ಸಂಸ್ಕರಣಾಗಾರದಿಂದ 2015 ರಿಂದ ಬಾಂಗ್ಲಾದೇಶಕ್ಕೆ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಕೆ ಮಾಡಲಾಗುತ್ತಿದೆ.

ನಿನ್ನೆ ಭಾರತದಿಂದ ಬಾಂಗ್ಲಾದೇಶಕ್ಕೆ 5,000 ಟನ್ ಡೀಸೆಲ್ ಆಮದು ಮಾಡಿಕೊಳ್ಳಲಾಗಿದೆ ಎಂದು ಬಾಂಗ್ಲಾದೇಶ ಪೆಟ್ರೋಲಿಯಂ ಕಾರ್ಪೊರೇಷನ್ (BPC) ಅಧ್ಯಕ್ಷ ಮುಹಮ್ಮದ್ ರೆಜಾನುರ್ ರೆಹಮಾನ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಇಂದಿರಾ, ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್!

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

SCROLL FOR NEXT