ಫರ್ಮಾನ್ ಖಾನ್ ಜೊತೆ ಮೊನಾಲಿಸಾ ವಿವಾಹ 
ದೇಶ

ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ! Video

ಪ್ರೀತಿಗೆ ಪೋಷಕರ ಅಡ್ಡಿ ಹಿನ್ನೆಲೆ ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಬ್ಬರು ವಿವಾಹವಾಗಿದ್ದಾರೆ. ಕೇರಳದ ಸಚಿವ ವಿ.ಶಿವನ್ ಕುಟ್ಟಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಭಾಗಿಯಾಗಿದ್ದರು.

ತಿರುವನಂತಪುರಂ: ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಬೋಂಸ್ಲೆ ಹಸೆಮಣೆ ಏರಿದ್ದಾರೆ.

ಪ್ರೀತಿಗೆ ಪೋಷಕರ ಅಡ್ಡಿ ಹಿನ್ನೆಲೆ ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಬ್ಬರು ವಿವಾಹವಾಗಿದ್ದಾರೆ. ಕೇರಳದ ಸಚಿವ ವಿ.ಶಿವನ್ ಕುಟ್ಟಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಭಾಗಿಯಾಗಿದ್ದರು.

ಮಹಾರಾಷ್ಟ್ರದ ಫರ್ಮಾನ್ ಖಾನ್ ನಟ ಹಾಗೂ ಮಾಡೆಲ್‌. ಮಧ್ಯಪ್ರದೇಶದ ಮೊನಾಲಿಸಾಗೆ ಒಂದೂವರೆ ವರ್ಷದ ಹಿಂದೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ. ಪರಿಚಯ ದಿನಕಳೆದಂತೆ ಪ್ರೀತಿಗೆ ತಿರುಗಿತು. ಪೂವಾರ್‌ನಲ್ಲಿ ಈಗ ಮೊನಾಲಿಸಾ ಅಭಿನಯದ ಚಿತ್ರದ ಶೂಟಿಂಗ್‌ ನಡೆಯುತ್ತಿದೆ. ಶೂಟಿಂಗ್‌ ಸ್ಪಾಟ್‌ನಿಂದಲೇ ತಂಬಾನೂರು ಠಾಣೆಗೆ ಬಂದು ತನ್ನ ತಂದೆ ವಿರುದ್ಧ ಮೊನಾಲಿಸಾ ದೂರು ನೀಡಿದ್ದಳು.

ಬುಧವಾರ(ಮಾ.11) ತಂಪನೂರು ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡ ಮೊನಾಲಿಸಾ, ನಾನು ಸಿನಿಮಾ ಚಿತ್ರೀಕರಣವೊಂದರ ಭಾಗವಾಗಿ ಇಲ್ಲಿಗೆ ಬಂದಿದ್ದೇನೆ. ನನ್ನ ತಂದೆ ನನ್ನನ್ನು ಬಲವಂತವಾಗಿ ನಮ್ಮ ಊರಿಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ದಯವಿಟ್ಟು ನನ್ನನ್ನು ಕಾಪಾಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾಳೆ.

ಮೊನಾಲಿಸಾ ಹಾಗೂ ಉತ್ತರ ಪ್ರದೇಶ ಮೂಲದ ಅವಳ ಸ್ನೇಹಿತ ಪೊಲೀಸ್‌ ಠಾಣೆಗೆ ಬಂದು ರಕ್ಷಣೆ ಕೋರಿದ್ದಾರೆ. ಅವಳ ಅಭಿಪ್ರಾಯಕ್ಕೆ ವಿರುದ್ಧವಾಗಿ ಅವಳ ತಂದೆಯು ಅವಳನ್ನು ಮರಳಿ ಕರೆಸಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದ್ದಾಳೆ. ಈ ವೇಳೆ ಸಿನಿಮಾದ ಇತರೆ ಸಿಬ್ಬಂದಿಗಳು ಕೂಡ ಠಾಣೆಗೆ ಬಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ವಳು ಅಪ್ರಾಪ್ತೆಯಲ್ಲದೇ ಇರುವುದಿಂದ, ಅವಳಿಷ್ಟದಂತೆ ಅವಳು ನಿರ್ಧಾರ ತೆಗೆದುಕೊಳ್ಳಬಹುದು. ಅವಳ ತಂದೆ ಈಗಾಗಲೇ ಅವರ ಊರಿಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರ ಸಹಾಯದೊಂದಿಗೆ ಮೊನಾಲಿಸಾ ತನ್ನ ಗೆಳೆಯನೊಂದಿಗೆ ಮದುವೆಯಾಗಿದ್ದಾಳೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Assembly elections: ಪ. ಬಂಗಾಳ ಅಂತಿಮ ಹಂತದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ. 61.1ರಷ್ಟು ಮತದಾನ: ಸಿಎಂ ಮಮತಾ ಬ್ಯಾನರ್ಜಿ ಸೇರಿ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರ

Silver Rate: ಬೆಳ್ಳಿ ಸಾರ್ವಕಾಲಿಕ ಕುಸಿತ; ಕೆಜಿಗೆ 2 ಲಕ್ಷ ರೂ ಇಳಿಕೆ, ಒಂದು ವರ್ಷದ ಲಾಭ ಖೋತಾ.. ರಾಜ್ಯದಲ್ಲಿನ ದರ ಪಟ್ಟಿ ಇಲ್ಲಿದೆ!

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ: ರೈತರು, ಪೊಲೀಸರ ನಡುವೆ ಘರ್ಷಣೆ

ಕುವೆಂಪು ವಿಶ್ವವಿದ್ಯಾಲಯದಲ್ಲಿ NSUI ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ; ಕುಲಪತಿಗಳೇ ಟಾರ್ಗೆಟ್! ಆಗಿದ್ದೇನು? Video

ವಿಶೇಷ ಏನೂ ಇಲ್ಲ.. ಒಳ್ಳೇ ಸುದ್ದಿ, ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ: ನಾಯಕತ್ವ ಬದಲಾವಣೆ ಕುರಿತು ಮಾಜಿ ಸಂಸದ DK Suresh ಮಾರ್ಮಿಕ ನುಡಿ

SCROLL FOR NEXT