ಕಾಂಗ್ರೆಸ್ ಸಂಸದ ನಾಸಿರ್ ಹುಸೇನ್  
ದೇಶ

'The Kerala Story 2': ಮುಸ್ಲಿಂರ ಬಹಿಷ್ಕಾರಕ್ಕೆ ಹಿಂದೂಗಳ ಪ್ರತಿಜ್ಞೆ! ಕಾಂಗ್ರೆಸ್ ಸಂಸದ ನಾಸಿರ್ ಹುಸೇನ್ ಕಿಡಿ

ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ 2' ವೀಕ್ಷಿಸಿದ ನಂತರ ಒಂದು ಗುಂಪು ಮುಸ್ಲಿಮರನ್ನು ಬಹಿಷ್ಕರಿಸುವ ಶಪಥ ಮಾಡಿರುವುದು ವಿಡಿಯೋದಲ್ಲಿದೆ.

ಪಾಲ್ಘರ್: ಇತ್ತೀಚಿಗೆ ಬಿಡುಗಡೆಯಾದ 'ದಿ ಕೇರಳ ಸ್ಟೋರಿ 2' ವೀಕ್ಷಣೆ ಬಳಿಕ ಹಿಂದೂಗಳು, ಮುಸ್ಲಿಂರನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಬಹಿಷ್ಕರಿಸುವ ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಭಾರಿ ಚರ್ಚೆಯಾಗುತ್ತಿದೆ.

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಚಿತ್ರಮಂದಿರದಲ್ಲಿ ಮಾರ್ಚ್ 10 ರಂದು ಈ ವಿಡಿಯೋ ಶೂಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ಹೇಳಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮೀರಾ-ಭಯಂದರ್ ವಸಾಯಿ-ವಿರಾರ್ (MBVV)ಪೊಲೀಸ್ ಕಮಿಷನರೇಟ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ವೀಡಿಯೊದ ಸತ್ಯಾಸತ್ಯತೆ ಇನ್ನೂ ಖಚಿತವಾಗಿಲ್ಲ ಎಂದು ತಿಳಿಸಿದ್ದಾರೆ.

ಅದನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಖಚಿತವಾಗಿಲ್ಲ. ಕೆಲವರು ಕಿಡಿಗೇಡಿಗಳು ಇದನ್ನು ಮಾಡಿರಬಹುದು ಎಂದಿದ್ದಾರೆ.

ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ 2' ವೀಕ್ಷಿಸಿದ ನಂತರ ಒಂದು ಗುಂಪು ಮುಸ್ಲಿಮರನ್ನು ಬಹಿಷ್ಕರಿಸುವ ಶಪಥ ಮಾಡಿರುವುದು ವಿಡಿಯೋದಲ್ಲಿದೆ ಎಂದು ಕಾಂಗ್ರೆಸ್ ಸಂಸದ ಸಯ್ಯದ್ ನಾಸೀರ್ ಹುಸೇನ್ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಮುಸ್ಲಿಂರ ಟಾರ್ಗೆಟ್ ಹಾಗೂ ಕೋಮು ವಿಭಜನೆ ಮುಂದುವರೆದಿದೆ. ಸಿನಿಮಾವನ್ನು ಒಂದು ಸಮುದಾಯದ ರಾಜಕೀಯ ಆಸ್ತ್ರವಾಗಿ ಬಳಸಿಕೊಂಡಾಗ ಪೂರ್ವಾಗ್ರಹವನ್ನು ಸಂಘಟಿತ ತಾರತಮ್ಯವಾಗಿ ಪರಿವರ್ತಿಸುವ ಅಪಾಯವನ್ನುಂಟುಮಾಡುತ್ತದೆ ಮತ್ತು ಮುಸ್ಲಿಂ ವಿರೋಧಿ ಭಾವನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಭಾರತದ ಪ್ರಜಾಸತ್ತಾತ್ಮಕ ನೀತಿಯು ಜಾತ್ಯತೀತತೆ, ಸಮಾನತೆ ಮತ್ತು ಭ್ರಾತೃತ್ವದ ಮೇಲೆ ದೃಢವಾಗಿ ನಿಂತಿದೆ. ಯಾವುದೇ ಸಮುದಾಯವನ್ನು ಆರ್ಥಿಕ ಅಥವಾ ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಮ್ಮ ಸಂವಿಧಾನದಲ್ಲಿ ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರೊಬ್ಬರು, ಮುಸ್ಲಿಂ ರಾಷ್ಟ್ರಗಳಿಂದ ಇಂಧನ ಮತ್ತು ತೈಲ ಬರುತ್ತವೆ. ಗಣಿತಕ್ಕೂ ಮುಸ್ಲಿಮರ ಕೊಡುಗೆ ಇದೆ. ಈಗ ಅವರು ಪೆಟ್ರೋಲ್, ಡೀಸೆಲ್ ಮತ್ತು ಗಣಿತವನ್ನು ಬಹಿಷ್ಕರಿಸುತ್ತಾರೆಯೇ?" ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ

'ಅನಾಗರಿಕ, ಹೇಡಿತನದ ಕೃತ್ಯ': ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ ಖಂಡಿಸಿದ ಭಾರತ

'ನನಗೆ ನಯನಾತಾರಾ ಬೇಕು! ಈ ಕನಸು ನನಸು ಮಾಡುವಿರಾ? ವಿವಾದ ಮೈ ಮೇಲೆ ಎಳೆದುಕೊಂಡ AIADMK ನಾಯಕ!

Iris Dena ನಾವಿಕರ ಹತ್ಯೆ: ಡೆಡ್ಲಿ ಪ್ರತೀಕಾರಕ್ಕಾಗಿ ಕಾಯುತ್ತಿದ್ದೇವೆ, ಯಾವಾಗ, ಏನು ಎಂಬ ಗುಟ್ಟು ಬಿಟ್ಟುಕೊಡದ ಇರಾನ್!

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

SCROLL FOR NEXT