ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ 
ದೇಶ

ಬಂಗಾಳ ಚುನಾವಣೆ: 144 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಮತ್ತೆ ಮಮತಾ ವಿರುದ್ಧ ಸುವೇಂದು ಕಣಕ್ಕೆ

2021ರಲ್ಲಿ ನಂದಿಗ್ರಾಮ್ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು 1,956 ಮತಗಳಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದ ಸುವೇಂದು ಅಧಿಕಾರಿ ಅವರನ್ನು ಈಗ ಮತ್ತೆ ದೀದಿ ವಿರುದ್ಧ ಕಣಕ್ಕಿಳಿಸಲಾಗಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ಮರುದಿನವೇ ಭಾರತೀಯ ಜನತಾ ಪಕ್ಷ ಸೋಮವಾರ 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷೇತ್ರವಾದ ಕೋಲ್ಕತ್ತಾದ ಭಬಾನಿಪುರದಿಂದ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರನ್ನು ಕಣಕ್ಕಿಳಿಸಿದೆ.

2021ರಲ್ಲಿ ಪುರ್ಬಾ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ್ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು 1,956 ಮತಗಳಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದ ಸುವೇಂದು ಅಧಿಕಾರಿ ಅವರನ್ನು ಈಗ ಮತ್ತೆ ದೀದಿ ವಿರುದ್ಧ ಕಣಕ್ಕಿಳಿಸಲಾಗಿದೆ.

ನಂದಿಗ್ರಾಮದಲ್ಲಿ ಸೋಲು ಅನುಭವಿಸಿದ್ದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಂತರ ಉಪಚುನಾವಣೆಯಲ್ಲಿ ಭಬಾನಿಪುರದಿಂದ ಗೆಲುವು ಸಾಧಿಸಿದ್ದರು.

ಪಟ್ಟಿಯ ಪ್ರಕಾರ, ದಿಲೀಪ್ ಘೋಷ್ ಅವರನ್ನು ಖರಗ್‌ಪುರ ಸದರ್‌ನಿಂದ, ಬಿಮನ್ ಮಹ್ತೊ ಅವರನ್ನು ಸಲ್ಬೋನಿಯಿಂದ ಕಣಕ್ಕಿಳಿಸಲಾಗಿದೆ. ಸ್ವಪನ್ ದಾಸ್‌ಗುಪ್ತ ಅವರನ್ನು ದಕ್ಷಿಣ ಕೋಲ್ಕತ್ತಾದ ರಾಸ್‌ಬೆಹಾರಿ ಸ್ಥಾನದಿಂದ ಕಣಕ್ಕಿಳಿಸಲಾಗಿದೆ. ಪುರ್ಬಾ ಮೇದಿನಿಪುರ ಜಿಲ್ಲೆಯ ಕಾಂತಿ ಉತ್ತರದಿಂದ ಸುಮಿತಾ ಸಿನ್ಹಾ, ಹೂಗ್ಲಿ ಜಿಲ್ಲೆಯ ಪುರ್ಸುರಾದಿಂದ ಬಿಮನ್ ಘೋಷ್ ಮತ್ತು ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಿಂದ ಮಾಧವಿ ಮಹಲ್ದರ್ ಅವರು ಸ್ಪರ್ಧಿಸಲಿದ್ದಾರೆ.

ಪಟ್ಟಿಯ ಪ್ರಕಾರ ಅನಿಮಾ ದತ್ತ ಅವರನ್ನು ನಾಡಿಯಾ ಜಿಲ್ಲೆಯ ಪಲಾಶಿಪಾರದಿಂದ ಕಣಕ್ಕಿಳಿಸಲಾಗಿದೆ. ಆದರೆ ಲಕ್ಷಿಕಾಂತ್ ಸಾಹು ಅವರನ್ನು ಜಾರ್ಗ್ರಾಮ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.

ಪಶ್ಚಿಮ ಬಂಗಾಳದ 294 ಸ್ಥಾನಗಳಿಗೆ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Strait of Hormuz ನಲ್ಲಿ ನೌಕಾಪಡೆ ನಿಯೋಜನೆ ಕುರಿತು ಅಮೆರಿಕ ಜತೆ ದ್ವಿಪಕ್ಷೀಯ ಮಾತುಕತೆ ಇಲ್ಲ': ಭಾರತ

Video: ಭಾರತಕ್ಕೆ ಬಿಗ್‌ ರಿಲೀಫ್‌; ಹಾರ್ಮುಜ್ ಜಲಸಂಧಿ ಮೂಲಕ ಗುಜರಾತ್ ತಲುಪಿದ LPG ಹೊತ್ತ ಶಿವಾಲಿಕ್ ನೌಕೆ!

'ಸೀನಿದರೂ ದೂಷಿಸುತ್ತಾರೆ': ನಟಿ Trisha ಬೆನ್ನಿಗೆ ನಿಂತ ನಟಿ ಖುಷ್ಬು

Video: 'ಮೀಸಲಾತಿನೇ ಮೆರಿಟ್, ಟ್ಯಾಲೆಂಟ್!' 'ಕ್ರಿಕೆಟ್ ನಲ್ಲೂ ರಿಸರ್ವೇಷನ್ ಬೇಕೇ ಬೇಕು': ನಟ ಚೇತನ್ ಅಹಿಂಸಾ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟೆಸ್ಟ್ ನಿವೃತ್ತಿಗೆ ಆ 'ತಪ್ಪು' ಕಾರಣ? : Gautam Gambhir ಶಾಕಿಂಗ್ ಸುಳಿವು!

SCROLL FOR NEXT