ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಶನಿವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಜ್ಯೂನಿಯರ್ ಕಮಿಷನ್ಡ್ ಆಫೀಸರ್ (JCO) ಹುತಾತ್ಮರಾಗಿದ್ದಾರೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
ಆಪರೇಷನ್ ಶೇರಿ ಕಲಾನ್ನ ಭಾಗವಾಗಿ ಪೂಂಚ್ನ ಸಾಮಾನ್ಯ ಪ್ರದೇಶದಲ್ಲಿ ಸುದೀರ್ಘ ಕಾರ್ಯಾಚರಣೆಯ ಸಮಯದಲ್ಲಿ ಸವಾಲಿನ ಮತ್ತು ಒರಟಾದ ಭೂಪ್ರದೇಶದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ, ಸುಬೇದಾರ್ ಸಂದೀಪ್ ಕುಮಾರ್ ಢಾಕಾ ಜಾರಿಬಿದಿದ್ದಾರೆ.
ಕೂಡಲೇ ಅವರನ್ನು ತಕ್ಷಣವೇ ಪೋಥಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, JCO ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸೇನೆ ಪೋಸ್ಟ್ ಮಾಡಿದೆ.
ಈ ತೀವ್ರವಾದ ದು:ಖದ ಸಂದರ್ಭದಲ್ಲಿ ಆಗಲಿದ ಯೋಧನ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಕೊನೆಯ ಉಸಿರಿನವರೆಗೂ ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧನ ಸ್ಮರಣೆಯನ್ನು ಗೌರವಿಸುತ್ತೇವೆ" ಎಂದು ವೈಟ್ ನೈಟ್ ಕಾರ್ಪ್ಸ್ ಹೇಳಿದೆ.