ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!

ಪೊದೆಯಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಸೈನಿಕರು, ಭಯೋತ್ಪಾದಕನ್ನು ಸೆರೆಹಿಡಿಯಲು ಯತ್ನಿಸಿದರು. ಅಷ್ಟರಲ್ಲಿ ಭಯೋತ್ಪಾದಕ ಗುಂಡು ಹಾರಿಸಲು ಯತ್ನಿಸಿದ್ದಾನೆ. ಕೆಲಕಾಲ ಗುಂಡಿನಚಕಮಕಿ ನಡೆದಿದೆ.

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರನೊಬ್ಬನನ್ನು ಹತ್ಯೆ ಮಾಡಿದ್ದು, ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಫೋಸ್ಟ್ ಮಾಡಿದ್ದು, ಮಾರ್ಚ್ 14 ಹಾಗೂ 15 ರ ರಾತ್ರಿ ಭಯೋತ್ಪಾದಕನು ಒಳನುಸುಳುವಿಕೆಗೆ ಯತ್ನಿಸುತ್ತಾನೆ ಎಂಬ, ಜಮ್ಮು ಕಾಶ್ಮೀರ ಪೊಲೀಸರ ನಿಖರ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಲಾಯಿತು ಎಂದು ತಿಳಿಸಿದೆ.

ಪೊದೆಯಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಸೈನಿಕರು, ಭಯೋತ್ಪಾದಕನ್ನು ಸೆರೆಹಿಡಿಯಲು ಯತ್ನಿಸಿದರು. ಅಷ್ಟರಲ್ಲಿ ಭಯೋತ್ಪಾದಕ ಗುಂಡು ಹಾರಿಸಲು ಯತ್ನಿಸಿದ್ದಾನೆ. ಕೆಲಕಾಲ ಗುಂಡಿನಚಕಮಕಿ ನಡೆದಿದೆ.

ಈ ವೇಳೆ ಒಬ್ಬ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಗಳು ಎಕೆ ರೈಫಲ್ಸ್ ಪಿಸ್ತೂಲ್ ಗಳು, ಹಾಗೂ ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿವೆ. ಆ ಸ್ಥಳದಲ್ಲೇ ಸುತ್ತಮುತ್ತ ಇರಬಹುದಾದ ಭಯೋತ್ಪಾದಕರ ಹುಡುಕಾಟದ ಮಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

SCROLL FOR NEXT