ರಾಮನಾಥಪುರಂನಲ್ಲಿ ಧ್ವಜ ಅನಾವರಣ 
ದೇಶ

ಹೊಸ ಪಕ್ಷದ ಹೆಸರು ಘೋಷಿಸಿದ ಶಶಿಕಲಾ; ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧೆ

ಇಂದು ತಮ್ಮ ಹೊಸ ಪಕ್ಷದ ಹೆಸರು ಘೋಷಿಸಿದ್ದು, ಪಕ್ಷದ ಚಿಹ್ನೆ 'ತೆಂಗಿನ ತೋಟ' ಆಗಿರುತ್ತದೆ ಮತ್ತು ಇದು ಶ್ರಮಿಕರ ಸಂಕೇತವಾಗಿದೆ ಎಂದು ಶಶಿಕಲಾ ವರದಿಗಾರರಿಗೆ ತಿಳಿಸಿದ್ದಾರೆ.

ಚೆನ್ನೈ: ಇತ್ತೀಚಿಗಷ್ಟೇ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದ ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಅವರು ಶುಕ್ರವಾರ ತಮ್ಮ ನೂತನ ಪಕ್ಷದ ಹೆಸರು ಅಖಿಲ ಭಾರತ ಪುರಚ್ಚಿ ತಲೈವರ್ ಮಕ್ಕಳ್ ಮುನ್ನೇತ್ರ ಕಳಗಂ ಎಂದು ಘೋಷಿಸಿದ್ದಾರೆ..

ಫೆಬ್ರವರಿ 24 ರಂದು, ದಿವಂಗತ ಎಐಎಡಿಎಂಕೆ ಮುಖ್ಯಸ್ಥೆ ಜೆ ಜಯಲಲಿತಾ ಅವರ 74ನೇ ಜನ್ಮ ದಿನಾಚರಣೆಯಂದು, ಅವರ ಆಪ್ತ ಸಹಾಯಕಿಯಾಗಿದ್ದ ಶಶಿಕಲಾ ರಾಮನಾಥಪುರಂ ಜಿಲ್ಲೆಯ ಕಮುತಿಯಲ್ಲಿ ಪಕ್ಷದ ಧ್ವಜವನ್ನು ಅನಾವರಣಗೊಳಿಸಿದ್ದರು.

ಇಂದು ತಮ್ಮ ಹೊಸ ಪಕ್ಷದ ಹೆಸರು ಘೋಷಿಸಿದ್ದು, ಪಕ್ಷದ ಚಿಹ್ನೆ 'ತೆಂಗಿನ ತೋಟ' ಆಗಿರುತ್ತದೆ ಮತ್ತು ಇದು ಶ್ರಮಿಕರ ಸಂಕೇತವಾಗಿದೆ ಎಂದು ಶಶಿಕಲಾ ವರದಿಗಾರರಿಗೆ ತಿಳಿಸಿದ್ದಾರೆ.

ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಶಿಕಲಾ, ತಮ್ಮ ಪಕ್ಷವು ಮುಂಬರುವ ವಿಧಾನಸಭಾ ಚುನಾವಣೆಯನ್ನು ಇತರ ಪಕ್ಷಗಳೊಂದಿಗೆ ಮೈತ್ರಿಮಾಡಿಕೊಂಡು ಎದುರಿಸಲಿದೆ ಎಂದು ಹೇಳಿದರು.

"ನಾವು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ. ಕೆಲವರು ಏಕಾಂಗಿಯಾಗಿ ಸ್ಪರ್ಧಿಸಲು ಬಯಸುತ್ತಾರೆ. ಮೈತ್ರಿ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆದರೆ ನಾವು ಹಾಗಲ್ಲ. ತಮಿಳುನಾಡಿನ ಜನರಿಗೆ ನಾವು ಒಳ್ಳೆಯದನ್ನು ಮಾಡಬೇಕು ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ಹಸಿವಾಗ್ತಿದೆ.. ಪಕೋಡ ತಗೊಂಡ್ ಬಾ': ಬಸ್ ನಿಲ್ದಾಣದಲ್ಲಿ ಪತಿಯ ಕಳುಹಿಸಿ ಲವರ್ ಜೊತೆ ನವವಿವಾಹಿತೆ ಪರಾರಿ!

ಅನಿವಾರ್ಯ ಪರಿಸ್ಥಿತಿ, ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ, ಹೋಟೆಲ್‌ನವರು 1 ವಾರ ಸಹಿಸಿಕೊಳ್ಳಬೇಕು: ಸಚಿವ ಕೆ.ಎಚ್ ಮುನಿಯಪ್ಪ!

IPLಗೂ ತಟ್ಟಲಿದೆ ಯುದ್ಧದ ಬಿಸಿ: ಐಪಿಎಲ್ ಪಂದ್ಯ ಒಂದಕ್ಕೆ ಬೇಕು 3 ಸಾವಿರ ಲೀಟರ್ ಡೀಸೆಲ್; ಪಂದ್ಯಾವಳಿಗೆ ಬ್ರೇಕ್?

SCROLL FOR NEXT