ಟಿವಿಕೆ ವಿಜಯ್  
ದೇಶ

‘ಸಾಮಾಜಿಕ ನ್ಯಾಯ ಸಿದ್ಧಾಂತಗಳಲ್ಲಿ ಯಾವುದೇ ರಾಜಿ ಇಲ್ಲ’: ಬಿಜೆಪಿ ಜೊತೆ ಮೈತ್ರಿ ವದಂತಿ ತಳ್ಳಿಹಾಕಿದ TVK ವಿಜಯ್-Video

ಅಧಿಕಾರಕ್ಕೆ ಬಂದರೆ ತಮ್ಮ ಪಕ್ಷ ಏಕಾಂಗಿಯಾಗಿ ಸರ್ಕಾರವನ್ನು ಮುನ್ನಡೆಸುತ್ತದೆ. ಪಕ್ಷದ ಮೊದಲ ರಾಜ್ಯ ಸಮ್ಮೇಳನದಲ್ಲೇ ನಾನು ಹೇಳಿದಂತೆ, ನಮ್ಮ ರಾಜಕೀಯದಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ. ಸುಳ್ಳು ಪ್ರಚಾರವನ್ನು ನಂಬಬೇಡಿ. ದೇವರ ಆಶೀರ್ವಾದದಿಂದ ನಾವು ನಮ್ಮ ಗುರಿಯನ್ನು ಸಾಧಿಸುತ್ತೇವೆ ಎಂದರು.

ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಿ (NDA) ಜೊತೆ ಮೈತ್ರಿ ಮಾಡುವ ಸಾಧ್ಯತೆಗಳ ಕುರಿತ ವದಂತಿಗಳನ್ನು ತಳ್ಳಿಹಾಕಿದ ಪಕ್ಷದ ಅಧ್ಯಕ್ಷ ವಿಜಯ್, ತಮ್ಮ ಪಕ್ಷದ ಧರ್ಮನಿರಪೇಕ್ಷ ಸಾಮಾಜಿಕ ನ್ಯಾಯ ಸಿದ್ಧಾಂತಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಚೆನ್ನೈಗೆ ದಕ್ಷಿಣಕ್ಕೆ ಸುಮಾರು 60 ಕಿಮೀ ದೂರದಲ್ಲಿರುವ ಮಾಮಲ್ಲಾಪುರಂನಲ್ಲಿ ನಡೆದ ಪಕ್ಷದ ಇಫ್ತಾರ್ ಕಾರ್ಯಕ್ರಮದಲ್ಲಿ ಮಾತನಾಡಿದ ದಳಪತಿ ವಿಜಯ್ , ರಾಜಕೀಯಕ್ಕೆ ಪ್ರವೇಶಿಸಿದ ಮೊದಲ ದಿನದಿಂದಲೇ ತಮ್ಮ ಪಕ್ಷವನ್ನು ಬೇರೆ ಪಕ್ಷಗಳ ಪರೋಕ್ಷ ಅಂಗವೆಂದು ಹಲವಾರು ವದಂತಿಗಳು ಹರಡಲ್ಪಟ್ಟಿವೆ ಎಂದು ಹೇಳಿದರು. ನಾವು ಈ ತಂಡದವರು, ಆ ತಂಡದವರು ಎಂಬಂತೆ ವದಂತಿಗಳು ಹರಡುತ್ತಿವೆ. ಆದರೆ ನಾವು ಯಾವುದೇ ತಂಡಕ್ಕೆ ಸೇರಿದವರಲ್ಲ; ನಾವು ಜನರ ತಂಡಕ್ಕೆ ಮಾತ್ರ ಸೇರಿದವರು ಎಂದರು.

ನಮ್ಮ ವಿರುದ್ಧ ಬೇರೆ ರೀತಿಯ ಅಪಪ್ರಚಾರಗಳನ್ನು ನಡೆಸಲು ಪ್ರಯತ್ನಿಸಿದರು, ಆದರೆ ಅವು ಯಾವುದೂ ಯಶಸ್ವಿಯಾಗಲಿಲ್ಲ. ಕೊನೆಯಲ್ಲಿ ನಾವು ಮೈತ್ರಿಗೆ ಸೇರುತ್ತಿದ್ದೇವೆ ಎಂಬ ಸುಳ್ಳು ಪ್ರಚಾರ ಆರಂಭಿಸಿದರು. ಇಂತಹ ಸುದ್ದಿಗಳನ್ನು ಕೇಳಿ ನೀವು ಗೊಂದಲಕ್ಕೊಳಗಾಗಬಹುದು. ಮತ್ತೆ ಸ್ಪಷ್ಟಪಡಿಸುತ್ತೇನೆ, ನಾವು ಸದಾ ಧರ್ಮನಿರಪೇಕ್ಷ ಸಾಮಾಜಿಕ ನ್ಯಾಯದ ಸಿದ್ಧಾಂತಗಳನ್ನು ಯಾವುದೇ ರಾಜಿಯಿಲ್ಲದೆ ಅನುಸರಿಸುತ್ತೇವೆ ಎಂದರು.

ಅಧಿಕಾರಕ್ಕೆ ಬಂದರೆ ತಮ್ಮ ಪಕ್ಷವೇ ಸರ್ಕಾರವನ್ನು ಮುನ್ನಡೆಸುತ್ತದೆ. ಪಕ್ಷದ ಮೊದಲ ರಾಜ್ಯ ಸಮ್ಮೇಳನದಲ್ಲೇ ನಾನು ಹೇಳಿದಂತೆ, ನಮ್ಮ ರಾಜಕೀಯದಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ. ಸುಳ್ಳು ಪ್ರಚಾರವನ್ನು ನಂಬಬೇಡಿ. ದೇವರ ಆಶೀರ್ವಾದದಿಂದ ನಾವು ನಮ್ಮ ಗುರಿಯನ್ನು ಸಾಧಿಸುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಅಮೇರಿಕಾದಲ್ಲಿ ರಿಲಯನ್ಸ್ ಹೂಡಿಕೆಯೆಷ್ಟು ಸರಿ? (ಹಣಕ್ಲಾಸು)

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

SCROLL FOR NEXT